AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೆಎಲ್, ಕೋಚ್ ದ್ರಾವಿಡ್​ಗೆ ಶುರುವಾಗಿದೆ ಒಂದಲ್ಲ ಎರಡಲ್ಲ ಮೂರು ಹೊಸ ಟೆನ್ಶನ್

India vs South Africa: ಜೂನ್ 9 ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಆರಂಭವಾಗಲಿದ್ದು ಭಾರತೀಯ (IND vs SA) ಯುವ ಪಡೆ ತಯಾರಿ ನಡೆಸಬೇಕಿದೆ. ಆದರೆ, ಸರಣಿ ಆರಂಭಕ್ಕೂ ಮುನ್ನ ನಾಯಕ ಹಾಗೂ ಕೋಚ್ ದ್ರಾವಿಡ್​ಗೆ ಹೊಸ ತಲೆನೋವು ಶುರುವಾಗಿದೆ.

IND vs SA: ಕೆಎಲ್, ಕೋಚ್ ದ್ರಾವಿಡ್​ಗೆ ಶುರುವಾಗಿದೆ ಒಂದಲ್ಲ ಎರಡಲ್ಲ ಮೂರು ಹೊಸ ಟೆನ್ಶನ್
KL Rahul and Rahul Dravid
TV9 Web
| Updated By: Vinay Bhat|

Updated on:Jun 03, 2022 | 10:47 AM

Share

ಐಪಿಎಲ್ ಮುಕ್ತಾಯದ ಬಳಿಕ ವಿಶ್ರಾಂತಿಯಲ್ಲಿರುವ ಟೀಮ್ ಇಂಡಿಯಾ (Team India) ಆಟಗಾರರು ಇನ್ನೆರಡು ದಿನಗಳಲ್ಲಿ ಮುಂದಿನ ಸರಣಿಗೆ ಸಜ್ಜಾಗಲಿದ್ದಾರೆ. ಜೂನ್ 9 ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಆರಂಭವಾಗಲಿದ್ದು ಭಾರತೀಯ (IND vs SA) ಯುವ ಪಡೆ ತಯಾರಿ ನಡೆಸಬೇಕಿದೆ. ಐದು ಪಂದ್ಯಗಳ ಟಿ20 ಸರಣಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್‌ ಶರ್ಮ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಕೆಎಲ್ ‌ರಾಹುಲ್‌ (KL Rahul) ತಂಡವನ್ನು ಮುನ್ನಡೆಸಲಿದ್ದಾರೆ. ರಿಷಬ್ ಪಂತ್ ಉಪನಾಯಕನಾಗಿದ್ದಾರೆ. ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್‌ ಶಮಿ ಅವರಿಗೂ ರೆಸ್ಟ್ ನೀಡಲಾಗಿದೆ. ಹಾರ್ದಿಕ್‌ ಪಾಂಡ್ಯ ಮತ್ತು ದಿನೇಶ್‌ ಕಾರ್ತಿಕ್‌ ತಂಡಕ್ಕೆ ಕಮ್‌ಬ್ಯಾಕ್‌ ಮಾಡುವ ಜೊತೆಗೆ ಕೆಲ ಯುವ ಆಟಗಾರರು ಕೂಡ ಆಯ್ಕೆಯಾಗಿದ್ದಾರೆ. ಆದರೆ, ಸರಣಿ ಆರಂಭಕ್ಕೂ ಮುನ್ನ ನಾಯಕ ಹಾಗೂ ಕೋಚ್ ದ್ರಾವಿಡ್​ಗೆ ಹೊಸ ತಲೆನೋವು ಶುರುವಾಗಿದೆ. ಪ್ಲೇಯಿಂಗ್ ಇಲೆವೆನ್ ವಿಚಾರದಲ್ಲಿ ಮೂರು ಮಹತ್ವದ ನಿರ್ಧಾರ ಕೈಗೊಳ್ಳಬೇಕಾದ ಒತ್ತಡ ಇವರ ಮೇಲಿದೆ. ಅವುಗಳು ಯಾವುವು ಎಂಬುದನ್ನು ನೋಡೋಣ.

ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಕ್ರಮಾಂಕ:

ಐಪಿಎಲ್ 2022 ರಲ್ಲಿ ಹಾರ್ದಿಕ್ ಅವರ ಬ್ಯಾಟಿಂಗ್-ಬೌಲಿಂಗ್ ಅದ್ಭುತವಾಗಿತ್ತು. 487 ರನ್ ಕಲೆಹಾಕಿದ್ದರು. ಆದರೆ, ಇವರು ಬ್ಯಾಟಿಂಗ್ ಮಾಡಲು ಬರುತ್ತಿದ್ದ ಕ್ರಮಾಂಕ 3 ಅಥವಾ 4. ಆದರೆ, ಇದೀಗ ಟೀಮ್ ಇಂಡಿಯಾಕ್ಕೆ ಬಂದ ಮೇಲೆ ಇವರ ಬ್ಯಾಟಿಂಗ್ ಕ್ರಮಾಂಕ ಯಾವುದು ಎಂಬ ಚಿಂತೆ ಶುರುವಾಗಿದೆ. ಯಾಕೆಂದರೆ ಟಾಪ್ ಆರ್ಡರ್​ನಲ್ಲಿ ಈಗಾಗಲೇ ಕೆಎಲ್ ರಾಹುಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಹೀಗೆ ಪ್ರಮುಖ ಬ್ಯಾಟರ್​ಗಳಿದ್ದಾರೆ. ನಾಯಕ ಹಾಗೂ ಕೋಚ್ ದ್ರಾವಿಡ್ ಈ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳಬೇಕಿದೆ.

ಇದನ್ನೂ ಓದಿ
Image
ENG vs NZ, 1st Test: ಲಾರ್ಡ್​​ನಲ್ಲಿ ವಿಕೆಟ್​ಗಳ ಸುರಿಮಳೆ: ಮೊದಲ ದಿನವೇ ಪತನಗೊಂಡವು 17 ವಿಕೆಟ್ಸ್
Image
ಕಳಪೆ ಫಾರ್ಮ್​, ತಂಡದಿಂದ ಕೋಕ್.. ಐಪಿಎಲ್‌ನಲ್ಲೂ ಸೈಲೆಂಟ್, ಈಗ ಗಾಯದ ಸಮಸ್ಯೆ; ರಹಾನೆ ತಂಡಕ್ಕೆ ಮರಳುವುದು ಯಾವಾಗ?
Image
ಉಮ್ರಾನ್ ಭಾರತೀಯ ಕ್ರಿಕೆಟ್‌ನ ಅದ್ಭುತ ಆವಿಷ್ಕಾರ! ಮುಂದೊಂದು ದಿನ ಅಖ್ತರ್ ದಾಖಲೆ ಮುರಿಯುತ್ತಾನೆ; ಬ್ರೆಟ್ ಲೀ
Image
French Open 2022: ಗ್ರ್ಯಾಂಡ್ ಸ್ಲಾಮ್ ಫೈನಲ್ ಆಡುವ ರೋಹನ್ ಬೋಪಣ್ಣ ಕನಸು ಭಗ್ನ; ಸೆಮಿಫೈನಲ್‌ನಲ್ಲಿ ಸೋಲು

ರಾಹುಲ್ ಜೊತೆ ಓಪನರ್ ಯಾರು?:

ಇಬ್ಬರು ರಾಹುಲ್​ಗೆ ಇರುವ ಮತ್ತೊಂದು ಟೆನ್ಶನ್ ಎಂದರೆ ಆರಂಭಿಕರು ಯಾರು ಎಂಬುದು. ಇದಕ್ಕೆ ಎರಡು ಆಯ್ಕೆ ಇದೆ. ಕೆಎಲ್ ಖಚಿತವಾಗಿ ಇನ್ನಿಂಗ್ಸ್​ ಆರಂಭಿಸಿದರೆ ಇನ್ನೊಂದು ಆಯ್ಕೆ ರುತುರಾಜ್ ಗಾಯಕ್ವಡ್ ಅಥವಾ ಇಶಾನ್ ಕಿಶನ್. ಇಬ್ಬರು ಕೂಡ ಡಿಸೆಂಟ್ ಫಾರ್ಮ್​ನಲ್ಲಿದ್ದಾರೆ. ಟೀಮ್ ಇಂಡಿಯಾದ ಭವಿಷ್ಯದ ಓಪನರ್ ಕೂಡ ಹೌದು, ಹೀಗಾಗಿ ಇವರಲ್ಲಿ ಯಾರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಎಂಬುದು ನೋಡಬೇಕಿದೆ.

Lionel Messi: ಫೈನಲಿಸಿಮಾ ಕಪ್ ಗೆದ್ದುಕೊಂಡ ಅರ್ಜೆಂಟಿನಾ: ಲಿಯೊನೆಲ್ ಮೆಸ್ಸಿ ವಿಶೇಷ ಸಾಧನೆ

ಬೌಲಿಂಗ್ ಪಡೆ ಹೇಗೆ?:

ಬೌಲರ್​ಗಳ ದಂಡೇ ಟೀಮ್ ಇಂಡಿಯಾದಲ್ಲಿದೆ. ಯುಜ್ವೇಂದ್ರ ಚಹಲ್ ಹಾಗೂ ಕುಲ್ದೀಪ್ ಯಾದವ್ ಸ್ಪಿನ್ ಜೋಡಿಯಾದರೆ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಶ್​ದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್ ವೇಗಿಗಳಾಗಿದ್ದಾರೆ. ಐಪಿಎಲ್​ನಲ್ಲಿ ಹರ್ಷಲ್ ಉತ್ತಮ ಪ್ರದರ್ಶನ ನೀಡಿದ್ದರು. ಭುವಿ ಹಾಗೂ ಅರ್ಶ್​ದೀಪ್ ನಿರೀಕ್ಷೆಯ ಮಟ್ಟ ತಲುಪಲಿಲ್ಲ. ಆವೇಶ್ ಹಾಗೂ ಉಮ್ರಾನ್ ಸ್ಪೀಡ್ ಸ್ಟಾರ್​ಗಳಾಗಿದ್ದಾರೆ. ಒಟ್ಟಾರೆ ಬೌಲಿಂಗ್ ಆಯ್ಕೆ ಕೂಡ ಟೀಮ್ ಇಂಡಿಯಾಕ್ಕೆ ದೊಡ್ಡ ಸವಾಲಾಗಲಿದೆ.

ಜೂನ್ 9 ರಿಂದ ಆರಂಭಗೊಳ್ಳುವ ಮೊದಲ ಟಿ20 ಪಂದ್ಯವು ದೆಹಲಿಯಲ್ಲಿ ನಡೆಯಲಿದ್ದು, ಜೂನ್ 12 ಎರಡನೇ ಟಿ20 ಕಟಕ್, ಜೂನ್ 14 ಮೂರನೇ ಟಿ20 ವಿಶಾಖಪಟ್ಟಣಂ, ಜೂನ್ 17 ನಾಲ್ಕನೇ ಟಿ20 ರಾಜ್‌ಕೋಟ್‌, ಜೂನ್ 19 ಐದನೇ ಟಿ20 ಬೆಂಗಳೂರಿನಲ್ಲಿ ನಡೆಯಲಿದೆ.

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ/ ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:47 am, Fri, 3 June 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್