AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 304 ರನ್​ಗೆ ಕರ್ನಾಟಕ ಆಲೌಟ್: 100 ರನ್​ಗು ಮೊದಲೇ ಸರ್ವಿಸಸ್ 4 ವಿಕೆಟ್ ಪತನ

Karnataka vs Services: ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡದ ಆರಂಭ ಚೆನ್ನಾಗಿರಲಿಲ್ಲ. ಓಪನರ್​ಗಳಾದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ಸಮರ್ಥ್ ಆರ್ ತಲಾ 8 ರನ್​ಗೆ ನಿರ್ಗಮಿಸಿದರು.

Ranji Trophy: 304 ರನ್​ಗೆ ಕರ್ನಾಟಕ ಆಲೌಟ್: 100 ರನ್​ಗು ಮೊದಲೇ ಸರ್ವಿಸಸ್ 4 ವಿಕೆಟ್ ಪತನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 15, 2022 | 11:25 AM

Share

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ (Ranji Trophy) ಪಂದ್ಯದಲ್ಲಿ ಸರ್ವಿಸಸ್ ವಿರುದ್ಧ ಕರ್ನಾಟಕ (Karnataka vs Services) ತಂಡ ಬೊಂಬಾಟ್ ಆಟ ಪ್ರದರ್ಶಿಸುತ್ತಿದೆ. ಮೊದಲು ಬ್ಯಾಟ್ ಮಾಡಿದ ರಾಜ್ಯ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ನಿಕಿನ್ ಜೋಸ್ ಹಾಗೂ ಶರತ್ ಬಿಆರ್ (Sharath BR) ಅವರ ಅರ್ಧಶತಕದ ನೆರವಿನಿಂದ 304 ರನ್ ಕಲೆಹಾಕಿತು. ಇದೀಗ ಸರ್ವಿಸಸ್ ತನ್ನ ಮೊದಲ ಇನ್ನಿಂಗ್ಸ್ ಶುರು ಮಾಡಿದ್ದು 100 ರನ್​ ಆಗುವ ಹೊತ್ತಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡದ ಆರಂಭ ಚೆನ್ನಾಗಿರಲಿಲ್ಲ. ಓಪನರ್​ಗಳಾದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ಸಮರ್ಥ್ ಆರ್ ತಲಾ 8 ರನ್​ಗೆ ನಿರ್ಗಮಿಸಿದರು. ನಂತರ ಜೊತೆಯಾದ ವಿಶಾಲ್ ಓನತ್ ಮತ್ತು ನಿಕಿನ್ ಜೋಸ್ ತಂಡಕ್ಕೆ ಆಸರೆಯಾಗಿ ನಿಂತರು. ಈ ಜೋಡಿ 84 ರನ್​ಗಳ ಕಾಣಿಕೆ ನೀಡಿತು. ವಿಶಾಲ್ 79 ಎಸೆತಗಳಲ್ಲಿ 33 ರನ್ ಗಳಿಸಿದರು. ಅನುಭವಿ ಮನೀಶ್ ಪಾಂಡೆ 10 ರನ್ ಹಾಗೂ ಶ್ರೇಯಸ್ ಗೋಪಾಲ್ ಸೊನ್ನೆ ಸುತ್ತಿದ್ದು ತಂಡಕ್ಕೆ ಹಿನ್ನಡೆ ಆಯಿತು.

ಐಪಿಎಲ್​ ತಂಡವನ್ನೇ ಖರೀದಿಸುವ ಸಾಮರ್ಥ್ಯ ಹೊಂದಿರುವ ಮೆಸ್ಸಿ ಎಷ್ಟು ಸಾವಿರ ಕೋಟಿಯ ಒಡೆಯ ಗೊತ್ತಾ?

ಇದನ್ನೂ ಓದಿ
Image
IND vs BAN: 3 ಜೀವದಾನ ಸಿಕ್ಕರೂ ಶತಕ ಸಿಡಿಸದ ಶ್ರೇಯಸ್; ಆದರೂ ಎರಡೆರಡು ದಾಖಲೆ ಸೃಷ್ಟಿ..!
Image
INDW vs AUSW: ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿದ ಆಸೀಸ್: ಭಾರತೀಯ ಮಹಿಳೆಯರಿಗೆ ಎರಡನೇ ಸೋಲು
Image
FIFA World Cup 2022: ಸೆಮೀಸ್​ನಲ್ಲಿ ಮೊರಕ್ಕೊಗೆ ಸೋಲು: ಫಿಫಾ ಫೈನಲ್​ನಲ್ಲಿ ಫ್ರಾನ್ಸ್-ಅರ್ಜೆಂಟೀನಾ ಸೆಣೆಸಾಟ
Image
Kane Williamson: ನ್ಯೂಜಿಲ್ಯಾಂಡ್ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದ ಕೇನ್ ವಿಲಿಯಮ್ಸನ್

ನಿಕಿನ್ ಜೋಶ್ ಕೂಡ 83 ಎಸೆತಗಳಲ್ಲಿ 62 ರನ್ ಬಾರಿಸಿ ಔಟಾದರು. ಹೀಗೆ 133 ರನ್​ಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭ ತಂಡಕ್ಕೆ ಆಧಾರವಾಗಿದ್ದು ಶರತ್ ಬಿಆರ್ ಹಾಗೂ ಕೃಷ್ಣಪ್ಪ ಗೌತಮ್. ಶತಕದ ಜೊತೆಯಾಟ ಆಡಿದ ಈ ಜೋಡಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿತು. ಶರತ್ 115 ಎಸೆತಗಳಲ್ಲಿ 77 ರನ್ ಸಿಡಿಸಿದರೆ, ಗೌತಮ್ 52 ಎಸೆತಗಳಲ್ಲಿ 48 ರನ್​ಗೆ ಔಟಾಗುವ ಮೂಲಕ ಅರ್ಧಶತಕ ವಂಚಿತರಾದರು. ರೋನಿತ್ ಮೋರೆ 41 ಬಾಲ್​ಗಳಲ್ಲಿ 26 ರನ್​ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಕರ್ನಾಟಕ 74.4 ಓವರ್​ಗಳಲ್ಲಿ 304 ರನ್​ಗೆ ಆಲೌಟ್ ಆಯಿತು. ಸರ್ನಿಸಸ್ ಪರ ದಿವೇಶ್ ಪಥಾನಿಯ 5 ಹಾಗೂ ಪುಲ್ಕಿತ್ ನರಂಗ್ 3 ವಿಕೆಟ್ ಪಡೆದು ಮಿಂಚಿದರು.

ಇತ್ತ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಸರ್ವಿಸಸ್ ತಂಡ ಮೊದಲ ಓವರ್​ನಲ್ಲೇ ಎರಡು ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿತು. ಶುಭಂ ರೋಹಿಲ 8 ರನ್​ಗೆ ಹಾಗೂ ಗೌಲತ್ ರಾಹುಲ್ ಸಿಂಗ್ ಸೊನ್ನೆ ಸುತ್ತಿದರು. ಅನ್ಶುಲ್ ಗುಪ್ತಾ ಕೂಡ ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡರು. ದೇವೆಂದರ್ 6 ರನ್​ಗೆ ನಿರ್ಗಮಿಸಿದರು. ಈ ಮೂಲಕ 100 ರನ್​ಗೂ ಮೊದಲೇ ಸರ್ವಿಸಸ್ ತಂಡ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ತಂಡಕ್ಕೆ ಇದೀಗ ರವಿ ಚೌಹಾಣ್ ಹಾಗೂ ನಾಯಕ ರಜತ್ ಪಲಿವಾಲ್ ಆಸರೆಯಾಗಿ ನಿಂತಿದ್ದಾರೆ. ಕರ್ನಾಟಕ ಪರ ವಿದ್ವತ್ ಕಾವೇರಪ್ಪ 3 ವಿಕೆಟ್ ಪಡೆದುಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:25 am, Thu, 15 December 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ