AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ವಿವಾದಾತ್ಮಕ ತೀರ್ಪಿಗೆ ಬಲಿಯಾದ ರಾಹುಲ್; ಅಂಪೈರ್ ವಿರುದ್ಧ ಭುಗಿಲೆದ್ದ ಆಕ್ರೋಶ

KL Rahul Controversial Dismissal: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪರ್ತ್ ಟೆಸ್ಟ್ ಪಂದ್ಯದಲ್ಲಿ ಕೆ.ಎಲ್. ರಾಹುಲ್ ಅವರ ವಿವಾದಾತ್ಮಕ ಔಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಮೂರನೇ ಅಂಪೈರ್ ನೀಡಿದ ತಪ್ಪು ತೀರ್ಪಿನಿಂದಾಗಿ ರಾಹುಲ್ 26 ರನ್ ಗಳಿಗೆ ಔಟ್ ಆದರು. ಚೆಂಡು ಬ್ಯಾಟ್‌ಗೆ ತಾಗಿದೆಯೇ ಅಥವಾ ಪ್ಯಾಡ್‌ಗೆ ತಾಗಿದೆಯೇ ಎಂಬುದು ಸ್ಪಷ್ಟವಾಗಿರಲಿಲ್ಲವಾದರೂ, ಸ್ನಿಕ್ಕೋಮೀಟರ್ ಏರಿಳಿತವನ್ನು ಆಧರಿಸಿ ರಾಹುಲ್ ಔಟ್ ಎಂದು ತೀರ್ಪು ನೀಡಲಾಯಿತು. ಈ ತೀರ್ಪು ಟೀಂ ಇಂಡಿಯಾ ಅಭಿಮಾನಿಗಳನ್ನು ಕೆರಳಿಸಿದೆ.

IND vs AUS: ವಿವಾದಾತ್ಮಕ ತೀರ್ಪಿಗೆ ಬಲಿಯಾದ ರಾಹುಲ್; ಅಂಪೈರ್ ವಿರುದ್ಧ ಭುಗಿಲೆದ್ದ ಆಕ್ರೋಶ
ಕೆಎಲ್ ರಾಹುಲ್
ಪೃಥ್ವಿಶಂಕರ
|

Updated on:Nov 22, 2024 | 11:31 AM

Share

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಿದ್ದು, ಪರ್ತ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ನ ಮೊದಲ ದಿನವೇ ಅಂಪೈರ್ ನೀಡಿರುವ ಕಳಪೆ ತೀರ್ಪಿನ ಮೇಲೆ ವಿವಾದವೊಂದು ಹುಟ್ಟಿಕೊಂಡಿದೆ. ಮೂರನೇ ಅಂಪೈರ್ ನೀಡಿದ ಈ ಕೆಟ್ಟ ತೀರ್ಪಿಗೆ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ಕನ್ನಡಿಗ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಳ್ಳಬೇಕಾಯಿತು. ವಾಸ್ತವವಾಗಿ ಪರ್ತ್ ಟೆಸ್ಟ್‌ನಲ್ಲಿ ಆರಂಭಿನಾಗಿ ಕಣಕ್ಕಿಳಿದಿದ್ದ ರಾಹುಲ್, ಮಿಚೆಲ್ ಸ್ಟಾರ್ಕ್‌ ಎಸೆತದಲ್ಲಿ ಬಲಿಯಾದರು. ಆದರೆ ಫೀಲ್ಡ್ ಅಂಪೈರ್ ಔಟ್ ನೀಡದ ಹೊರತಾಗಿಯೂ, ಮೂರನೇ ಅಂಪೈರ್ ನೀಡಿದ ಕೆಟ್ಟ ತೀರ್ಪು, ಆಸ್ಟ್ರೇಲಿಯಾಕ್ಕೆ ವರವಾದರೆ, ಭಾರತಕ್ಕೆ ದುಬಾರಿಯಾಗಿದೆ. ಇದೀಗ ಮೂರನೇ ಅಂಪೈರ್ ನೀಡಿದ ವಿವಾದತ್ಮಕ ತೀರ್ಪು, ಟೀಂ ಇಂಡಿಯಾ ಅಭಿಮಾನಿಗಳನ್ನು ಕೆರಳಿಸಿದೆ.

ನಾಟೌಟ್ ನೀಡಿದ್ದ ಫೀಲ್ಡ್ ಅಂಪೈರ್

ವಾಸ್ತವವಾಗಿ ಮಿಚೆಲ್ ಸ್ಟಾರ್ಕ್​ ಎಸೆತವನ್ನು ರಾಹುಲ್ ಡಿಫೆಂಡ್ ಮಾಡಲು ಪ್ರಯತ್ನಿಸಿದರು. ಆದರೆ ಚೆಂಡು ರಾಹುಲ್ ಅವರ ಬ್ಯಾಟ್​ನ ಸಮೀಪ ಹಾದು ಹೋಗಿ ವಿಕೆಟ್ ಕೀಪರ್ ಕೈಸೇರಿತು. ಆ ಕೂಡಲೇ ಆಸೀಸ್ ಆಟಗಾರರು ರಾಹುಲ್​ ವಿಕೆಟ್​ಗೆ ಫೀಲ್ಡ್ ಅಂಪೈರ್​ ಬಳಿ ಮನವಿ ಮಾಡಿದರು. ಆದರೆ ಫೀಲ್ಡ್ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದರು. ಹೀಗಾಗಿ ಆಸೀಸ್ ಆಟಗಾರರು ರಿವ್ಯೂವ್ ಮೊರೆ ಹೋದರು. ಆಸ್ಟ್ರೇಲಿಯಾದ ಮೇಲ್ಮನವಿಯನ್ನು ಪರಿಶೀಲಿಸಿದ ಮೂರನೇ ಅಂಪೈರ್, ಚೆಂಡು ಬ್ಯಾಟ್​ಗೆ ತಾಗಿದೆಯಾ ಅಥವಾ ಪ್ಯಾಡ್​ಗೆ ತಾಗಿದೆಯಾ ಎಂಬುದನ್ನು ಸ್ಪಷ್ಟಪಡಿಸಿಕೊಳ್ಳದೆ, ರಾಹುಲ್ ಔಟೆಂದು ತೀರ್ಪು ನೀಡಿದರು. ಹೀಗಾಗಿ ಫೀಲ್ಡ್ ಅಂಪೈರ್ ಕೂಡ ತಮ್ಮ ನಿರ್ಧಾರ ಬದಲಿಸಿ, ರಾಹುಲ್ ಔಟೆಂದು ತೀರ್ಪು ಪ್ರಕಟಿಸಬೇಕಾಯಿತು.

ರಾಹುಲ್ ವಿರುದ್ಧ ತೀರ್ಪು ನೀಡದ 3ನೇ ಅಂಪೈರ್

ಆದರೆ ಇಲ್ಲಿ ಮೂಡವ ಪ್ರಶ್ನೆ ಎಂದರೆ, ಚೆಂಡು ರಾಹುಲ್ ಅವರ ಬ್ಯಾಟ್​ ಬಳಿ ಹಾದು ಹೋಗುವ ವೇಳೆ ಬ್ಯಾಟ್, ರಾಹುಲ್ ಅವರ ಪ್ಯಾಡ್​ಗೆ ತಾಗಿತ್ತು. ಇದಲ್ಲದೆ, ಚೆಂಡು ಹಾಗೂ ಬ್ಯಾಟಿನ ನಡುವೆ ಅಂತರವಿರುವುದು ಇದೀಗ ಹೊರಬಿದ್ದಿರುವ ವಿಡಿಯೋಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದಗ್ಯೂ ಮೂರನೇ ಅಂಪೈರ್, ಸ್ನಿಕ್ಕೋಮೀಟರ್‌ನಲ್ಲಿ ಬಂದ ಏರಿಳಿತವನ್ನು ಆದರಿಸಿ ರಾಹುಲ್ ಔಟೆಂದು ತೀರ್ಪು ನೀಡಿದ್ದಾರೆ. ಸಾಮಾನ್ಯವಾಗಿ, ಒಬ್ಬ ಆಟಗಾರ ಖಚಿತವಾಗಿ ಔಟ್ ಎಂಬ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗದಿದ್ದಾಗ, ಮೂರನೇ ಅಂಪೈರ್, ಫೀಲ್ಡ್ ಅಂಪೈರ್ ನೀಡಿದ ತೀರ್ಪನೇ ಎತ್ತಿಹಿಡಿಯಬೇಕು. ಆದರೆ ರಾಹುಲ್ ವಿಚಾರದಲ್ಲಿ ಇದು ಸಂಭವಿಸಲಿಲ್ಲ. ನಿರ್ಧಾರ ಅಸ್ಪಷ್ಟವಾಗಿದ್ದರೂ, ಮೂರನೇ ಅಂಪೈರ್ ರಾಹುಲ್ ಔಟೆಂದು ತೀರ್ಪು ಘೋಷಿಸಿದ್ದಾರೆ.

3 ಸಾವಿರ ರನ್ ಪೂರೈಸಿದ ರಾಹುಲ್

ಅಂಪೈರ್ ನೀಡಿದ ಈ ವಿವಾದಾತ್ಮಕ ತೀರ್ಪು ರಾಹುಲ್​ರನ್ನು ಕೆರಳಿಸಿತು. ಹೀಗಾಗಿ ರಾಹುಲ್ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿ, ನೋವಿನಿಂದಲೇ ಪೆವಿಲಿಯನ್​ತ್ತ ಹೆಜ್ಜೆ ಹಾಕಿದರು. ಔಟಾಗುವ ಮುನ್ನ ರಾಹುಲ್, ತಮ್ಮ ಇನ್ನಿಂಗ್ಸ್​ನಲ್ಲಿ 74 ಎಸೆತಗಳನ್ನು ಎದುರಿಸಿ 26 ರನ್‌ಗಳ ಇನಿಂಗ್ಸ್‌ ಆಡಿದರು. ಈ ಇನ್ನಿಂಗ್ಸ್ ಆಧಾರದಲ್ಲಿ ರಾಹುಲ್ ಟೆಸ್ಟ್‌ನಲ್ಲಿ ಮೂರು ಸಾವಿರ ರನ್ ಪೂರೈಸಿದ್ದಾರೆ. ಟೆಸ್ಟ್‌ನಲ್ಲಿ ಇದುವರೆಗೆ 54 ಪಂದ್ಯಗಳನ್ನಾಡಿರುವ ರಾಹುಲ್, ಸುಮಾರು 34ರ ಸರಾಸರಿಯಲ್ಲಿ ಎಂಟು ಶತಕ ಹಾಗೂ 15 ಅರ್ಧಶತಕಗಳೊಂದಿಗೆ ಈ ದಾಖಲೆ ಮಾಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Fri, 22 November 24

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ