AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಕೆಎಲ್ ರಾಹುಲ್

KL Rahul: ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾದಂತಾಗಿದೆ. ಇದಾಗ್ಯೂ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುತ್ತಾರಾ ಎಂಬುದರ ಬಗ್ಗೆ ಖಚಿತತೆ ಇಲ್ಲ.

KL Rahul: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಕೆಎಲ್ ರಾಹುಲ್
KL Rahul
TV9 Web
| Edited By: |

Updated on: Aug 26, 2023 | 8:27 PM

Share

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಭಾರತ ತಂಡದ ಅಭ್ಯಾಸ ಶಿಬಿರ ನಡೆಯುತ್ತಿದೆ. ಈ ಶಿಬಿರದ 2ನೇ ದಿನದ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕೂಡ ಕಾಣಿಸಿಕೊಂಡಿದ್ದಾರೆ. ಅದು ಕೂಡ ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ಎಂಬುದು ವಿಶೇಷ.

ಈ ಬಾರಿಯ ಏಷ್ಯಾಕಪ್​ಗೆ ಕೆಎಲ್ ರಾಹುಲ್ ಆಯ್ಕೆಯಾಗಿದ್ದರೂ ಅವರು ಸಂಪೂರ್ಣ ಫಿಟ್ ಆಗಿಲ್ಲ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ತಿಳಿಸಿದ್ದರು. ಅಲ್ಲದೆ ಪಾಕಿಸ್ತಾನ್ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ಅವರು ಫಿಟ್​ನೆಸ್ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಆದರೆ ಎನ್​ಸಿಎ ಕ್ಯಾಂಪ್​ನಲ್ಲಿ ನಡೆದ ಯೋ ಯೋ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಕೆಎಲ್​ಆರ್​ ಕೀಪಿಂಗ್ ಮಾಡುವಷ್ಟು ಫಿಟ್ ಆಗಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ 2ನೇ ದಿನದ ಅಭ್ಯಾಸದಲ್ಲಿ ರಾಹುಲ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್​ನಲ್ಲೂ ಬೆವರಿಳಿಸಿದ್ದಾರೆ.

ಇದರೊಂದಿಗೆ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾದಂತಾಗಿದೆ. ಇದಾಗ್ಯೂ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುತ್ತಾರಾ ಎಂಬುದರ ಬಗ್ಗೆ ಖಚಿತತೆ ಇಲ್ಲ.

ಒಂದು ವೇಳೆ ಮೊದಲ ಪಂದ್ಯದಿಂದ ಕೆಎಲ್ ರಾಹುಲ್ ಹೊರಗುಳಿದರೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಇಶಾನ್ ಕಿಶನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು. ಇನ್ನುಳಿದ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಗ್ಲೌಸ್ ಧರಿಸುವ ಸಾಧ್ಯತೆ ಹೆಚ್ಚಿದೆ.

ಒಟ್ಟಿನಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವುದು ಟೀಮ್ ಇಂಡಿಯಾ ಪಾಲಿಗೆ ಶುಭ ಸೂಚನೆ ಎನ್ನಬಹುದು. ಅದರಂತೆ ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲಿ ಎಂದು ಆಶಿಸೋಣ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂಬರುವ ಸರಣಿಗಳ ವೇಳಾಪಟ್ಟಿ ಪ್ರಕಟ

ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

Follow Us
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ