AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022, GT vs LSG: ಹಾರ್ದಿಕ್ ಮ್ಯಾಜಿಕ್: ಮೊದಲ ಪಂದ್ಯದಲ್ಲೇ ಕೆಎಲ್ ರಾಹುಲ್ ನಾಯಕನಾಗಿ ಫೇಲ್

Gujarat Titans vs Lucknow Super Giants: ಮೇಲ್ನೋಟಕ್ಕೆ ಸಾಕಷ್ಟು ಬಲಿಷ್ಠವಾಗಿದ್ದ, ನಾಯಕನಾಗಿ ಅನುಭವ ಹೊಂದಿರುವ ಕೆಎಲ್ ರಾಹುಲ್ ಪಡೆ ಈ ಪಂದ್ಯದಲ್ಲಿ ಸೋಲು ಅನುಭವಿಸಿತು. ಜೊತೆಗೆ ನಾಯಕನಾಗಿಯೂ ರಾಹುಲ್ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಔಟಾಗಿ ಪೆವಿಲಿಯನ್ ಸೇರಿಕೊಂಡರು.

IPL 2022, GT vs LSG: ಹಾರ್ದಿಕ್ ಮ್ಯಾಜಿಕ್: ಮೊದಲ ಪಂದ್ಯದಲ್ಲೇ ಕೆಎಲ್ ರಾಹುಲ್ ನಾಯಕನಾಗಿ ಫೇಲ್
GT vs LSG IPL 2022
TV9 Web
| Edited By: |

Updated on: Mar 29, 2022 | 7:39 AM

Share

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸೋಮವಾರ ಎರಡು ಹೊಸ ತಂಡಗಳ ನಡುವೆ ನಡೆದ ಕದನ ಸಾಕಷ್ಟು ಕುತೂಹಲ ಕೆರಳಿಸಿತ್ತು. ಕುಚುಕು ಸ್ನೇಹಿತರಾದ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಹಾಗೂ ಗುಜರಾತ್ ಲಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮುಖಾಮುಖಿ ಆಗಿದ್ದರು. ಮೇಲ್ನೋಟಕ್ಕೆ ಸಾಕಷ್ಟು ಬಲಿಷ್ಠವಾಗಿದ್ದ, ನಾಯಕನಾಗಿ ಅನುಭವ ಹೊಂದಿರುವ ಕೆಎಲ್ ರಾಹುಲ್ ಪಡೆ ಈ ಪಂದ್ಯದಲ್ಲಿ ಸೋಲು ಅನುಭವಿಸಿತು. ಜೊತೆಗೆ ನಾಯಕನಾಗಿಯೂ ರಾಹುಲ್ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಔಟಾಗಿ ಪೆವಿಲಿಯನ್ ಸೇರಿಕೊಂಡರು. ಹಾರ್ದಿಕ್ ಪಾಂಡ್ಯ ಪಡೆ 5 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಐಪಿಎಲ್ 2022 ರಲ್ಲಿ (IPL 2022) ಶುಭಾರಂಭ ಕಂಡಿದೆ. ರಾಹುಲ್ ತೇವಾಟಿಯ (Rahul Tewatia) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್‌ಗೆ, ಮೊದಲ ಓವರ್‌ನ ಮೊದಲ ಎಸೆತದಲ್ಲೇ ಮೊಹಮ್ಮದ್ ಶಮಿ ಶಾಕ್ ನೀಡಿದರು. ಮೊದಲ ಬಾಲ್​ ಎಲ್ ರಾಹುಲ್ ಬ್ಯಾಟ್ ಸವರಿಕೊಂಡು ಹೋಗಿ ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಕೈ ಸೇರಿತು. ಆದರೆ ಆನ್‌ಫೀಲ್ಡ್ ಅಂಪೈರ್ ಯಾವುದೇ ತೀರ್ಪು ನೀಡಲಿಲ್ಲ. ಹೀಗಾಗಿ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಥರ್ಡ್‌ ಅಂಪೈರ್ ರಿವ್ಯೂ ತೆಗೆದುಕೊಂಡರು. ರಿವ್ಯೂನಲ್ಲಿ ಚೆಂಡು ಬ್ಯಾಟ್‌ ಸಮೀಪವೇ ಸಾಗಿದ್ದು ರಾಹುಲ್ ಮೊದಲ ಪಂದ್ಯದಲ್ಲೇ ಗೋಲ್ಡನ್ ಡಕೌಟ್ ಆದರು. ನಂತರ 9 ಎಸೆತಗಳಲ್ಲಿ 7ರನ್‌ಗೆ ಡಿಕಾಕ್‌ ವಿಕೆಟ್ ನಿರ್ಗಮಿಸಿದರು. ಇದರ ಬೆನ್ನಲ್ಲೇ ಎವಿನ್ ಲೂವಿಸ್ (10) ಕೂಡ ಪೆವಿಲಿಯನ್ ಸೇರಿಕೊಂಡರು. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ಮನೀಶ್ ಪಾಂಡೆ (6) ಆಟ ಕೂಡ ನಡೆಯಲಿಲ್ಲ.

ಕೇವಲ 29ರನ್‌ಗೆ 4 ಪ್ರಮುಖ ವಿಕೆಟ್ ಕಳೆದುಕೊಂಡಿದ್ದ ಸೂಪರ್ ಜೈಂಟ್ಸ್‌ಗೆ ದೀಪಕ್ ಹೂಡ ಹಾಗೂ ಯುವ ಆಟಗಾರ ಆಯುಷ್ ಬದೋನಿ ಆಸರೆಯಾದರು. ಕಡಿಮೆ ಮೊತ್ತಕ್ಕೆ ಆಲೌಟ್ ಆಗುವ ಭೀತಿಯಲ್ಲಿದ್ದ ತಂಡದ ರನ್ ಗತಿಯನ್ನು ಈ ಜೋಡಿ ಏರಿಸಿತು. ದೀಪಕ್ ಹೂಡ ಕೇವಲ 36 ಎಸೆತಗಳಲ್ಲಿ ಐಪಿಎಲ್‌ನಲ್ಲಿ 4ನೇ ಅರ್ಧಶತಕ ದಾಖಲಿಸಿದರೆ, ಯುವ ಬ್ಯಾಟರ್ ಆಯುಷ್ ಬದೋನಿ ಐಪಿಎಲ್‌ನಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿದರು. 41 ಎಸೆತಗಳಲ್ಲಿ 55ರನ್ ಕಲೆಹಾಕಿದ್ದ ದೀಪಕ್ ಹೂಡ ಔಟಾದರೆ, ಆಯುಷ್ 41 ಎಸೆತಗಳಲ್ಲಿ 54 ರನ್ ಕಲೆಹಾಕಿದರು. ಕೊನೆಯಲ್ಲಿ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅಜೇಯ 21 ರನ್ ಸಿಡಿಸಿದ ಪರಿಣಾಮ ಲಖನೌ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158ರನ್ ಕಲೆಹಾಕಿತು. ಗುಜರಾತ್ ಪರ ಶಮಿ 3, ವರುಣ್ ಆಯರೋನ್ 2, ರಶೀದ್ 1 ವಿಕೆಟ್ ಕಿತ್ತರು.

ಟಾರ್ಗೆಟ್ ಬೆನ್ನಟಗಟಿದ ಗುಜರಾತ್‌ ಟೈಟನ್ಸ್‌ ತಂಡ, ನಿರ್ಣಾಯಕ ಘಟ್ಟಗಳಲ್ಲಿ ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು. ಅಂತಿಮವಾಗಿ 19.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್‌ ಬಾರಿಸಿ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ ಅಂಕಪಟ್ಟಿಯಲ್ಲಿ ಖಾತೆ ತೆರೆಯಿತು. ಟೈಟನ್ಸ್‌ ಪರ ಓಪನರ್‌ ಶುಭಮನ್‌ ಗಿಲ್ (0) ಮತ್ತು ವಿಜಯ್‌ ಶಂಕರ್‌ (4) ಮಾತ್ರವೇ ರನ್‌ಗಳಿಸಲು ವಿಫಲರಾದರು. ಉಳಿದ ಬ್ಯಾಟ್ಸ್‌ಮನ್‌ಗಳಾದ ಮ್ಯಾಥ್ಯೂ ವೇಡ್‌ (30), ಹಾರ್ದಿಕ್ ಪಾಂಡ್ಯ (33), ಡೇವಿಡ್‌ ಮಿಲ್ಲರ್‌ (30), ರಾಹುಲ್‌ ತೆವಾಟಿಯ (ಅಜೇಯ 40) ಮತ್ತು ಅಭಿನವ್ ಮನೋಹರ್‌ (ಅಜೇಯ 15) ಅದ್ಭುತ ಕೊಡುಗೆಯ ಮೂಲಕ ತಂಡಕ್ಕೆ ಜಯ ತಂದುಕೊಟ್ಟರು.

Shubman Gill Catch: ಸೂಪರ್​ಮ್ಯಾನ್ ಶುಭ್​ಮನ್: ಅತ್ಯಾದ್ಭುತ ಕ್ಯಾಚ್ ವಿಡಿಯೋ ಇಲ್ಲಿದೆ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ