AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs GT: ಕಳಪೆ ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಗುಜರಾತ್​; ಕೆಕೆಆರ್​ಗೆ 29 ರನ್ ಜಯ

IPL 2026 KKR vs GT: ಐಪಿಎಲ್ 2026 ರ 60 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಗುಜರಾತ್ ಟೈಟಾನ್ಸ್ ತಂಡವನ್ನು 29 ರನ್‌ಗಳಿಂದ ಸೋಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಕೆಕೆಆರ್ ಸುಲಭ ಜಯ ದಾಖಲಿಸಲು ಗುಜರಾತ್‌ನ ಕಳಪೆ ಫಿಲ್ಡಿಂಗ್ ಹಾಗೂ ಬ್ಯಾಟರ್‌ಗಳ ಸ್ಫೋಟಕ ಬ್ಯಾಟಿಂಗ್ ಕಾರಣವಾಯಿತು. ಕೆಕೆಆರ್ 247 ರನ್ ಗಳಿಸಿದರೆ, ಗುಜರಾತ್ 218 ರನ್ ಗಳಿಸಲಷ್ಟೇ ಶಕ್ತವಾಯಿತು.

KKR vs GT: ಕಳಪೆ ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಗುಜರಾತ್​; ಕೆಕೆಆರ್​ಗೆ 29 ರನ್ ಜಯ
Gujarat
ಪೃಥ್ವಿಶಂಕರ
|

Updated on:May 16, 2026 | 11:51 PM

Share

ಐಪಿಎಲ್ 2026 (IPL 2026) ರ 60 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ಗುಜರಾತ್ ಟೈಟಾನ್ಸ್ (KKR vs GT) ತಂಡವನ್ನು 29 ರನ್‌ಗಳಿಂದ ಸೋಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಕೆಕೆಆರ್ ತಂಡ ಪ್ಲೇಆಫ್‌ ರೇಸ್​ನಲ್ಲಿ ಇರಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಅದರಂತೆ ಗುಜರಾತ್​ನ ಕಳಪೆ ಫಿಲ್ಡಿಂಗ್ ಹಾಗೂ ಬ್ಯಾಟರ್​ಗಳ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಕೆಕೆಆರ್ ಸುಲಭ ಜಯ ದಾಖಲಿಸಿತು. ಈಡನ್ ಗಾರ್ಡನ್ಸ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 247 ರನ್ ಗಳಿಸಿತು, ಇದು ಗುಜರಾತ್ ವಿರುದ್ಧ ಕೆಕೆಆರ್ ಕಲೆಹಾಕಿದ ಅತ್ಯಧಿಕ ಮೊತ್ತವಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಗುಜರಾತ್ 218 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು.

ಅಲೆನ್ ಅಬ್ಬರ

ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್​ಗೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ಅಜಿಂಕ್ಯ ರಹಾನೆ 14 ರನ್ ಗಳಿಸಿ ಔಟಾದರು. ಆದಾಗ್ಯೂ ಎಂದಿನಂತೆ ತನ್ನ ಹೊಡಿಬಡಿ ಆಟ ಮುಂದುವರೆಸಿದ ಫಿನ್ ಅಲೆನ್ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆದಾಗ್ಯೂ ಶತಕದಂಚಿನಲ್ಲಿ ಎಡವಿದ ಅಲೆನ್ 35 ಎಸೆತಗಳಲ್ಲಿ 93 ರನ್ ಔಟಾದರು. ಅಲೆನ್ ಈ ಮೊತ್ತ ಕಲೆಹಾಲು ಗುಜರಾತ್ ಫಿಲ್ಡರ್​ಗಳು ನೀಡಿದ 2 ಜೀವದಾನಗಳು ಕಾರಣವಾದವು. ಇದು ಗುಜರಾತ್ ತಂಡದ ಸೋಲಿಗೂ ಪ್ರಮುಖ ಕಾರಣವಾಯಿತು ಎಂದರೆ ತಪ್ಪಾಗಲಾರದು.

ರಘುವಂಶಿ, ಗ್ರೀನ್ ಅರ್ಧಶತಕ

ಅಲೆನ್ ಹೊರತುಪಡಿಸಿ ಅಂಗ್ಕ್ರಿಶ್ ರಘುವಂಶಿ 33 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, 82 ರನ್ ಸಿಡಿಸಿ ಅಜೇಯರಾಗಿ ಉಳಿದರು. ಇವರ ಜೊತೆಗೆ ಕ್ಯಾಮರೂನ್ ಗ್ರೀನ್ ಕೂಡ 52 ರನ್ ಗಳಿಸಿ ಅಜೇಯರಾಗಿ ಪೆವಿಲಿಯನ್‌ಗೆ ಮರಳಿದರು. ಗ್ರೀನ್ ಮತ್ತು ರಘುವಂಶಿ ಕೂಡ ಮೂರನೇ ವಿಕೆಟ್‌ಗೆ 52 ಎಸೆತಗಳಲ್ಲಿ 108 ರನ್‌ಗಳ ಅಜೇಯ ಶತಕದ ಪಾಲುದಾರಿಕೆಯನ್ನು ನೀಡಿದರು. ಗುಜರಾತ್ ಪರ ಸಿರಾಜ್ ಮತ್ತು ಸಾಯಿ ಕಿಶೋರ್ ತಲಾ ಒಂದು ವಿಕೆಟ್ ಪಡೆದರು.

ಗುಜರಾತ್​ಗೆ ಉತ್ತಮ ಆರಂಭ

ಈ ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್​ಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಆರಂಭಿಕ ಸಾಯಿ ಸುದರ್ಶನ್ 23 ರನ್ ಗಳಿಸಿ ಗಾಯಗೊಂಡು ನಿವೃತ್ತರಾದ ಬಳಿಕ ಗುಜರಾತ್ ರನ್ ವೇಗ ಕುಸಿಯಿತು. ಪವರ್ ಪ್ಲೇ ಬಳಿಕ ಗುಜರಾತ್ ಬ್ಯಾಟರ್​ಗಳು ಬಿಗ್ ಶಾಟ್ ಆಡದಂತೆ ತಡೆಯುವಲ್ಲಿ ಕೆಕೆಆರ್ ಬೌಲರ್​ಗಳು ಯಶಸ್ವಿಯಾದರು. ಗಿಲ್ ಜೊತೆಗೂಡಿದ ಬಟ್ಲರ್​ಗೆ ಮುಕ್ತವಾಗಿ ಬ್ಯಾಟ್ ಬೀಸಲು ಸಾಧ್ಯವಾಗಲಿಲ್ಲ. ಆದಾಗ್ಯೂ ನಾಯಕನ ಇನ್ನಿಂಗ್ಸ್ ಆಡಿದ ಗಿಲ್ 33 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ತಂಡಕ್ಕೆ 85 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು.

KKR vs GT IPL 2026 Highlights: ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆದ್ದ ಕೆಕೆಆರ್

ಗುರಿ ಬೆನ್ನಟ್ಟುವಲ್ಲಿ ಗುಜರಾತ್ ವಿಫಲ

ಜೋಸ್ ಬಟ್ಲರ್ ಕೂಡ 57 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಅವರ ಇನ್ನಿಂಗ್ಸ್​ನಲ್ಲಿ ವೇಗ ಇರಲಿಲ್ಲ. ಇದು ಕೂಡ ಇತರೆ ಬ್ಯಾಟರ್​ಗಳ ಮೇಲೆ ಹೆಚ್ಚಿನ ಒತ್ತಡ ಹೇರಿತು. ಗಿಲ್ ವಿಕೆಟ್ ಬಳಿಕ ಮತ್ತೆ ಬ್ಯಾಟಿಂಗ್​ಗೆ ಬಂದ ಸುದರ್ಶನ್ ಅಜೇಯ 57 ರನ್​ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ದಡ ಮುಟ್ಟಿಸುವಲ್ಲಿ ವಿಫಲರಾದರು. ಕೆಕೆಆರ್ ಪರ ಸುನಿಲ್ ನರೈನ್ ಗರಿಷ್ಠ 2 ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:41 pm, Sat, 16 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ