AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SMAT 2024: ಹರಾಜಿನಲ್ಲಿ ಕಡೆಗಣಿಸಿದ ಆರ್​ಸಿಬಿ; 5 ವಿಕೆಟ್ ಉರುಳಿಸಿ ಟಕ್ಕರ್ ನೀಡಿದ ಕನ್ನಡಿಗ

SMAT 2024: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿಕರ್ನಾಟಕ ತಂಡ ಸಿಕ್ಕಿಂ ವಿರುದ್ಧ ಅದ್ಭುತ ಗೆಲುವು ಸಾಧಿಸಿದೆ. ಕೇವಲ 6 ಓವರ್‌ಗಳಲ್ಲಿ ಪಂದ್ಯ ಗೆದ್ದ ಕರ್ನಾಟಕ ಪರ ಬೌಲಿಂಗ್​ನಲ್ಲಿ ಮ್ಯಾಜಿಕ್ ಮಾಡಿದ ಶ್ರೇಯಸ್ ಗೋಪಾಲ್ 5 ವಿಕೆಟ್​ಗಳ ಗೊಂಚಲು ಪಡೆದರು. ಐಪಿಎಲ್‌ ಹರಾಜಿನಲ್ಲಿ ಕಡೆಗಣಿಸಿದ ಆರ್‌ಸಿಬಿಗೆ ಶ್ರೇಯಸ್ ಗೋಪಾಲ್ ತಕ್ಕ ಉತ್ತರ ನೀಡಿದ್ದಾರೆ.

SMAT 2024: ಹರಾಜಿನಲ್ಲಿ ಕಡೆಗಣಿಸಿದ ಆರ್​ಸಿಬಿ; 5 ವಿಕೆಟ್ ಉರುಳಿಸಿ ಟಕ್ಕರ್ ನೀಡಿದ ಕನ್ನಡಿಗ
ಶ್ರೇಯಸ್ ಗೋಪಾಲ್
ಪೃಥ್ವಿಶಂಕರ
|

Updated on:Nov 29, 2024 | 10:01 PM

Share

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಇಂದು ಕರ್ನಾಟಕ ಹಾಗೂ ಸಿಕ್ಕಿಂ ನಡುವೆ ಪಂದ್ಯ ನಡೆಯಿತು. ಈ ಪಂದ್ಯವನ್ನು ಕರ್ನಾಟಕ ತಂಡ ಕೇವಲ 6 ಓವರ್​ಗಳಲ್ಲಿ ಗೆದ್ದುಕೊಳ್ಳುವ ಮೂಲಕ ಟೂರ್ನಿಯಲ್ಲಿ ಅಮೋಘ ಜಯ ಸಾಧಿಸಿದೆ. ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಕ್ಕಿಂ ತಂಡ ಪೂರ್ಣ 20 ಓವರ್​ಗಳನ್ನು ಆಡಲು ಸಾಧ್ಯವಾಗದೆ ಕೇವಲ 18.2 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 82 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 2 ವಿಕೆಟ್ ಕಳೆದುಕೊಂಡು 5.4 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು.

5 ವಿಕೆಟ್ ಪಡೆದ ಶ್ರೇಯಸ್

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಕ್ಕಿಂ ತಂಡ ಶ್ರೇಯಸ್ ಗೋಪಾಲ್ ಸ್ಪಿನ್ ದಾಳಿಯ ಮುಂದೆ ಸಂಪೂರ್ಣವಾಗಿ ಶರಣಾಯಿತು. ಸಿಕ್ಕಿಂ ತಂಡದ ಆಶೀಸ್ ತಾಪ ಗರಿಷ್ಠ 18 ರನ್​ಗಳ ಇನ್ನಿಂಗ್ಸ್ ಆಡಿದರೆ, ಪ್ರಾಣೇಶ್ ಲಲಿತ್ ಚೆಟ್ರಿ 17 ರನ್​ಗಳ ಕಾಣಿಕೆ ನೀಡಿದರು. ತಂಡದ ಮೂವರು ಬ್ಯಾಟರ್ಸ್​ಗಳು ಶೂನ್ಯ ಸಾಧನೆ ಮಾಡಿದರೆ, ಮೂವರು ಆಟಗಾರರಿ ಕೇವಲ 1 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಇತ್ತ ಕರ್ನಾಟಕದ ಪರ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಗರಿಷ್ಠ 5 ವಿಕೆಟ್ ಪಡೆದರೆ, ವಿದ್ಯಾಧರ ಪಾಟೀಲ 3ಹಾಗೂ ವೈಶಾಕ್ ವಿಜಯ್​ಕುಮಾರ್ 2 ವಿಕೆಟ್ ಪಡೆದರು.

ಆರ್​ಸಿಬಿಗೆ ಸುಲಭ ಜಯ

ಈ ಅಲ್ಪ ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕದ ಪರ ಆರಂಭಿಕ ಮನೀಶ್ ಪಾಂಡೆ ಕೇವಲ 13 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್​ಗಳ ಸಹಿತ ಅಜೇಯ 30 ರನ್ ಬಾರಿಸಿದರೆ, ಶ್ರೀಜಿತ್ 13 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್​ಗಳ ಸಹಿತ 37 ರನ್ ಬಾರಿಸಿದರು. 4ನೇ ಕ್ರಮಾಂಕದಲ್ಲಿ ಬಂದ ಸ್ಮರಣ್ 7 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 19 ರನ್ ಸಿಡಿಸಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ಆರ್​​ಸಿಬಿಗೆ ತಕ್ಕ ಉತ್ತರ ನೀಡಿದ ಶ್ರೇಯಸ್

ದೇಶಿಯ ಕ್ರಿಕೆಟ್‌ನಿಂದ ಐಪಿಎಲ್‌ವರೆಗೆ ಹಲವು ಬಾರಿ ತಮ್ಮ ಲೆಗ್ ಬ್ರೇಕ್ ಮತ್ತು ಗೂಗ್ಲಿ ಕೌಶಲ್ಯವನ್ನು ತೋರಿಸಿರುವ ಗೋಪಾಲ್ ಈ ಬಾರಿಯೂ ನಿರಾಸೆಗೊಳಿಸಲಿಲ್ಲ. ಅರ್ಧ ಸಿಕ್ಕಿಂ ತಂಡವನ್ನು ಪೆವಿಲಿಯನ್​ಗಟ್ಟಿದ ಗೋಪಾಲ್ 4 ಓವರ್​ಗಳಲ್ಲಿ ಕೇವಲ 13 ರನ್ ನೀಡಿ 5 ವಿಕೆಟ್ ಪಡೆದರು. ಇಲ್ಲಿ ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಶ್ರೇಯಸ್ ಬೌಲ್ ಮಾಡಿದ 24 ಎಸೆತಗಳಲ್ಲಿ 13 ಎಸೆತಗಳಲ್ಲಿ ಯಾವುದೇ ರನ್ ನೀಡಲಿಲ್ಲ. ಈ ಅದ್ಭುತ ಪ್ರದರ್ಶನದ ಮೂಲಕ ಶ್ರೇಯಸ್, ಐಪಿಎಲ್ ಹರಾಜಿನಲ್ಲಿ ತನ್ನನ್ನು ಕಡೆಗಣಿಸಿದ ಆರ್​ಸಿಬಿಗೆ ತಕ್ಕ ಉತ್ತರ ನೀಡಿದ್ದಾರೆ.

ವಾಸ್ತವವಾಗಿ ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ಫ್ರಾಂಚೈಸಿ ಕರ್ನಾಟಕದ ಹಲವು ಆಟಗಾರರನ್ನು ಖರೀದಿಸುವ ಮನಸು ಮಾಡಲಿಲ್ಲ. ಅದರಲ್ಲಿ ಶ್ರೇಯಸ್ ಕೂಡ ಒಬ್ಬರು. ಅಂತಿಮವಾಗಿ ಶ್ರೇಯಸ್​ರನ್ನು ಚೆನ್ನೈ ಸೂಪರ್​ಕಿಂಗ್ಸ್ ಫ್ರಾಂಚೈಸಿ 30 ಲಕ್ಷ ಮೂಲ ಬೆಲೆಗೆ ಖರೀದಿಸಿತು. ಇದೀಗ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಶ್ರೇಯಸ್​ಗೆ ಸಿಎಸ್​ಕೆ ಪ್ಲೇಯಿಂಗ್​ 11 ನಲ್ಲಿ ಆಡುವ ಅವಕಾಶ ಸಿಗಲಿ ಎಂಬುದು ಕನ್ನಡಿಗರ ಆಶಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Fri, 29 November 24

ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಇಂದು ನಾನು ಕಷ್ಟಪಟ್ಟು 'ವಿಕಸಿತ ಭಾರತ'ದ ಬುನಾದಿ ಹಾಕುತ್ತಿರುವುದು ನಿಮಗಾಗಿ
ಇಂದು ನಾನು ಕಷ್ಟಪಟ್ಟು 'ವಿಕಸಿತ ಭಾರತ'ದ ಬುನಾದಿ ಹಾಕುತ್ತಿರುವುದು ನಿಮಗಾಗಿ