AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy Final: ಕೇರಳ ವಿರುದ್ಧ ಗೆಲುವಿನ ಶತಕ ಸಿಡಿಸಿದ ಕನ್ನಡಿಗ ಕರುಣ್ ನಾಯರ್

Ranji Trophy Final, Karun Nair's Century: ವಿದರ್ಭ ತಂಡವು ರಣಜಿ ಟ್ರೋಫಿ ಫೈನಲ್‌ನಲ್ಲಿ ಕೇರಳ ವಿರುದ್ಧ ಮೇಲುಗೈ ಸಾಧಿಸಿದೆ. ಕರುಣ್ ನಾಯರ್ ಅವರ ಅದ್ಭುತ ಅಜೇಯ ಶತಕದಿಂದ ವಿದರ್ಭ ತಂಡ ಗೆಲುವಿನತ್ತ ಸಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಕರುಣ್, ಈ ಸೀಸನ್‌ನಲ್ಲಿ ನಾಲ್ಕನೇ ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ.

Ranji Trophy Final: ಕೇರಳ ವಿರುದ್ಧ ಗೆಲುವಿನ ಶತಕ ಸಿಡಿಸಿದ ಕನ್ನಡಿಗ ಕರುಣ್ ನಾಯರ್
Karun Nair
ಪೃಥ್ವಿಶಂಕರ
|

Updated on:Mar 01, 2025 | 4:06 PM

Share

ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯದಲ್ಲಿ ವಿದರ್ಭ ಮತ್ತು ಕೇರಳ ತಂಡಗಳು ಮುಖಾಮುಖಿಯಾಗಿವೆ. ಈ ಫೈನಲ್ ಪಂದ್ಯದಲ್ಲಿ ವಿದರ್ಭ ತಂಡ ಮೇಲುಗೈ ಸಾಧಿಸಿದ್ದು, ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಕೂಡ ಪಡೆದುಕೊಂಡಿದೆ. ಇದೀಗ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ವಿದರ್ಭ ತಂಡದ ಪರ ಕನ್ನಡಿಗ ಕರುಣ್ ನಾಯರ್ (Karun Nair) ಪಂದ್ಯದ ನಾಲ್ಕನೇ ದಿನದಂದು, ಅದ್ಭುತ ಶತಕ ಬಾರಿಸುವ ಮೂಲಕ ತಮ್ಮ ತಂಡವನ್ನು ಪ್ರಶಸ್ತಿಯ ಹತ್ತಿರಕ್ಕೆ ಕೊಂಡೊಯ್ದಿದ್ದಾರೆ. ಕರುಣ್ ಅವರ ಈ ಅಜೇಯ ಶತಕದ ಆಧಾರದ ಮೇಲೆ ವಿದರ್ಭ ತಂಡವು ನಾಲ್ಕನೇ ದಿನದಂದು 250 ರನ್​ಗಳಿಗೂ ಅಧಕ ರನ್ ಕಲೆಹಾಕಿದೆ.

ಕೇರಳ ತಂಡವನ್ನು 342 ರನ್​ಗಳಿಗೆ ಆಲೌಟ್ ಮಾಡಿ 37 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ವಿದರ್ಭ ತಂಡ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲಿಯೇ ಕೇವಲ ಏಳು ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತು. ಇಲ್ಲಿಂದ ತಂಡದ ಇನ್ನಿಂಗ್ಸ್‌ನ ಜವಾಬ್ದಾರಿಯನ್ನು ವಹಿಸಿಕೊಂಡ ಕರುಣ್ ನಾಯರ್ 184 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅಜೇಯ ಶತಕ ಬಾರಿಸಿದರು. ಕರುಣ್​ಗೆ ಡ್ಯಾನಿಶ್ ಮಾಲೆವಾರ್ ಅವರಿಂದ ಉತ್ತಮ ಬೆಂಬಲವೂ ದೊರೆಯಿತು. ಡ್ಯಾನಿಶ್​ ಕೂಡ 162 ಎಸೆತಗಳಲ್ಲಿ 5 ಬೌಂಡರಿಗಳ ಸಹಿತ 73 ರನ್ ಗಳಿಸಿದರು. ಇಬ್ಬರೂ ಮೂರನೇ ವಿಕೆಟ್‌ಗೆ 182 ರನ್‌ಗಳ ಜೊತೆಯಾಟ ನೀಡಿದರು.

ಇದನ್ನೂ ಓದಿ
Image
ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌; ಕರುಣ್ ನಾಯರ್ ಅಜೇಯ ಶತಕ
Image
ರೈಲ್ವೇಸ್ ವೇಗಿಗೆ ವಿಶೇಷ ಉಡುಗೊರೆ ನೀಡಿದ ಕೊಹ್ಲಿ

ಮೊದಲ ಇನ್ನಿಂಗ್ಸ್‌ನಲ್ಲೂ ಮಿಂಚಿದ ನಾಯರ್

ಎರಡನೇ ಇನ್ನಿಂಗ್ಸ್​ನಲ್ಲಿ ಶತಕ ಬಾರಿಸುವುದಕ್ಕೂ ಮುನ್ನ ಮೊದಲ ಇನ್ನಿಂಗ್ಸ್​ನಲ್ಲೂ ನಾಯರ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ 86 ರನ್​ಗಳ ಕಾಣಿಕೆ ನೀಡಿದರು. ಕರುಣ್ ಅವರ ಈ ಆಟದಿಂದಾಗಿ ವಿದರ್ಭ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ 379 ರನ್‌ ಕಲೆಹಾಕಿತು. ಮೊದಲ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಬಾರಿಸುವುದರೊಂದಿಗೆ ಕರುಣ್, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 8,000 ರನ್‌ಗಳನ್ನು ಪೂರ್ಣಗೊಳಿಸಿದರು. ಅಲ್ಲದೆ ಇದು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ನಾಯರ್ ಅವರ 36 ನೇ ಅರ್ಧಶತಕವಾಗಿತ್ತು.

ಇದನ್ನೂ ಓದಿ: Ranji Trophy 2025: ಮತ್ತೊಂದು ಅಜೇಯ ಶತಕ ಸಿಡಿಸಿದ ಕನ್ನಡಿಗ ಕರುಣ್ ನಾಯರ್

ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟ್ಸ್‌ಮನ್

ನಾಯರ್ ಈಗ 2024/25 ರಣಜಿ ಟ್ರೋಫಿ ಆವೃತ್ತಿಯಲ್ಲಿ 800 ಕ್ಕೂ ಅಧಿಕ ರನ್ ಕಲೆಹಾಕಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಬಾರಿಯ ರಣಜಿ ಟೂರ್ನಿಯಲ್ಲಿ ಇದು ಕರುಣ್ ಸಿಡಿಸಿರುವ ನಾಲ್ಕನೇ ಶತಕವಾಗಿದೆ. ಈ ಸೀಸನ್​ನಲ್ಲಿ ಆಡಿರುವ 16 ಇನ್ನಿಂಗ್ಸ್‌ಗಳಲ್ಲಿ ಕರುಣ್ 55 ಕ್ಕಿಂತ ಹೆಚ್ಚು ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ. ಇನ್ನು ಕರುಣ್ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ಇಲ್ಲಿಯವರೆಗೆ ಅವರು 114 ಪಂದ್ಯಗಳ 183 ಇನ್ನಿಂಗ್ಸ್‌ಗಳಲ್ಲಿ ಎಂಟು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Sat, 1 March 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ