AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಎರಡಂಕಿ ರನ್​ಗಳಿಸಿ ಕೆಎಲ್ ರಾಹುಲ್ ಔಟ್

KL Rahul: ಕೆಎಲ್ ರಾಹುಲ್ ಕೊನೆಯ ಬಾರಿ ಕರ್ನಾಟಕ ಪರ ಕಣಕ್ಕಿಳಿದದ್ದು 2020 ರಲ್ಲಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಬಂಗಾಳ ವಿರುದ್ಧ ಬ್ಯಾಟ್ ಬೀಸಿದ್ದ ರಾಹುಲ್ ಮೊದಲ ಇನಿಂಗ್ಸ್​ನಲ್ಲಿ 26 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದಾದ ಬಳಿಕ ರಾಹುಲ್ ಮತ್ತೆ ರಣಜಿ ಪಂದ್ಯವಾಡಿರಲಿಲ್ಲ. ಇದೀಗ 4 ವರ್ಷಗಳ ಬಳಿಕ ಕೆಎಲ್​​ಆರ್​ ದೇಶೀಯ ಅಂಗಳದಲ್ಲಿ ಕಾಣಿಸಿಕೊಂಡಿದ್ದಾರೆ.

Ranji Trophy: ಎರಡಂಕಿ ರನ್​ಗಳಿಸಿ ಕೆಎಲ್ ರಾಹುಲ್ ಔಟ್
Kl Rahul
ಝಾಹಿರ್ ಯೂಸುಫ್
|

Updated on: Jan 30, 2025 | 2:05 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಕಣಕ್ಕಿಳಿದಿರುವ ಕೆಎಲ್ ರಾಹುಲ್ ಕೇವಲ 22 ರನ್​ಗಳಿಸಿ ಔಟಾಗಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಯಾಣ ತಂಡದ ನಾಯಕ ಅಂಕಿತ್ ಕುಮಾರ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ಅನೀಶ್ ಕೆವಿ ಹಾಗೂ ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಕೇವಲ 17 ರನ್​ಗಳಿಸಿ ಅನೀಶ್ ವಿಕೆಟ್ ಒಪ್ಪಿಸಿದ್ದಾರೆ.

ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ನಾಯಕ ಮಯಾಂಕ್ ಅಗರ್ವಾಲ್ ಜೊತೆಗೂಡಿ ಇನಿಂಗ್ಸ್ ಕಟ್ಟುವ ಜವಾಬ್ದಾರಿ ಹೊತ್ತುಕೊಂಡರು. ಅದರಂತೆ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ ರಾಹುಲ್ ರಕ್ಷಣಾತ್ಮಕ ಆಟದೊಂದಿಗೆ ಇನಿಂಗ್ಸ್ ಕಟ್ಟಿದರು.

ಆದರೆ 37 ಎಸೆತಗಳಲ್ಲಿ 4 ಫೋರ್​ಗಳೊಂದಿಗೆ 26 ರನ್ ಬಾರಿಸಿದ್ದ ಕೆಎಲ್ ರಾಹುಲ್ ಅವರನ್ನು ಔಟ್ ಮಾಡುವಲ್ಲಿ ಅನ್ಶುಲ್ ಕಂಬೋಜ್ ಯಶಸ್ವಿಯಾಗಿದ್ದಾರೆ. ಇದರೊಂದಿಗೆ 4 ವರ್ಷಗಳ ಬಳಿಕ ರಣಜಿ ಟೂರ್ನಿಗೆ ಮರಳಿದ ರಾಹುಲ್ ಅವರ ಮೊದಲ ಇನಿಂಗ್ಸ್​ 26 ರನ್​ಗಳೊಂದಿಗೆ ಅಂತ್ಯಗೊಂಡಿದೆ.

ಇದಾಗ್ಯೂ ಮತ್ತೊಂದೆಡೆ ಮಯಾಂಕ್ ಅಗರ್ವಾಲ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ್ದು, 135 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 77 ರನ್ ಬಾರಿಸಿದ್ದಾರೆ. ಈ ಅಜೇಯ ಅರ್ಧಶತಕದ ನೆರವಿನಿಂದ ಕರ್ನಾಟಕ ತಂಡವು 45 ಓವರ್​ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 143 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಕರ್ನಾಟಕ (ಪ್ಲೇಯಿಂಗ್ XI): ಅನೀಶ್ ಕೆವಿ, ಮಯಾಂಕ್ ಅಗರ್ವಾಲ್ (ನಾಯಕ), ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್), ಹಾರ್ದಿಕ್ ರಾಜ್, ಯಶೋವರ್ಧನ್ ಪರಂತಪ್, ಪ್ರಸಿದ್ಧ್ ಕೃಷ್ಣ, ವಾಸುಕಿ ಕೌಶಿಕ್, ವಿಧ್ವತ್ ಕಾವೇರಪ್ಪ.

ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್

ಹರ್ಯಾಣ (ಪ್ಲೇಯಿಂಗ್ XI): ಲಕ್ಷ್ಯ ದಲಾಲ್, ಅಂಕಿತ್ ಕುಮಾರ್ (ನಾಯಕ), ಹಿಮಾಂಶು ರಾಣಾ, ನಿಶಾಂತ್ ಸಿಂಧು, ಧೀರು ಸಿಂಗ್, ರೋಹಿತ್ ಪರ್ಮೋದ್ ಶರ್ಮಾ (ವಿಕೆಟ್ ಕೀಪರ್), ಯುವರಾಜ್ ಯೋಗೇಂದರ್ ಸಿಂಗ್, ಜಯಂತ್ ಯಾದವ್, ಅನ್ಶುಲ್ ಕಾಂಬೋಜ್, ಅನುಜ್ ಥಕ್ರಾಲ್, ಅಜಿತ್ ಚಹಲ್.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ