AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaviya Maran: ಪಂದ್ಯದ ಮಧ್ಯೆ ಕ್ಯಾಮೆರಾಮ್ಯಾನ್​ನ ಮೈಚಳಿ ಬಿಡಿಸಿದ ಕಾವ್ಯ ಮಾರನ್: ಅಷ್ಟಕ್ಕು ಆಗಿದ್ದೇನು ನೋಡಿ

SRH vs PBKS, IPL 2023: ಹೈದರಾಬಾದ್​ನ ಪ್ರತಿ ಪಂದ್ಯಕ್ಕೆ ಚಿಯರ್ ಮಾಡಲು ಮಾಲಕಿ ಕಾವ್ಯ ಮಾರನ್ (Kaviya Maran) ಮೈದಾನದಲ್ಲಿ ಹಾಜರಿರುತ್ತಾರೆ. ಹೀಗಿರುವಾಗ ಕಾವ್ಯ ಕ್ಯಾಮೆರಾಮ್ಯಾನ್ ಮೇಲೆಯೇ ಕೋಪಗೊಂಡ ಘಟನೆ ನಡೆದಿದೆ.

Kaviya Maran: ಪಂದ್ಯದ ಮಧ್ಯೆ ಕ್ಯಾಮೆರಾಮ್ಯಾನ್​ನ ಮೈಚಳಿ ಬಿಡಿಸಿದ ಕಾವ್ಯ ಮಾರನ್: ಅಷ್ಟಕ್ಕು ಆಗಿದ್ದೇನು ನೋಡಿ
Kaviya Maran Angry
Vinay Bhat
|

Updated on:Apr 10, 2023 | 11:51 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ (IPL 2023) ಭಾನುವಾರ ನಡೆದ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ (SRH vs PBKS) ತಂಡ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಸತತ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಎಸ್​ಆರ್​ಹೆಚ್ ಗೆಲುವು ಖಾತೆ ತೆರೆದಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸನ್​ರೈಸರ್ಸ್ 8 ವಿಕೆಟ್​ಗಳ ಗೆಲುವು ಕಂಡಿತು. ಹೈದರಾಬಾದ್​ನ ಪ್ರತಿ ಪಂದ್ಯಕ್ಕೆ ಚಿಯರ್ ಮಾಡಲು ಮಾಲಕಿ ಕಾವ್ಯ ಮಾರನ್ (Kaviya Maran) ಮೈದಾನದಲ್ಲಿ ಹಾಜರಿರುತ್ತಾರೆ. ಜೊತೆಗೆ ಪ್ರತಿ ಪಂದ್ಯ ನಡೆದಾಗ ಇವರ ಫೋಟೋ, ವಿಡಿಯೋ ವೈರಲ್ ಆಗುತ್ತಲೇ ಇರುತ್ತದೆ. ಇದೀಗ ಕಾವ್ಯ ಕ್ಯಾಮೆರಾಮ್ಯಾನ್ ಮೇಲೆಯೇ ಕೋಪಗೊಂಡ ಘಟನೆ ನಡೆದಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಎಸ್​ಆರ್​ಹೆಚ್ ಬೌಲರ್​ಗಳು ಇನ್ನಿಂಗ್ಸ್​ನ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟವಾಡಿದರು. ಭುವನೇಶ್ವರ್ ಮೊದಲ ಓವರ್​ನ ಮೊದಲ ಎಸೆತದಲ್ಲೇ ಪಂಜಾಬ್ ಬ್ಯಾಟರ್ ಪ್ರಭ್​ಸಿಮ್ರಾನ್ ವಿಕೆಟ್ ಕಿತ್ತರು. 88 ರನ್​ಗೆ ಪಂಜಾಬ್ 9 ವಿಕೆಟ್ ಕಳೆದುಕೊಂಡು 100 ಕ್ಕೂ ಮೊದಲು ಆಲೌಟ್ ಆಗುವ ಭೀತಿಯಲ್ಲಿತ್ತು. ಆದರೆ, ಅಂತಿಮ ಹಂತದಲ್ಲಿ ಶಿಖರ್ ಧವನ್​ರನ್ನು ಕಟ್ಟಿ ಹಾಕುವಲ್ಲಿ ವಿಫಲವಾದ ಎಸ್​ಆರ್​ಹೆಚ್ ಬೌಲರ್​ಗಳು ಹೆಚ್ಚು ರನ್ ಬಿಟ್ಟುಕೊಟ್ಟರು. ಪಂಜಾಬ್ 143 ರನ್ ಕಲೆಹಾಕಿತು.

ಇದನ್ನೂ ಓದಿ
Image
ಇದು ಐಪಿಎಲ್ ಟ್ರೆಂಡ್​! ಟಿವಿ ಮಾಧ್ಯಮ ಬಿಟ್ಟು ಠೀವಿಯಿಂದ ಡಿಜಿಟಲ್ ಕಡೆಗೆ ಮುಖ ಮಾಡಿದ ಐಪಿಎಲ್ ವೀಕ್ಷಕರು, ಜಾಹೀರಾತುದಾರರು!
Image
RCB vs LSG, IPL 2023: ಆರ್​ಸಿಬಿ-ಎಲ್​ಎಸ್​ಜಿ ಪಂದ್ಯಕ್ಕೆ ಮಳೆಯ ಕಾಟ?: ಚಿನ್ನಸ್ವಾಮಿ ಪಿಚ್ ಯಾರಿಗೆ ಸಹಕಾರಿ ಆಗುತ್ತೆ?
Image
IPL 2023 Points Table: ಖಾತೆ ತೆರೆದ ಎಸ್​ಆರ್​ಹೆಚ್, ದ್ವಿತೀಯ ಸ್ಥಾನಕ್ಕೆ ಜಿಗಿದ ಕೆಕೆಆರ್: ಐಪಿಎಲ್ 2023 ಟೇಬಲ್ ಟಾಪರ್ ಯಾರು?
Image
Rinku Singh: ರಿಂಕು ಸಿಂಗ್ ಆಟ ನೋಡಿ ಶಾರುಖ್​, ರಣವೀರ್, ಆರ್ಯನ್ ಹೇಳಿದ್ದೇನು ನೋಡಿ..

Rinku Singh: ಒಂದೇ ಓವರ್​​ನಲ್ಲಿ 5 ಸಿಕ್ಸರ್: ರಿಂಕು ಸಿಂಗ್ ಸಿಡಿಸಿದ ಒಂದೊಂದು ಸಿಕ್ಸ್ ಹೇಗಿತ್ತು ನೋಡಿ

15ನೇ ಓವರ್ ಆಗುವಾಗ 9 ವಿಕೆಟ್ ಕಳೆದುಕೊಂಡಿದ್ದ ಪಂಜಾಬ್​ನ 1 ವಿಕೆಟ್ ಪಡೆಯಲು ಹೈದರಾಬಾದ್​ಗೆ ಇನ್ನಿಂಗ್ಸ್ ಮುಕ್ತಾಯದ ವರೆಗೆ ಸಾಧ್ಯವಾಗಲಿಲ್ಲ. ಇದರಿಂದಾಗಿ ಎಸ್​ಆರ್​ಹೆಚ್ ಮಾಲಕಿ ಕಾವ್ಯ ಮಾರನ್ ಕೋಪಗೊಂಡಿದ್ದರು. ಈ ನಡುವೆ 19ನೇ ಓವರ್ ನಡೆಯುತ್ತಿರುವಾಗ ಕ್ಯಾಮೆರಾಮ್ಯಾನ್ ಕಾವ್ಯ ಅವರನ್ನು ಸೆರೆಯಿಡಿದಿದ್ದಾರೆ. ಕೆಲ ಹೊತ್ತು ಕಾದರೂ ಕಾವ್ಯ ಅವರನ್ನು ಸ್ಕ್ರೀನ್​ನಿಂದ ಬದಲಾಯಿಸದ ಕಾರಣ ಕೋಪಗೊಂಡು ಕ್ಯಾಮೆರಾಮ್ಯಾನ್​ಗೆ ನನ್ನನ್ನು ತೋರಿಸಬೇಡಿ ಎಂಬರ್ಥದಲ್ಲಿ ಜೋರಾಗಿ ಗುಡುಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ನಾಯಕ ಶಿಖರ್‌ ಧವನ್‌ ಅವರ ಏಕಾಂಗಿ ಹೋರಾಟದ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 143 ರನ್‌ಗಳಿಸಿತು. ಧವನ್ 66 ಬಾಲಲ್​ಗಳಲ್ಲಿ 12 ಬೌಂಡರಿ, 5 ಸಿಕ್ಸ್‌ ಮೂಲಕ ಅಜೇಯ 99 ರನ್ ಸಿಡಿಸಿದರು. ಮಯಂಕ್‌ ಮಾರ್ಕಂಡೆ 4 ವಿಕೆಟ್ ಕಿತ್ತರು. ಟಾರ್ಗೆಟ್ ಬೆನ್ನತ್ತಿದ ಸನ್‌ರೈಸರ್ಸ್‌ 17.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 145 ರನ್‌ಗಳಿಸುವ ಮೂಲಕ 8 ವಿಕೆಟ್‌ಗಳ ಗೆಲುವು ಸಾಧಿಸಿತು. ಹೈದ್ರಾಬಾದ್‌ ಪರ ರಾಹುಲ್‌ ತ್ರಿಪಾತಿ 48 ಎಸೆತಗಳಲ್ಲಿ 10 ಬೌಂಡರಿ, 3 ಸಿಕ್ಸ್‌ ಮೂಲಕ ಅಜೇಯ 74 ರನ್‌ ಕಲೆಹಾಕಿದರು. ಇವರಿಗೆ ಉತ್ತಮ ಸಾಥ್‌ ನೀಡಿದ ನಾಯಕ ಮಾರ್ಕ್ರಂ 37 ರನ್ ಗಳಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:50 am, Mon, 10 April 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್