Ranji Trophy 2022: ಕೈಕೊಟ್ಟ ಬ್ಯಾಟ್ಸ್​ಮನ್​ಗಳು: ರಣಜಿ ಟೂರ್ನಿಯಿಂದ ಕರ್ನಾಟಕ ತಂಡ ಔಟ್

Karnataka vs Uttar Pradesh: ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿ ಮೇಲುಗೈ ಸಾಧಿಸಿದ ಉತ್ತರ ಪ್ರದೇಶದ ಬೌಲರ್​ಗಳು ಆ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಪರಿಣಾಮ ಮನೀಷ್ ಪಾಂಡೆ (4) ರನೌಟ್ ಆದರೆ, ಶ್ರೇಯಸ್ ಗೋಪಾಲ್ 3 ರನ್​ಗಳಿಸಿ ಔಟಾದರು.

Ranji Trophy 2022: ಕೈಕೊಟ್ಟ ಬ್ಯಾಟ್ಸ್​ಮನ್​ಗಳು: ರಣಜಿ ಟೂರ್ನಿಯಿಂದ ಕರ್ನಾಟಕ ತಂಡ ಔಟ್
Karnataka vs Uttar Pradesh
Follow us
| Updated By: ಝಾಹಿರ್ ಯೂಸುಫ್

Updated on: Jun 08, 2022 | 5:38 PM

ಆಲೂರಿನ ಕೆಎಸ್‌ಸಿಎ ಮೈದಾನದಲ್ಲಿ ನಡೆದ ಉತ್ತರ ಪ್ರದೇಶ ತಂಡದ ವಿರುದ್ದದ ರಣಜಿ ಕ್ವಾರ್ಟರ್‌ಫೈನಲ್ (Ranji Trophy 2022, Quarterfinals) ಪಂದ್ಯದಲ್ಲಿ ಕರ್ನಾಟಕ ತಂಡವು 5 ವಿಕೆಟ್​ಗಳಿಂದ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಈ ಬಾರಿ ರಣಜಿ ಕಿರೀಟ ಮುಡಿಗೇರಿಸಿಕೊಳ್ಳುವ ಕರ್ನಾಟಕ ತಂಡದ ಕನಸು ಕೂಡ ಕಮರಿದೆ. ಮೊದಲ ಇನಿಂಗ್ಸ್​ನಲ್ಲಿ 253 ರನ್​ ಬಾರಿಸಿದ್ದ ಕರ್ನಾಟಕ ತಂಡವು 2ನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ವೈಫಲ್ಯಕ್ಕೊಳಗಾಗಿತ್ತು. ಪಂದ್ಯದ 2ನೇ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು 8 ವಿಕೆಟ್​ ಕಳೆದುಕೊಂಡು ಕೇವಲ 100 ರನ್​ ಮಾತ್ರ ಗಳಿಸಿತ್ತು. ಅಲ್ಲದೆ 3ನೇ ದಿನದಾಟದಲ್ಲಿ ಕೇವಲ 14 ರನ್​ಗಳಿಸುವಷ್ಟರಲ್ಲಿ 2 ವಿಕೆಟ್​ ಕಳೆದುಕೊಂಡು 114 ರನ್​ಗಳಿಗೆ ಸರ್ಪಪತನ ಕಂಡಿತು. ಮೊದಲ ಇನಿಂಗ್ಸ್​ನಲ್ಲಿನ 98 ರನ್​ಗಳ ಮುನ್ನಡೆ ಪಡೆದಿದ್ದ ಕರ್ನಾಟಕ, ಉತ್ತರ ಪ್ರದೇಶ ತಂಡಕ್ಕೆ 2ನೇ ಇನಿಂಗ್ಸ್​ನಲ್ಲಿ  212 ರನ್​ಗಳ ಗುರಿ ನೀಡಿತು.

ಈ ಸಾಧಾರಣ ಗುರಿ ಬೆನ್ನತ್ತಿದ ಉತ್ತರ ಪ್ರದೇಶ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಕರ್ನಾಟಕದ ಬೌಲರ್​ಗಳು ಯಶಸ್ವಿಯಾಗಿದ್ದರು. 28 ರನ್​ಗಳಿಸುವಷ್ಟರಲ್ಲಿ ಆರಂಭಿಕರನ್ನು ಪೆವಿಲಿಯನ್​ಗೆ ಕಳುಹಿಸಿದ ಕರ್ನಾಟಕ ವೇಗಿಗಳನ್ನು ಆ ಬಳಿಕ ಪ್ರಿಯಂ ಗರ್ಗ್ ಉತ್ತಮವಾಗಿ ಎದುರಿಸಿದರು. ಪರಿಣಾಮ ಗರ್ಗ್​ 60 ಎಸೆತಗಳಲ್ಲಿ ಬಿರುಸಿನ 52 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಆ ಬಳಿಕ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿ ಮಿಂಚಿದ ಕರ್ನಾಟಕದ ಬೌಲರ್​ಗಳು ಉತ್ತರ ಪ್ರದೇಶ ತಂಡವು 114 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಬಳಿಸಿ ಕಂಬ್ಯಾಕ್ ಮಾಡುವ ಪ್ರಯತ್ನ ಮಾಡಿದ್ದರು.

ಆದರೆ ಈ ಹಂತದಲ್ಲಿ ಕಣಕ್ಕಿಳಿದ ಉತ್ತರ ಪ್ರದೇಶದ ನಾಯಕ ಕರಣ್ ಶರ್ಮಾ 163 ಎಸೆತಗಳಲ್ಲಿ ಅಜೇಯ 93 ರನ್​ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ಅಲ್ಲದೆ ಏಕಾಂಗಿಯಾಗಿ ತಂಡವನ್ನು ಗೆಲುವಿನ ದಡ ಸೇರಿಸುವ ಮೂಲಕ ಕರ್ನಾಟಕ ತಂಡಕ್ಕೆ 5 ವಿಕೆಟ್​ಗಳ ಸೋಲುಣಿಸಿದರು.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಇದಕ್ಕೂ ಮುನ್ನ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಉತ್ತರಪ್ರದೇಶ ತಂಡದ ನಾಯಕ ಕರಣ್ ಶರ್ಮಾ ನಿರ್ಧಾರವನ್ನು ಸಮರ್ಥಿಸುವಂತೆ ಬೌಲರ್​ಗಳು ಅತ್ಯುತ್ತಮ ಬೌಲಿಂಗ್​ ಪ್ರದರ್ಶಿಸಿದ್ದರು. ಪರಿಣಾಮ ಕರ್ನಾಟಕ ತಂಡದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಕೇವಲ 10 ರನ್‌ಗೆ ಶಿವಂ ಮಾವಿ ಎಸೆತದಲ್ಲಿ ಔಟಾಗಿ ಹೊರನಡೆದರು.

ಇನ್ನು ಅರ್ಧಶತಕ ಗಳಿಸಿದ ರವಿಕುಮಾರ್ ಸಮರ್ಥ್ 30ನೇ ಓವರ್‌ನಲ್ಲಿ ಸೌರಭ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಕರುಣ್ ನಾಯರ್ (29) ಶಿವಂ ಮಾವಿ ಸ್ವಿಂಗ್ ಎಸೆತದಲ್ಲಿ ಕ್ಲೀನ್‌ಬೌಲ್ಡ್ ಆದರೆ, ಕೃಷ್ಣಮೂರ್ತಿ ಸಿದ್ಧಾರ್ಥ್‌ (37) ಅವರನ್ನು ಶಿವಂ ಮಾವಿ ಬೇಗನೆ ಪೆವಿಲಿಯನ್​ಗೆ ಕಳುಹಿಸಿದರು. ಇದರ ಬೆನ್ನಲ್ಲೇ ಕರ್ನಾಟಕ ತಂಡದ ನಾಯಕ ಮನೀಷ್ ಪಾಂಡೆ (27) ಸೌರಭ್ ಕುಮಾರ್ ಎಸೆತದಲ್ಲಿ ವಿಕೆಟ್ ಕೈಚೆಲ್ಲಿದರು. ಮರು ಎಸೆತದಲ್ಲೇ ವಿಕೆಟ್ ಕೀಪರ್ ಬ್ಯಾಟರ್ ಶ್ರೀನಿವಾಸ್ ಶರತ್ ಶೂನ್ಯಕ್ಕೆ ಔಟ್ ಆಗಿದ್ದು ತಂಡಕ್ಕೆ ಮತ್ತಷ್ಟು ಹೊಡೆತ ನೀಡಿತು.

ಇದಾಗ್ಯೂ ಮೊದಲ ದಿನದಾಟದಲ್ಲಿ 7 ವಿಕೆಟ್​ ಕಳೆದುಕೊಂಡು 213 ರನ್​ಗಳಿಸಿದ್ದ ಕರ್ನಾಟಕಕ್ಕೆ 2ನೇ ದಿನದಾಟದಲ್ಲಿ ಆಸರೆಯಾಗಿದ್ದು ಶ್ರೇಯಸ್ ಗೋಪಾಲ್. ಒಂದೆಡೆ 80 ಎಸೆತಗಳಲ್ಲಿ ಅಜೇಯ 56 ರನ್​ ಬಾರಿಸಿ ಶ್ರೇಯಸ್ ಗೋಪಾಲ್ ಮಿಂಚಿದರೆ, ಮತ್ತೊಂದೆಡೆ ವಿಕೆಟ್ ಉರುಳುತ್ತಾ ಸಾಗಿತು. ಪರಿಣಾಮ ಕರ್ನಾಟಕ ತಂಡದ ಮೊದಲ ಇನಿಂಗ್ಸ್​ 253 ರನ್​ಗಳಿಗೆ ಅಂತ್ಯವಾಯಿತು.

ಈ ಗುರಿ ಬೆನ್ನತ್ತಿದ ಉತ್ತರ ಪ್ರದೇಶ ತಂಡಕ್ಕೆ ಆರಂಭದಲ್ಲೇ ಆಘಾತ ನೀಡುವಲ್ಲಿ ಕರ್ನಾಟಕ ಬೌಲರ್​ಗಳು ಯಶಸ್ವಿಯಾದರು. 2ನೇ ಓವರ್​ನ ಮೊದಲ ಎಸೆತದಲ್ಲೇ ಸಮರ್ಥ್​ ಸಿಂಗ್​ರನ್ನು ಔಟ್ ಮಾಡಿ ವಿಜಯ್ ಕುಮಾರ್ ವೈಶಾಖ್ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಆರ್ಯನ್ ಜುಯೆಲ್​ರನ್ನು ರೋನಿತ್ ಮೋರೆ ಪೆವಿಲಿಯನ್​ಗೆ ಕಳುಹಿಸಿದರು. ಇದಾಗ್ಯೂ ಪ್ರಿಯಂ ಗರ್ಗ್ 39 ರನ್​ಗಳಿಸಿ ತಂಡಕ್ಕೆ ಆಸರೆಯಾಗುವ ಸೂಚನೆ ನೀಡಿದ್ದರು. ಈ ಹಂತದಲ್ಲಿ ಮತ್ತೆ ದಾಳಿಗಿಳಿಯದ ರೋನಿತ್ ಮತ್ತೊಂದು ಯಶಸ್ಸು ತಂದುಕೊಟ್ಟರು.

ನಾಯಕ ಕರಣ್ ಶರ್ಮಾರನ್ನು ವಿಜಯ್ ಕುಮಾರ್ ವೈಶಾಖ್ ಕೇವಲ 1 ರನ್​ಗೆ ಔಟ್ ಮಾಡಿದರೆ, 33 ರನ್​ಗಳಿಸಿದ ರಿಂಕು ಸಿಂಗ್ ಕೃಷ್ಣಪ್ಪ ಗೌತಮ್ ಅವರ ಸ್ಪಿನ್ ಮೋಡಿಗೆ ಬಲಿಯಾದರು. ಇನ್ನು ಧೃವ್ ಜುರೆಯಲ್ 9 ರನ್​ಗಳಿಸಿ ರೋನಿತ್​ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಪ್ರಿನ್ಸ್ ಯಾದವ್​ರನ್ನು ಶೂನ್ಯಕ್ಕೆ ಔಟ್ ಮಾಡಿದ ವಿಧ್ವತ್ ಕಾವೇರಪ್ಪ ಮತ್ತೊಂದು ಯಶಸ್ಸು ತಂದುಕೊಟ್ಟರು. ಹಾಗೆಯೇ ಸೌರಭ್ ಕುಮಾರ್​ರನ್ನು ಕೃಷ್ಣಪ್ಪ ಗೌತಮ್ ಅವರು ಶೂನ್ಯ ಔಟ್ ಮಾಡಿದರು.

ಹೀಗೆ ಬ್ಯಾಕ್ ಟು ಬ್ಯಾಕ್ ವಿಕೆಟ್ ಪಡೆದ ಕರ್ನಾಟಕ ಬೌಲರ್​ಗಳು 111 ರನ್​ಗಳಿಗೆ 9 ವಿಕೆಟ್ ಕಬಳಿಸಿದ್ದರು. ಆದರೆ ಕೊನೆಯ ವಿಕೆಟ್​ ವೇಳೆ ಶಿವಂ ಮಾವಿ ಅಂಕಿತ್ ರಜಪೂತ್​ ಜೊತೆಗೂಡಿ ಎಚ್ಚರಿಕೆ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಪರಿಣಾಮ ಕೊನೆಯ ವಿಕೆಟ್​ಗೆ 44 ರನ್​ಗಳ ಜೊತೆಯಾಟ ಮೂಡಿಬಂತು. ಅಂತಿಮವಾಗಿ ಶ್ರೇಯಸ್ ಗೋಪಾಲ್ 33 ರನ್​ ಬಾರಿಸಿದ್ದ ಶಿವಂ ಮಾವಿಯ ವಿಕೆಟ್ ಪಡೆಯುವ ಮೂಲಕ ಉತ್ತರ ಪ್ರದೇಶ ತಂಡವನ್ನು 155 ರನ್​ಗಳಿಗೆ ಆಲೌಟ್ ಮಾಡಿದರು. ಕರ್ನಾಟಕ ಪರ ರೋನಿತ್ ಮೋರೆ 3 ವಿಕೆಟ್ ಪಡೆದರೆ, ವಿಧ್ವತ್ ಕಾವೇರಪ್ಪ, ಶ್ರೇಯಸ್ ಗೋಪಾಲ್ ಹಾಗೂ ವಿಜಯ್ ಕುಮಾರ್ ವೈಶಾಖ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

98 ರನ್​ಗಳ ಮುನ್ನಡೆ ಪಡೆದು 2ನೇ ಇನಿಂಗ್ಸ್​ ಆರಂಭಿಸಿದ ಕರ್ನಾಟಕ ಪರ ಆರಂಭಿಕರಾದ ಮಯಾಂಕ್ ಅಗರ್ವಾಲ್ ಹಾಗೂ ರವಿಕುಮಾರ್ ಸಮರ್ಥ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 33 ರನ್​ಗಳ ಜೊತೆಯಾಟವಾಡಿದ ಈ ಜೋಡಿಯನ್ನು ಪ್ರಿನ್ಸ್ ಯಾದವ್ ಬೇರ್ಪಡಿಸಿದರು. ರವಿಕುಮಾರ್ ಸಮರ್ಥ್ 11 ರನ್​ಗಳಿಸಿ ಪ್ರಿನ್ಸ್​ಗೆ ವಿಕೆಟ್ ಒಪ್ಪಿಸಿದರೆ ಇದರ ಬೆನ್ನಲ್ಲೇ ಮಯಾಂಕ್ (22) ಸೌರಭ್ ಎಸೆತದಲ್ಲಿ ಔಟಾದರು. ಆ ಬಳಿಕ ಬಂದ ಕೃಷ್ಣಮೂರ್ತಿ ಸಿದ್ದಾರ್ಥ್ (15) ಹಾಗೂ ಕರುಣ್ ನಾಯರ್ (10) ರನ್ನು ಅಂಕಿತ್ ರಜಪೂತ್ ಪೆವಿಲಿಯನ್​ಗೆ ಕಳುಹಿಸಿದರು.

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿ ಮೇಲುಗೈ ಸಾಧಿಸಿದ ಉತ್ತರ ಪ್ರದೇಶದ ಬೌಲರ್​ಗಳು ಆ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಪರಿಣಾಮ ಮನೀಷ್ ಪಾಂಡೆ (4) ರನೌಟ್ ಆದರೆ, ಶ್ರೇಯಸ್ ಗೋಪಾಲ್ 3 ರನ್​ಗಳಿಸಿ ಔಟಾದರು. ಇದರ ಬೆನ್ನಲ್ಲೇ ಕೃಷ್ಣಪ್ಪ ಗೌತಮ್ (1) ಹಾಗೂ ವಿಜಯ್​ಕುಮಾರ್ ವೈಶಾಕ್ (5) ಸೌರಭ್ ಕುಮಾರ್ ಎಸೆತದಲ್ಲಿ ಎಲ್​ಬಿ ಆದರು. ಮತ್ತೊಂದೆಡೆ ವಿಕೆಟ್ ಕೀಪರ್ ಶ್ರೀನಿವಾಸ್ ಶರತ್ ಅಜೇಯ 10 ರನ್​ಗಳಿಸಿ ಕ್ರೀಸ್​ನಲ್ಲಿದ್ದಾರೆ. ಅದರಂತೆ 2ನೇ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು 8 ವಿಕೆಟ್​ ಕಳೆದುಕೊಂಡು 100 ರನ್​ಗಳಿಸಿತು. ಮೂರನೇ ದಿನದಾಟದಲ್ಲಿ 114 ರನ್​ಗೆ ಆಲೌಟ್ ಆಗುವ ಮೂಲಕ ಉತ್ತರ ಪ್ರದೇಶ ತಂಡಕ್ಕೆ 212 ರನ್​ಗಳ ಗುರಿ ನೀಡಿತು.

ಈ ಸಾಧಾರಣ ಸವಾಲನ್ನು ಬೆನ್ನತ್ತಿದ ಉತ್ತರ ಪ್ರದೇಶ ತಂಡವು ಪ್ರಿಯಂ ಗರ್ಗ್​ (52) ಹಾಗೂ ನಾಯಕ ಕರಣ್ ಶರ್ಮಾ (93) ರನ್​ಗಳ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 213 ರನ್​ಗಳಿಸುವ ಮೂಲಕ ಕರ್ನಾಟಕ ತಂಡವನ್ನು ಮಣಿಸಿತು. ಅಲ್ಲದೆ ಈ ಗೆಲುವಿನೊಂದಿಗೆ ಉತ್ತರ ಪ್ರದೇಶ ತಂಡವು ರಣಜಿ ಟ್ರೋಫಿಯ ಸೆಮಿಫೈನಲ್​ಗೆ ಪ್ರವೇಶಿಸಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ