AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್ ರಾಹುಲ್ ಭರ್ಜರಿ ಶತಕ: ಗೆಲುವಿನತ್ತ ಕರ್ನಾಟಕ

Ranji 2026: ರಣಜಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 32 ತಂಡಗಳಿಂದ ಶುರುವಾದ ಈ ಟೂರ್ನಿಯಲ್ಲಿ ಇದೀಗ ಉಳಿದಿರುವುದು 8 ತಂಡಗಳು ಮಾತ್ರ. ಈ ತಂಡಗಳ ನಡುವೆ ಇದೀಗ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯುತ್ತಿದೆ. ಈ ಮ್ಯಾಚ್​ಗಳಲ್ಲಿ ಗೆಲ್ಲುವ ತಂಡಗಳು ಸೆಮಿಫೈನಲ್​ಗೇರಲಿದೆ.

ಕೆಎಲ್ ರಾಹುಲ್ ಭರ್ಜರಿ ಶತಕ: ಗೆಲುವಿನತ್ತ ಕರ್ನಾಟಕ
Kl Rahul
ಝಾಹಿರ್ ಯೂಸುಫ್
|

Updated on: Feb 09, 2026 | 11:05 AM

Share

ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವನ್ನು ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 120 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಕರ್ನಾಟಕ ಬೌಲರ್​ಗಳು ಯಶಸ್ವಿಯಾಗಿದ್ದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಕರ್ನಾಟಕ ಪರ ಮಯಾಂಕ್ ಅಗರ್ವಾಲ್ 92 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 173 ರನ್​ಗಳಿಸಿ ಆಲೌಟ್ ಆಯಿತು.

ಮುಂಬೈ ಭರ್ಜರಿ ಬ್ಯಾಟಿಂಗ್:

53 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಮುಂಬೈ ಪರ ಆಕಾಶ್ ಆನಂದ್ 70 ರನ್ ಬಾರಿಸಿದರೆ, ಯಶಸ್ವಿ ಜೈಸ್ವಾಲ್ 36 ರನ್​ಗಳಿಸಿದರು. ಇನ್ನು ತನುಷ್ ಕೋಟ್ಯಾನ್ ಅಜೇಯ 48 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಮುಂಬೈ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಬರೋಬ್ಬರಿ 377 ರನ್​ಗಳಿಸಿ ಆಲೌಟ್ ಆಯಿತು.

ಕೆಎಲ್ ರಾಹುಲ್ ಶತಕ:

ಮೊದಲ ಇನಿಂಗ್ಸ್​ನಲ್ಲಿನ 53 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 325 ರನ್​ಗಳ ಗುರಿ ಪಡೆದ ಕರ್ನಾಟಕ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಮಯಾಂಕ್ ಅಗರ್ವಾಲ್ ಕೇವಲ 3 ರನ್​ಗಳಿಸಿ ಔಟಾಗಿದ್ದಾರೆ. ಆದರೆ ಬಳಿಕ ಬಂದ ದೇವತ್ ಪಡಿಕ್ಕಲ್ 39 ರನ್​ಗಳ ಕೊಡುಗೆ ನೀಡಿದರು.

ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ಆಡಿದ ಕೆಎಲ್ ರಾಹುಲ್ 147 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ ಶತಕ ಪೂರೈಸಿದ್ದಾರೆ. ಈ ಮೂಲಕ ಕರ್ನಾಟಕ ತಂಡವನ್ನು ಗೆಲುವಿತ್ತ ಕೊಂಡೊಯ್ಯುತ್ತಿದ್ದಾರೆ.

ಇದೀಗ 47 ಓವರ್​ಗಳ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು 3 ವಿಕೆಟ್ ಕಳೆದುಕೊಂಡು 209 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಸ್ಮರಣ್ ರವಿಚಂದ್ರನ್ ಬ್ಯಾಟಿಂಗ್ ಮುಂದುವರೆಸಿದ್ದು, ಇನ್ನು 116 ರನ್​ಗಳಿಸಿದರೆ ಪಂದ್ಯ ಗೆದ್ದು ಸೆಮಿಫೈನಲ್​ಗೇರಬಹುದು.

ಮುಂಬೈ ಪ್ಲೇಯಿಂಗ್ 11: ಅಖಿಲ್ ಹೆರ್ವಾಡ್ಕರ್ , ಯಶಸ್ವಿ ಜೈಸ್ವಾಲ್ , ಮುಶೀರ್ ಖಾನ್ , ತುಷಾರ್ ದೇಶಪಾಂಡೆ , ಆಕಾಶ್ ಆನಂದ್ (ವಿಕೆಟ್ ಕೀಪರ್) , ಶಾರ್ದೂಲ್ ಠಾಕೂರ್ (ನಾಯಕ) , ಸೂರ್ಯಾಂಶ್ ಶೆಡ್ಗೆ , ಸಿದ್ಧೇಶ್ ಲಾಡ್ , ಶಮ್ಸ್ ಮುಲಾನಿ , ತನುಷ್ ಕೋಟ್ಯಾನ್ , ಮೋಹಿತ್ ಅವಸ್ಥಿ.

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ ಮೂವರಿಲ್ಲ… ಆಸ್ಟ್ರೇಲಿಯಾಗೆ ಆಘಾತದ ಮೇಲೆ ಆಘಾತ

ಕರ್ನಾಟಕ ಪ್ಲೇಯಿಂಗ್ 11: ಕೆಎಲ್ ರಾಹುಲ್ , ಮಾಯಾಂಕ್ ಅಗರ್ವಾಲ್ , ಕರುಣ್ ನಾಯರ್ , ದೇವದತ್ತ್ ಪಡಿಕ್ಕಲ್ (ನಾಯಕ) , ಶ್ರೇಯಸ್ ಗೋಪಾಲ್ , ಸ್ಮರಣ್ ರವಿಚಂದ್ರನ್ , ಕೃತಿಕ್ ಕೃಷ್ಣ (ವಿಕೆಟ್ ಕೀಪರ್) ವಿದ್ಯಾಧರ ಪಾಟೀಲ್ , ಪ್ರಸಿದ್ಧ್ ಕೃಷ್ಣ , ಶಿಖರ್ ಶೆಟ್ಟಿ ,ವಿಧ್ವತ್ ಕಾವೇರಪ್ಪ.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK