AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಉತ್ತರಾಖಂಡ ವಿರುದ್ಧ ಇನ್ನಿಂಗ್ಸ್ ಜಯದೊಂದಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಕರ್ನಾಟಕ ರಣಜಿ ತಂಡವು ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರಾಖಂಡ ತಂಡವನ್ನು ಮಣಿಸಿ ಸೆಮಿಫೈನಲ್​ ಪ್ರವೇಶಿಸಿದೆ.

Ranji Trophy: ಉತ್ತರಾಖಂಡ ವಿರುದ್ಧ ಇನ್ನಿಂಗ್ಸ್ ಜಯದೊಂದಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ
TV9 Web
| Edited By: |

Updated on: Feb 03, 2023 | 4:29 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣಜಿ ಕ್ರಿಕೆಟ್ ಟ್ರೋಫಿ (Ranji Trophy) ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ (Karnataka Ranji Team) ಉತ್ತರಾಖಂಡ(Uttarakhand) ವಿರುದ್ಧ ಇನ್ನಿಂಗ್ಸ್ ಮತ್ತು 281 ರನ್‌ಗಳ ಭರ್ಜರಿ ಜಯಗಳಿಸಿದೆ. ಈ ಮೂಲಕ ಪಂದ್ಯ ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸೆಮಿಫೈನಲ್‌ ಲಗ್ಗೆ ಇಟ್ಟಿದೆ.

ಮೊದಲು ಬ್ಯಾಟಿಂಗ್ ಮಾಡಿದ ಉತ್ತರಾಖಂಡ ತಂದ ಫಸ್ಟ್ ಇನ್ನಿಂಗ್ಸ್‌ನಲ್ಲಿ ಕೇವಲ 116 ರನ್‌ಗಳಿಗೆ ಆಲೌಟ್ ಆಗಿತ್ತು. ಬಳಿಕ ಬ್ಯಾಟಿಂಗ್ ಆರಂಬಿಸಿದ್ದ ಕರ್ನಾಟಕ ಆಲ್ರೌಂಡರ್‌ ಶ್ರೇಯಸ್‌ ಗೋಪಾಲ್‌ 161 ರನ್‌ಗಳ ಅಮೋಘ ಆಟದ ನೆರವಿನಿಂದ ಉತ್ತರಾಖಂಡ ವಿರುದ್ಧ ಮೊದಲ ಇನ್ನಿಂಗ್ಸ್​ನ ಲ್ಲಿ 606 ರನ್‌ ಕಲೆಹಾಕಿತ್ತು. ಇದರೊಂದಿಗೆ ಕರ್ನಾಟಕ 490 ರನ್‌ ಮುನ್ನಡೆ ಸಾಧಿಸಿತ್ತು. 4ನೇ ದಿನವಾದ ಇಂದು (ಶುಕ್ರವಾರ) ಎದುರಾಳಿಯನ್ನು 281 ರನ್​ಗೆ ಆಲೌಟ್‌ ಮಾಡಿ ಇನ್ನಿಂಗ್ಸ್​ ಜಯದೊಂದಿಗೆ ಸೆಮಿಫೈನಲ್‌ ಪ್ರವೇಶಿಸಿದೆ.

ಕರ್ನಾಟಕ ರಣಜಿ ತಂಡದಲ್ಲಿ ಪದಾರ್ಪಣ ಪಂದ್ಯವನ್ನಾಡಿದ ಮೈಸೂರಿನ ವೇಗಿ ಮುರಳೀಧರ ವೆಂಕಟೇಶ್ 5 ವಿಕೆಟ್ ಪಡೆಯುವ ಮೂಲಕ ಉತ್ತರಾಖಂಡಕ್ಕೆ ಮಾರಕವಾದರು. ಕೃಷ್ಣಪ್ಪ ಗೌತಮ್ ಮತ್ತು ವಿಧ್ವತ್ ಕಾವೇರಪ್ಪ ತಲಾ ಎರಡು ವಿಕೆಟ್ ಪಡೆದರೆ, ವಿಜಯ್ ಕುಮಾರ್ ವೈಶಾಕ್ 1 ವಿಕೆಟ್ ಪಡೆದಿದ್ದರು. ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಕರ್ನಾಟಕ ಉತ್ತರಾಖಂಡದ ಬೌಲರ್ ಗಳ ಬೆವರಿಳಿಸಿದರು. ಶ್ರೇಯಸ್ ಗೋಪಾಲ್ ಶತಕ ಗಳಿಸುವ ಮೂಲಕ ಮಿಂಚಿದರು.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ