AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SMAT 2024: ಹರಾಜಿನಲ್ಲಿ ಕಡೆಗಣಿಸಿದ ಆರ್​ಸಿಬಿ; 5 ವಿಕೆಟ್ ಉರುಳಿಸಿ ಟಕ್ಕರ್ ನೀಡಿದ ಕನ್ನಡಿಗ

SMAT 2024: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿಕರ್ನಾಟಕ ತಂಡ ಸಿಕ್ಕಿಂ ವಿರುದ್ಧ ಅದ್ಭುತ ಗೆಲುವು ಸಾಧಿಸಿದೆ. ಕೇವಲ 6 ಓವರ್‌ಗಳಲ್ಲಿ ಪಂದ್ಯ ಗೆದ್ದ ಕರ್ನಾಟಕ ಪರ ಬೌಲಿಂಗ್​ನಲ್ಲಿ ಮ್ಯಾಜಿಕ್ ಮಾಡಿದ ಶ್ರೇಯಸ್ ಗೋಪಾಲ್ 5 ವಿಕೆಟ್​ಗಳ ಗೊಂಚಲು ಪಡೆದರು. ಐಪಿಎಲ್‌ ಹರಾಜಿನಲ್ಲಿ ಕಡೆಗಣಿಸಿದ ಆರ್‌ಸಿಬಿಗೆ ಶ್ರೇಯಸ್ ಗೋಪಾಲ್ ತಕ್ಕ ಉತ್ತರ ನೀಡಿದ್ದಾರೆ.

SMAT 2024: ಹರಾಜಿನಲ್ಲಿ ಕಡೆಗಣಿಸಿದ ಆರ್​ಸಿಬಿ; 5 ವಿಕೆಟ್ ಉರುಳಿಸಿ ಟಕ್ಕರ್ ನೀಡಿದ ಕನ್ನಡಿಗ
ಶ್ರೇಯಸ್ ಗೋಪಾಲ್
ಪೃಥ್ವಿಶಂಕರ
|

Updated on:Nov 29, 2024 | 10:01 PM

Share

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಇಂದು ಕರ್ನಾಟಕ ಹಾಗೂ ಸಿಕ್ಕಿಂ ನಡುವೆ ಪಂದ್ಯ ನಡೆಯಿತು. ಈ ಪಂದ್ಯವನ್ನು ಕರ್ನಾಟಕ ತಂಡ ಕೇವಲ 6 ಓವರ್​ಗಳಲ್ಲಿ ಗೆದ್ದುಕೊಳ್ಳುವ ಮೂಲಕ ಟೂರ್ನಿಯಲ್ಲಿ ಅಮೋಘ ಜಯ ಸಾಧಿಸಿದೆ. ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಕ್ಕಿಂ ತಂಡ ಪೂರ್ಣ 20 ಓವರ್​ಗಳನ್ನು ಆಡಲು ಸಾಧ್ಯವಾಗದೆ ಕೇವಲ 18.2 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 82 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 2 ವಿಕೆಟ್ ಕಳೆದುಕೊಂಡು 5.4 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು.

5 ವಿಕೆಟ್ ಪಡೆದ ಶ್ರೇಯಸ್

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಕ್ಕಿಂ ತಂಡ ಶ್ರೇಯಸ್ ಗೋಪಾಲ್ ಸ್ಪಿನ್ ದಾಳಿಯ ಮುಂದೆ ಸಂಪೂರ್ಣವಾಗಿ ಶರಣಾಯಿತು. ಸಿಕ್ಕಿಂ ತಂಡದ ಆಶೀಸ್ ತಾಪ ಗರಿಷ್ಠ 18 ರನ್​ಗಳ ಇನ್ನಿಂಗ್ಸ್ ಆಡಿದರೆ, ಪ್ರಾಣೇಶ್ ಲಲಿತ್ ಚೆಟ್ರಿ 17 ರನ್​ಗಳ ಕಾಣಿಕೆ ನೀಡಿದರು. ತಂಡದ ಮೂವರು ಬ್ಯಾಟರ್ಸ್​ಗಳು ಶೂನ್ಯ ಸಾಧನೆ ಮಾಡಿದರೆ, ಮೂವರು ಆಟಗಾರರಿ ಕೇವಲ 1 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಇತ್ತ ಕರ್ನಾಟಕದ ಪರ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಗರಿಷ್ಠ 5 ವಿಕೆಟ್ ಪಡೆದರೆ, ವಿದ್ಯಾಧರ ಪಾಟೀಲ 3ಹಾಗೂ ವೈಶಾಕ್ ವಿಜಯ್​ಕುಮಾರ್ 2 ವಿಕೆಟ್ ಪಡೆದರು.

ಆರ್​ಸಿಬಿಗೆ ಸುಲಭ ಜಯ

ಈ ಅಲ್ಪ ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕದ ಪರ ಆರಂಭಿಕ ಮನೀಶ್ ಪಾಂಡೆ ಕೇವಲ 13 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್​ಗಳ ಸಹಿತ ಅಜೇಯ 30 ರನ್ ಬಾರಿಸಿದರೆ, ಶ್ರೀಜಿತ್ 13 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್​ಗಳ ಸಹಿತ 37 ರನ್ ಬಾರಿಸಿದರು. 4ನೇ ಕ್ರಮಾಂಕದಲ್ಲಿ ಬಂದ ಸ್ಮರಣ್ 7 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 19 ರನ್ ಸಿಡಿಸಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ಆರ್​​ಸಿಬಿಗೆ ತಕ್ಕ ಉತ್ತರ ನೀಡಿದ ಶ್ರೇಯಸ್

ದೇಶಿಯ ಕ್ರಿಕೆಟ್‌ನಿಂದ ಐಪಿಎಲ್‌ವರೆಗೆ ಹಲವು ಬಾರಿ ತಮ್ಮ ಲೆಗ್ ಬ್ರೇಕ್ ಮತ್ತು ಗೂಗ್ಲಿ ಕೌಶಲ್ಯವನ್ನು ತೋರಿಸಿರುವ ಗೋಪಾಲ್ ಈ ಬಾರಿಯೂ ನಿರಾಸೆಗೊಳಿಸಲಿಲ್ಲ. ಅರ್ಧ ಸಿಕ್ಕಿಂ ತಂಡವನ್ನು ಪೆವಿಲಿಯನ್​ಗಟ್ಟಿದ ಗೋಪಾಲ್ 4 ಓವರ್​ಗಳಲ್ಲಿ ಕೇವಲ 13 ರನ್ ನೀಡಿ 5 ವಿಕೆಟ್ ಪಡೆದರು. ಇಲ್ಲಿ ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಶ್ರೇಯಸ್ ಬೌಲ್ ಮಾಡಿದ 24 ಎಸೆತಗಳಲ್ಲಿ 13 ಎಸೆತಗಳಲ್ಲಿ ಯಾವುದೇ ರನ್ ನೀಡಲಿಲ್ಲ. ಈ ಅದ್ಭುತ ಪ್ರದರ್ಶನದ ಮೂಲಕ ಶ್ರೇಯಸ್, ಐಪಿಎಲ್ ಹರಾಜಿನಲ್ಲಿ ತನ್ನನ್ನು ಕಡೆಗಣಿಸಿದ ಆರ್​ಸಿಬಿಗೆ ತಕ್ಕ ಉತ್ತರ ನೀಡಿದ್ದಾರೆ.

ವಾಸ್ತವವಾಗಿ ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ಫ್ರಾಂಚೈಸಿ ಕರ್ನಾಟಕದ ಹಲವು ಆಟಗಾರರನ್ನು ಖರೀದಿಸುವ ಮನಸು ಮಾಡಲಿಲ್ಲ. ಅದರಲ್ಲಿ ಶ್ರೇಯಸ್ ಕೂಡ ಒಬ್ಬರು. ಅಂತಿಮವಾಗಿ ಶ್ರೇಯಸ್​ರನ್ನು ಚೆನ್ನೈ ಸೂಪರ್​ಕಿಂಗ್ಸ್ ಫ್ರಾಂಚೈಸಿ 30 ಲಕ್ಷ ಮೂಲ ಬೆಲೆಗೆ ಖರೀದಿಸಿತು. ಇದೀಗ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಶ್ರೇಯಸ್​ಗೆ ಸಿಎಸ್​ಕೆ ಪ್ಲೇಯಿಂಗ್​ 11 ನಲ್ಲಿ ಆಡುವ ಅವಕಾಶ ಸಿಗಲಿ ಎಂಬುದು ಕನ್ನಡಿಗರ ಆಶಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Fri, 29 November 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ