AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Mega Auction: ಐಪಿಎಲ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಪ್ರಮುಖ ಆಟಗಾರರು ಇವರೇ

IPL 2022 Released Players: ಐಪಿಎಲ್ ಮೂಲಕ ತಮ್ಮ ಸಾಮರ್ಥ್ಯ ಸಾಬೀತುಪಡಿಸಿರುವ ಈ ಆಟಗಾರರು ಮೆಗಾ ಹರಾಜಿನಲ್ಲಿ ಪ್ರಮುಖ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

IPL 2022 Mega Auction: ಐಪಿಎಲ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಪ್ರಮುಖ ಆಟಗಾರರು ಇವರೇ
IPL 2022 Mega Auction
TV9 Web
| Edited By: |

Updated on: Dec 01, 2021 | 6:21 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗೂ (IPL 2022 Mega Auction) ಮುನ್ನ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ಮುಂಬೈ ಇಂಡಿಯನ್ಸ್ (​Mumbai Indians), ಡೆಲ್ಲಿ ಕ್ಯಾಪಿಟಲ್ಸ್ (Delhi Capitals)​, ಕೊಲ್ಕತ್ತಾ ನೈಟ್ ರೈಡರ್ಸ್ (KKR)​ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK)​ ಗರಿಷ್ಠ ರಿಟೈನ್ ಆಯ್ಕೆಯನ್ನು ಬಳಸಿಕೊಂಡಿದ್ದು, ಅದರಂತೆ ತಂಡದಲ್ಲಿ ಪ್ರಮುಖ ನಾಲ್ವರು ಆಟಗಾರರನ್ನು ಉಳಿಸಿಕೊಂಡಿದೆ. ಇದಾಗ್ಯೂ ಪ್ರತಿ ತಂಡದಿಂದಲೂ ಅತ್ಯುತ್ತಮ ಪ್ರದರ್ಶನ ನೀಡಿದ ಅನೇಕ ಆಟಗಾರರು ರಿಲೀಸ್ ಆಗಿದ್ದಾರೆ. ಈಗಾಗಲೇ ಐಪಿಎಲ್ ಮೂಲಕ ತಮ್ಮ ಸಾಮರ್ಥ್ಯ ಸಾಬೀತುಪಡಿಸಿರುವ ಈ ಆಟಗಾರರು ಮೆಗಾ ಹರಾಜಿನಲ್ಲಿ ಪ್ರಮುಖ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು. ಹಾಗಿದ್ರೆ ಯಾವ ತಂಡದಿಂದ ಯಾವ ಪ್ರಮುಖ ಆಟಗಾರರು ರಿಲೀಸ್ ಆಗಿದ್ದಾರೆ ನೋಡೋಣ…

ಚೆನ್ನೈ ಸೂಪರ್ ಕಿಂಗ್ಸ್ (CSK) ಉಳಿಸಿಕೊಂಡ ಆಟಗಾರರು​: 1- ರವೀಂದ್ರ ಜಡೇಜಾ 2- ಮಹೇಂದ್ರ ಸಿಂಗ್ ಧೋನಿ 3- ಮೊಯೀನ್ ಅಲಿ 4- ರುತುರಾಜ್ ಗಾಯಕ್ವಾಡ್

ಬಿಡುಗಡೆಯಾದ ಪ್ರಮುಖ ಆಟಗಾರರು: ಫಾಫ್ ಡು ಪ್ಲೆಸಿಸ್, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್ ಮತ್ತು ಸ್ಯಾಮ್ ಕರ್ರನ್.

ಸನ್​ರೈಸರ್ಸ್​ ಹೈದರಾಬಾದ್ (SRH) ಉಳಿಸಿಕೊಂಡ ಆಟಗಾರರು​: 1- ಕೇನ್ ವಿಲಿಯಮ್ಸನ್ 2- ಉಮ್ರಾನ್ ಮಲಿಕ್ 3- ಅಬ್ದುಲ್ ಸಮದ್

ಬಿಡುಗಡೆಯಾದ ಪ್ರಮುಖ ಆಟಗಾರರು: ಜಾನಿ ಬೈರ್‌ಸ್ಟೋವ್, ರಶೀದ್ ಖಾನ್, ಡೇವಿಡ್ ವಾರ್ನರ್ ಮತ್ತು ಭುವನೇಶ್ವರ್ ಕುಮಾರ್.

ರಾಜಸ್ಥಾನ್ ರಾಯಲ್ಸ್ (RR) ಉಳಿಸಿಕೊಂಡ ಆಟಗಾರರು​: 1- ಸಂಜು ಸ್ಯಾಮ್ಸನ್ 2- ಜೋಸ್ ಬಟ್ಲರ್ 3- ಯಶಸ್ವಿ ಜೈಸ್ವಾಲ್

ಬಿಡುಗಡೆಯಾದ ಪ್ರಮುಖ ಆಟಗಾರರು: ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಮತ್ತು ಮುಸ್ತಾಫಿಜುರ್ ರೆಹಮಾನ್.

ಮುಂಬೈ ಇಂಡಿಯನ್ಸ್​ (Mumbai Indians) ಉಳಿಸಿಕೊಂಡ ಆಟಗಾರರು​: 1- ರೋಹಿತ್ ಶರ್ಮಾ 2- ಜಸ್​ಪ್ರೀತ್ ಬುಮ್ರಾ 3- ಸೂರ್ಯಕುಮಾರ್ ಯಾದವ್​ 4- ಕೀರನ್ ಪೊಲಾರ್ಡ್

ಬಿಡುಗಡೆಯಾದ ಪ್ರಮುಖ ಆಟಗಾರರು: ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್ ಮತ್ತು ಟ್ರೆಂಟ್ ಬೌಲ್ಟ್.

ಕೊಲ್ಕತ್ತಾ ನೈಟ್​ ರೈಡರ್ಸ್ (KKR)​ ಉಳಿಸಿಕೊಂಡ ಆಟಗಾರರು​: 1- ಆಂಡ್ರೆ ರಸೆಲ್ 2- ವರುಣ್ ಚಕ್ರವರ್ತಿ 3- ವೆಂಕಟೇಶ್ ಅಯ್ಯರ್ 4- ಸುನಿಲ್ ನರೈನ್

ಬಿಡುಗಡೆಯಾದ ಪ್ರಮುಖ ಆಟಗಾರರು: ಇಯಾನ್ ಮೊರ್ಗನ್, ಪ್ಯಾಟ್ ಕಮ್ಮಿನ್ಸ್, ಶುಭ್​ಮನ್ ಗಿಲ್ ಮತ್ತು ದಿನೇಶ್ ಕಾರ್ತಿಕ್.

ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಉಳಿಸಿಕೊಂಡ ಆಟಗಾರರು​​: 1- ರಿಷಭ್ ಪಂತ್ 2- ಪೃಥ್ವಿ ಶಾ 3- ಅಕ್ಷರ್ ಪಟೇಲ್ 4- ಅನ್ರಿಕ್ ನೋಕಿಯಾ

ಬಿಡುಗಡೆಯಾದ ಪ್ರಮುಖ ಆಟಗಾರರು: ಶ್ರೇಯಸ್ ಅಯ್ಯರ್, ಶಿಖರ್ ಧವನ್, ಕಗಿಸೊ ರಬಾಡ ಮತ್ತು ರವಿಚಂದ್ರನ್ ಅಶ್ವಿನ್

ಪಂಜಾಬ್ ಕಿಂಗ್ಸ್ (Punjab Kings)​​ ಉಳಿಸಿಕೊಂಡ ಆಟಗಾರರು​: 1- ಮಯಾಂಕ್ ಅಗರ್ವಾಲ್ 2- ಅರ್ಷದೀಪ್ ಸಿಂಗ್

ಬಿಡುಗಡೆಯಾದ ಪ್ರಮುಖ ಆಟಗಾರರು: ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್ ಮತ್ತು ಶಾರುಖ್ ಖಾನ್

ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ಉಳಿಸಿಕೊಂಡ ಆಟಗಾರರು​: 1- ವಿರಾಟ್ ಕೊಹ್ಲಿ 2- ಗ್ಲೆನ್ ಮ್ಯಾಕ್ಸ್​ವೆಲ್ 3- ಮೊಹಮ್ಮದ್ ಸಿರಾಜ್

ಬಿಡುಗಡೆಯಾದ ಪ್ರಮುಖ ಆಟಗಾರರು: ಹರ್ಷಲ್ ಪಟೇಲ್, ಯುಜ್ವೇಂದ್ರ ಚಹಾಲ್ ಮತ್ತು ದೇವದತ್ ಪಡಿಕ್ಕಲ್.

ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: 27 ಆಟಗಾರರು ರಿಟೈನ್: ಬಿಡುಗಡೆಯಾದ ಆಟಗಾರರ ಪಟ್ಟಿ ಇಲ್ಲಿದೆ

(Key Players Franchises Released Ahead of IPL 2022 Mega Auction)

Follow Us
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!