AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಬರ್ತ್​ಡೇ ದಿನ ಕೇಕ್​ನಲ್ಲಿ ಮಿಂದೆದ್ದ ಕನ್ನಡಿಗ ಕೆಎಲ್​ ರಾಹುಲ್

ಕೆಎಲ್ ರಾಹುಲ್ ಮುಖಕ್ಕೆ ಕೇಕ್ ಹಚ್ಚೋಕೆ ಆರಂಭಿಸಿದರು ತಂಡದವರು. ಆ ಬಳಿಕ ರಾಹುಲ್ ಶರ್ಟ್ ತೆಗೆಯುತ್ತಿದ್ದಂತೆ ಅವರ ಮೈಗೆಲ್ಲ ಕೇಕ್ ಮೆತ್ತಲಾಯಿತು. ರಾಹುಲ್​ಗೆ ಈಗ 32 ವರ್ಷ ತುಂಬಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸಿದ್ದಾರೆ. ಬರ್ತ್​ಡೇ ಸಂದರ್ಭದ ಫೋಟೋ ವೈರಲ್ ಆಗಿದೆ.

KL Rahul: ಬರ್ತ್​ಡೇ ದಿನ ಕೇಕ್​ನಲ್ಲಿ ಮಿಂದೆದ್ದ ಕನ್ನಡಿಗ ಕೆಎಲ್​ ರಾಹುಲ್
ರಾಹುಲ್
ರಾಜೇಶ್ ದುಗ್ಗುಮನೆ
|

Updated on: Apr 19, 2024 | 8:31 AM

Share

ಟೀಂ ಇಂಡಿಯಾ ಕ್ರಿಕೆಟರ್, ಕನ್ನಡಿಗ ಕೆಎಲ್ ರಾಹುಲ್ ಅವರು ಏಪ್ರಿಲ್ 18ರಂದು ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಸದ್ಯ ಅವರು ಐಪಿಎಲ್​ನಲ್ಲಿ ಲಖ್ನೋ ಸೂಪರ್ ಜೈಂಟ್ಸ್ (LSG) ತಂಡವನ್ನು ಮುನ್ನಡೆಸುತ್ತಿದ್ದಾರೆ. ತಂಡದ ಜೊತೆ ಅವರು ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ವೇಳೆ ಅವರು ಕೇಕ್​ನಲ್ಲೇ ಮಿಂದೆದ್ದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ಯಾನ್ಸ್ ಇದಕ್ಕೆ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಲಖ್ನೋ ಸೂಪರ್ ಜೈಂಟ್ಸ್ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದೆ. ರಾಹುಲ್​ಗಾಗಿ ನಾನಾ ರೀತಿಯ ಕೇಕ್​ಗಳನ್ನು ಇಡಲಾಗಿತ್ತು. ಸಿಂಪಲ್ ಆಗಿ ಆಗಮಿಸಿದ ಅವರು ಇತರ ಆಟಗಾರರ ಜೊತೆ ಕೇಕ್ ಕತ್ತರಿಸಿದರು. ಈ ವೇಳೆ ಎಲ್ಲರೂ ರಾಹುಲ್ ಮುಖಕ್ಕೆ ಕೇಕ್ ಹಚ್ಚೋಕೆ ಆರಂಭಿಸಿದರು. ಆ ಬಳಿಕ ರಾಹುಲ್ ಶರ್ಟ್ ತೆಗೆಯುತ್ತಿದ್ದಂತೆ ಅವರ ಮೈಗೆಲ್ಲ ಕೇಕ್ ಮೆತ್ತಲಾಯಿತು. ರಾಹುಲ್​ಗೆ ಈಗ 32 ವರ್ಷ ತುಂಬಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ರಾಹುಲ್ ಅವರು ಬರ್ತ್​ಡೇ ದಿನವೂ ಪ್ರ್ಯಾಕ್ಟಿಸ್ ಕಡೆ ಹೆಚ್ಚು ಗಮನ ಹರಿಸಿದ್ದಾರೆ. ಇಂದು (ಏಪ್ರಿಲ್ 19) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಅವರು ಎದುರಿಸಲಿದ್ದಾರೆ. ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಮ್ಯಾಚ್​ಗಳನ್ನು ಚೆನ್ನೈ ಗೆದ್ದಿದೆ. ಲಖನೌ ಆಡಿದ ಆರು ಪಂದ್ಯಗಳಲ್ಲಿ ಮೂರನ್ನು ಮಾತ್ರ ಗೆದ್ದಿದೆ. ಹೀಗಾಗಿ, ಚೆನ್ನೈ ವಿರುದ್ಧ ಗೆಲುವು ಸಾಧಿಸಬೇಕಾದ ಅನಿವಾರ್ಯತೆ ಅವರಿಗೆ ಇದೆ.

ಇದನ್ನೂ ಓದಿ: ‘ಮದುವೆ ಬಳಿಕ ಕೆಎಲ್​ ರಾಹುಲ್​, ಅಥಿಯಾ ಶೆಟ್ಟಿ ಪೋಸ್​ ಕೊಡ್ತಾರೆ’; ಪಾಪರಾಜಿಗಳಿಗೆ ಸುನೀಲ್​ ಶೆಟ್ಟಿ ಭರವಸೆ

ದೆಹಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಲ್​ಎಸ್​ಜಿ ಸೋಲು ಕಂಡಿದೆ. ಇದು ರಾಹುಲ್ ತಂಡದ ಸ್ಫೂರ್ತಿಯನ್ನು ಕುಗ್ಗಿಸಿದೆ. ಮತ್ತ ಚೈತನ್ಯ ಪಡೆಯಬೇಕು ಎಂದಾದರೆ ಬಲಿಷ್ಠ ಚೆನ್ನೈ ವಿರುದ್ಧ ಗೆಲುವು ಸಾಧಿಸಲೇಬೇಕಾದ ಅನಿವಾರ್ಯತೆ ಅವರಿಗೆ ಇದೆ. ರಾಹುಲ್ ಅವರು ತಮ್ಮ ಕನ್ಸಿಸ್ಟನ್ಸಿ ಬಗ್ಗೆ ಗಮನಹರಿಸಬೇಕಿದೆ. ಅವರು ಈ ಬಾರಿ ಆರು ಮ್ಯಾಚ್​ಗಳಲ್ಲಿ 204 ರನ್ ಬಾರಿಸಿದ್ದು, 138 ಸ್ಟ್ರೈಕ್​ರೇಟ್ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ