AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ತಂಡವನ್ನು ತೊರೆದ ಕರುಣ್ ನಾಯರ್

Karun Nair: 2016 ರಿಂದ 2017 ರ ನಡುವೆ ಕರುಣ್ ನಾಯರ್ ಭಾರತದ ಪರ 6 ಟೆಸ್ಟ್ ಪಂದ್ಯಗಳನ್ನು ಮತ್ತು 2 ODI ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ ತ್ರಿಶತಕ ಸಿಡಿಸಿ ಮಿಂಚಿದ್ದರು. ಇನ್ನು ಒಟ್ಟು 85 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅವರು 48.94 ರ ಸರಾಸರಿಯಲ್ಲಿ 5922 ರನ್ ಗಳಿಸಿದ್ದಾರೆ.

ಕರ್ನಾಟಕ ತಂಡವನ್ನು ತೊರೆದ ಕರುಣ್ ನಾಯರ್
Karun Nair
TV9 Web
| Edited By: |

Updated on: Aug 27, 2023 | 7:50 PM

Share

ಕರುಣ್ ನಾಯರ್ (Karun Nair) ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು (ಕೆಎಸ್‌ಸಿಎ) ತೊರೆದಿದ್ದು, ಮುಂಬರುವ ದೇಶೀಯ ಟೂರ್ನಿಯಲ್ಲಿ ವಿದರ್ಭ ಪರ ಆಡಲಿದ್ದಾರೆ. ಕಳೆದ ಎರಡು ದಶಕಗಳ ಕಾಲ ಕರ್ನಾಟಕ ರಾಜ್ಯ ತಂಡದ ಭಾಗವಾಗಿದ್ದ ಕರುಣ್ ನಾಯರ್ ಅವರಿಗೆ ಇತ್ತೀಚಿನ ದಿನಗಳಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೇ ಕಾರಣದಿಂದಾಗಿ ಇದೀಗ ವಿದರ್ಭ ಪರ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಈ ಬಾರಿಯ ರಣಜಿ ಸೀಸನ್​ಗೂ ಮುನ್ನ ಹಲವು ರಾಜ್ಯಗಳ ಪ್ರಮುಖ ಆಟಗಾರರು ವರ್ಗಾವಣೆಯಾಗಿದ್ದಾರೆ. ಇತ್ತೀಚೆಗಷ್ಟೇ ನಿತೀಶ್ ರಾಣಾ ದೆಹಲಿಯಿಂದ ಉತ್ತರ ಪ್ರದೇಶ ತಂಡಕ್ಕೆ ಸೇರಿದ್ದರು. ಇದೀಗ ಕರುಣ್ ನಾಯರ್ ಕೂಡ ಹೊಸ ತಂಡದ ಪರ ಇನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.

ಕಳೆದ ಬಾರಿಯ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರುಣ್ ನಾಯರ್​ಗೆ ಅವಕಾಶ ನೀಡಲಾಗಿರಲಿಲ್ಲ. ಅಷ್ಟೇ ಅಲ್ಲದೆ ಜೂನ್ 2022 ರಿಂದ ರಾಜ್ಯ ತಂಡದ ಪರ ಯಾವುದೇ ಕ್ರಿಕೆಟ್ ಆಡಿರಲಿಲ್ಲ. ಇತ್ತ ಕರ್ನಾಟಕ ತಂಡದಲ್ಲಿ ಅವಕಾಶಗಳ ಕೊರತೆಯ ಬೆನ್ನಲ್ಲೇ ವಿದರ್ಭ ಪರ ಆಡಲು ಕರುಣ್ ನಾಯರ್ ನಿರ್ಧರಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ತಿಳಿಸಿರುವ ಕರುಣ್ ನಾಯರ್, “ಕಳೆದ ಎರಡು ದಶಕಗಳಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯೊಂದಿಗಿನ ನನ್ನ ಅದ್ಭುತ ಪ್ರಯಾಣಕ್ಕಾಗಿ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ. ನನ್ನ ಕ್ರಿಕೆಟ್ ವೃತ್ತಿಜೀವನದ ಆರಂಭದಿಂದಲೂ, KSCA ಒಂದು ಮಾರ್ಗದರ್ಶಿ ಬೆಳಕಾಗಿದೆ. ಇಲ್ಲಿನ ಅಚಲವಾದ ಬೆಂಬಲವು ನನ್ನನ್ನು ಇಂದಿನ ಆಟಗಾರನನ್ನಾಗಿ ರೂಪಿಸಲು ಸಹಾಯ ಮಾಡಿತು.

“ನನ್ನ ಗಮನಾರ್ಹ ತರಬೇತುದಾರರು, ನಾಯಕರು ಮತ್ತು ಸಹ ಆಟಗಾರರಿಗೆ ವಿಶೇಷ ಧನ್ಯವಾದಗಳು. ನಾನು ವಿದರ್ಭ ಕ್ರಿಕೆಟ್ ಅಸೋಸಿಯೇಷನ್‌ನೊಂದಿಗೆ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ. ಇದೇ ವೇಳೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯೊಂದಿಗಿನ ನೆನಪುಗಳು, ಸ್ನೇಹ ಮತ್ತು ಕೌಶಲ್ಯಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ನನ್ನ ಕ್ರಿಕೆಟ್ ಪ್ರಯಾಣದ ಅವಿಭಾಜ್ಯ ಅಂಗವಾಗಿದ್ದಕ್ಕಾಗಿ ಧನ್ಯವಾದಗಳು ಎಂದು ಕರುಣ್ ನಾಯರ್ ಬರೆದುಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ ಆಡಿದ್ದ ಕರುಣ್:

2016 ರಿಂದ 2017 ರ ನಡುವೆ ಕರುಣ್ ನಾಯರ್ ಭಾರತದ ಪರ 6 ಟೆಸ್ಟ್ ಪಂದ್ಯಗಳನ್ನು ಮತ್ತು 2 ODI ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ ತ್ರಿಶತಕ ಸಿಡಿಸಿ ಮಿಂಚಿದ್ದರು. ಇನ್ನು ಒಟ್ಟು 85 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅವರು 48.94 ರ ಸರಾಸರಿಯಲ್ಲಿ 5922 ರನ್ ಗಳಿಸಿದ್ದಾರೆ. ಹಾಗೆಯೇ 90 ಲಿಸ್ಟ್ ಎ ಪಂದ್ಯಗಳಲ್ಲಿ 30.71 ಸರಾಸರಿಯಲ್ಲಿ 2119 ರನ್ ಗಳಿಸಿದ್ದಾರೆ. ಇದೀಗ ವಿದರ್ಭ ಪರ ಹೊಸ ಇನಿಂಗ್ಸ್​ ಆರಂಭಿಸಲು ನಿರ್ಧರಿಸಿದ್ದು, ಅದರಂತೆ ಮುಂದಿನ ದೇಶೀಯ ಟೂರ್ನಿಯಲ್ಲಿ ಕರುಣ್ ನಾಯರ್ ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ.

Follow Us
Web contact
Web contact

TV9 Kannada

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ