AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಏನಾಯ್ತು ರಾಹುಲ್..? ಕನ್ನಡಿಗನ ಹೆಗಲೇರಿದ ಕಳಪೆ ಫಾರ್ಮ್​ ಭೂತ

IND A vs AUS A: ಸತತ ವೈಫಲ್ಯಗಳಿಂದ ಬಳಲಿರುವ ಕನ್ನಡಿಗ ಕೆಎಲ್ ರಾಹುಲ್ ಇದೀಗ ಆಸ್ಟ್ರೇಲಿಯಾ ಎ ವಿರುದ್ಧದ ಅಭ್ಯಾಸ ಪಂದ್ಯದಲ್ಲೂ ಮುಗ್ಗರಿಸಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯುವ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವಲ್ಲಿ ರಾಹುಲ್ ಎಡವಿದ್ದಾರೆ. ಎರಡನೇ ಪಂದ್ಯದ ಎರಡೂ ಇನ್ನಿಂಗ್ಸ್​ಗಳಲ್ಲಿ ರಾಹುಲ್ ಕೇವಲ 14 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದಾರೆ.

KL Rahul: ಏನಾಯ್ತು ರಾಹುಲ್..? ಕನ್ನಡಿಗನ ಹೆಗಲೇರಿದ ಕಳಪೆ ಫಾರ್ಮ್​ ಭೂತ
ಕೆಎಲ್ ರಾಹುಲ್
ಪೃಥ್ವಿಶಂಕರ
|

Updated on: Nov 08, 2024 | 3:54 PM

Share

ಕೆಲವೇ ಕೆಲವು ತಿಂಗಳುಗಳ ಹಿಂದೆ ಟೀಂ ಇಂಡಿಯಾದ ಭರವಸೆ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕನ್ನಡಿಗ ಕೆಎಲ್ ರಾಹುಲ್, ಅದ್ಯಾಕೋ ಇತ್ತೀಚೆಗೆ ಬ್ಯಾಟಿಂಗ್‌ ಮರೆತವರಂತೆ ವರ್ತಿಸುತ್ತಿದ್ದಾರೆ. ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಎಷ್ಟು ಸರ್ಕಸ್ ಮಾಡಬೇಕು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಆದಾಗ್ಯೂ ಅವಕಾಶಗಳ ಮೇಲೆ ಅವಕಾಶಗಳನ್ನು ನೀಡುತ್ತಿದ್ದರೂ ರಾಹುಲ್​ಗೆ ಮಾತ್ರ ಆಯ್ಕೆ ಮಂಡಳಿ ಮೆಚ್ಚುವಂತಹ ಇನ್ನಿಂಗ್ಸ್ ಆಡಲು ಸಾಧ್ಯವಾಗುತ್ತಿಲ್ಲ. ಇನ್ನಿಂಗ್ಸ್ ಕಥೆ ಹಾಗಿರಲಿ, ರಾಹುಲ್​ಗೆ ಚೆಂಡನ್ನು ಹೇಗೆ ಎದುರಿಸಬೇಕು ಎಂಬುದೇ ಮರೆತು ಹೋಗಿರುವಂತೆ ತೋರುತ್ತಿದೆ. ಇದಕ್ಕೆ ಉದಾಹರಣೆಯಾಗಿ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರಾಹುಲ್ ಔಟಾದ ರೀತಿಯೇ ನಮ್ಮ ಕಣ್ಣ ಮುಂದಿದೆ.​

ರಾಹುಲ್​ಗೆ ಕ್ರಿಕೆಟ್ ಮರೆತು ಹೋಗಿದ್ಯಾ?

ಈ ಮುಂಚೆ ಸ್ಪಿನ್ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದ ರಾಹುಲ್ ಇದೀಗ ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ನಾಯಕ ರೋಹಿತ್ ಅಲಭ್ಯರಾಗುವ ಸಾಧ್ಯತೆಗಳಿವೆ. ಹೀಗಾಗಿ ರಾಹುಲ್​ರನ್ನು ಆರಂಭಿಕರನ್ನಾಗಿ ಕಣಕ್ಕಿಳಿಸುವ ಇರಾದೆಯೊಂದಿಗೆ ಬಿಸಿಸಿಐ, ರಾಹುಲ್​ರನ್ನು ಆಸ್ಟ್ರೇಲಿಯಾ ಎ ವಿರುದ್ಧ ಅಭ್ಯಾಸ ಪಂದ್ಯವನ್ನಾಡಲು ಆಸ್ಟ್ರೇಲಿಯಾಕ್ಕೆ ಕಳುಹಿಸಿತ್ತು. ಆದರೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಳ್ಳುವಲ್ಲಿ ಎಡವಿದ ರಾಹುಲ್, ಮೊದಲ ಇನ್ನಿಂಗ್ಸ್​ನಲ್ಲಿ 4 ರನ್​ಗಳಿಗೆ ಸುಸ್ತಾದರೆ, ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 10 ರನ್​ ಬಾರಿಸಲಷ್ಟೇ ಶಕ್ತರಾದರು. ಆದರಲ್ಲೂ ಎರಡನೇ ಇನ್ನಿಂಗ್ಸ್​ನಲ್ಲಿ ರಾಹುಲ್ ವಿಕೆಟ್ ಕಳೆದುಕೊಂಡ ರೀತಿಗೆ ಟೀಂ ಇಂಡಿಯಾ ಫ್ಯಾನ್ಸ್ ಅಚ್ಚರಿಗೊಂಡಿರುವುದಲ್ಲದೆ, ರಾಹುಲ್​ಗೆ ಕ್ರಿಕೆಟ್ ಮರೆತು ಹೋಗಿದ್ಯಾ ಎಂದು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ರಾಹುಲ್​ಗೆ ಏನಾಗಿದೆ?

ಎರಡನೇ ಇನ್ನಿಂಗ್ಸ್​ನಲ್ಲಿ ರಾಹುಲ್ ಆಫ್ ಸ್ಪಿನ್ನರ್ ರೋಚಿಸಿಯೋಲಿ ಎಸೆತದಲ್ಲಿ ಬೌಲ್ಡ್ ಆದರು. ರೋಚಿಸಿಯೋಲಿ ಬೌಲ್ ಮಾಡಿದ ತೀರಾ ಸಾಮಾನ್ಯ ಚೆಂಡು ಮಧ್ಯದ ಸ್ಟಂಪ್‌ನಲ್ಲಿ ಬಿದ್ದು ರಾಹುಲ್ ಕಡೆಗೆ ಹೋಯಿತು. ಆದರೆ ರಾಹುಲ್ ಈ ಚೆಂಡನ್ನು ಬ್ಯಾಟ್‌ನಲ್ಲಿ ಆಡುವ ಬದಲು, ತನ್ನ ಕಾಲಿನಿಂದ ಆಡಿದರು. ಆ ಬಳಿಕ ಚೆಂಡು, ರಾಹುಲ್ ಅವರ ಕಾಲಿಗೆ ಬಡಿದು ಸ್ಟಂಪ್‌ಗೆ ಹೋಯಿತು. ಇಷ್ಟು ಸಾಮಾನ್ಯ ಎಸೆತದಲ್ಲಿ ರಾಹುಲ್ ಬೌಲ್ಡ್ ಆಗಿದ್ದು, ಆಸ್ಟ್ರೇಲಿಯಾದ ವೀಕ್ಷಕ ವಿವರಣೆಗಾರರಿಗೂ ಅಚ್ಚರಿ ಮೂಡಿಸಿತು. ರಾಹುಲ್ ಕೂಡ ತುಂಬಾ ನಿರಾಶೆಗೊಂಡಿದಲ್ಲದೆ, ನೋವಿನೊಂದಿಗೆ ಪೆವಿಲಿಯನ್​ತ್ತ ಹೆಜ್ಜೆ ಹಾಕಿದರು.

ರಕ್ಷಣಾತ್ಮಕ ಆಟವೇ ರಾಹುಲ್​ಗೆ ಮುಳುವಾಯ್ತು

ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಔಟಾದ ರೀತಿಯನ್ನು ನೋಡಿದರೆ ಅವರು ದಿನದಾಟವನ್ನು ಹೇಗಾದರೂ ಮಾಡಿ ಮುಗಿಸಲು ಪ್ರಯತ್ನಿಸುತ್ತಿರುವಂತೆ ಕಾಣುತ್ತಿತ್ತು. ಒಂದು ವೇಳೆ ರಾಹುಲ್ ಆಕ್ರಮಣಕಾರಿ ಧೋರಣೆ ಅನುಸರಿಸಿದ್ದರೆ ಹೆಚ್ಚು ರನ್ ಗಳಿಸಬಹುದಿತ್ತು. ಎರಡನೇ ಇನ್ನಿಂಗ್ಸ್​ನಲ್ಲಿ 44 ಎಸೆತಗಳನ್ನು ಆಡಿದ ರಾಹುಲ್ ಅವರ ಬ್ಯಾಟ್‌ನಿಂದ ಬಂದಿದ್ದು ಕೇವಲ 10 ರನ್ ಮಾತ್ರ. ರಾಹುಲ್​ಗೆ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಂಡರಿ ಬಾರಿಸಲೂ ಸಾಧ್ಯವಾಗಲಿಲ್ಲ.

ಕೈಕೊಟ್ಟ ಅಗ್ರ ಕ್ರಮಾಂಕ

ರಾಹುಲ್ ಮಾತ್ರವಲ್ಲ, ಮೆಲ್ಬೋರ್ನ್ ಮೈದಾನದಲ್ಲಿ ಭಾರತ ಎ ತಂಡದ ಸಂಪೂರ್ಣ ಅಗ್ರ ಕ್ರಮಾಂಕ ವಿಫಲವಾಯಿತು. ಅಭಿಮನ್ಯು ಈಶ್ವರನ್ 17 ರನ್ ಗಳಿಸಿ ಔಟಾದರೆ, ಸಾಯಿ ಸುದರ್ಶನ್ ಕೇವಲ 3 ರನ್ ಗಳಿಸಿದರು. ಗಾಯಕ್ವಾಡ್ ಅವರ ಬ್ಯಾಟ್‌ನಿಂದ ಕೇವಲ 11 ರನ್ ಬಂದವು. ಪಡಿಕ್ಕಲ್ ಒಂದು ರನ್​ಗಳಿಗೆ ಸುಸ್ತಾದರು. ಹೀಗಾಗಿ ಎರಡನೇ ಪಂದ್ಯದಲ್ಲೂ ಟೀಂ ಇಂಡಿಯಾ ಸೋಲುವ ಭೀತಿಯಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ