AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಹಳೀಯರ ನಾಡಲ್ಲಿ ಟೀಮ್ ಇಂಡಿಯಾ ಸೇರಿದ ಕೆಎಲ್ ರಾಹುಲ್: ಮೊದಲ ದಿನವೇ ಜಿಮ್​ಗೆ ಎಂಟ್ರಿ

KL Rahul hits gym in Sri Lanka: ಕೆಎಲ್ ರಾಹುಲ್ ಸೆಪ್ಟೆಂಬರ್ 5 ರಂದು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿದ್ದರು. ಮರುದಿನವೇ ಜಿಮ್‌ಗೆ ಬಂದು ಬೆವರು ಹರಿಸಲು ಶುರುಮಾಡಿಕೊಂಡಿದ್ದಾರೆ. ಜಿಮ್‌ನಲ್ಲಿ ರಾಹುಲ್ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ತಂಡ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ.

ಸಿಂಹಳೀಯರ ನಾಡಲ್ಲಿ ಟೀಮ್ ಇಂಡಿಯಾ ಸೇರಿದ ಕೆಎಲ್ ರಾಹುಲ್: ಮೊದಲ ದಿನವೇ ಜಿಮ್​ಗೆ ಎಂಟ್ರಿ
KL Rahul
Vinay Bhat
|

Updated on: Sep 07, 2023 | 10:15 AM

Share

ದೀರ್ಘ ಕಾಲದ ಇಂಜುರಿಯಿಂದ ಹಿಂತಿರುಗಿದ ಭಾರತ ತಂಡದ ವಿಕೆಟ್‌ಕೀಪರ್ ಮತ್ತು ಬ್ಯಾಟರ್ ಕೆಎಲ್ ರಾಹುಲ್ (KL Rahul) ಏಷ್ಯಾಕಪ್ 2023 ರಲ್ಲಿ ಸೂಪರ್ 4 ಹಂತದ ಮೊದಲ ಪಂದ್ಯಕ್ಕೂ ಮುನ್ನ ಶ್ರೀಲಂಕಾದಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಭಾರತವು ಸೆಪ್ಟೆಂಬರ್ 10 ರಂದು ಕೊಲಂಬೊದಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯವನ್ನಾಡಲಿದೆ. ಇದಕ್ಕೂ ಮುನ್ನ ಸೆಪ್ಟೆಂಬರ್ 6 ರಂದು ಸಿಂಹಳೀಯರ ನಾಡಿಗೆ ತಲುಪಿದ್ದಾರೆ. ವಿಶೇಷ ಎಂದರೆ ರಾಹುಲ್ ವಿಶ್ರಾಂತಿ ಕೂಡ ಪಡೆದುಕೊಳ್ಳದೆ ಅದಾಗಲೇ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿನ ಪಂದ್ಯವೊಂದರಲ್ಲಿ ರಾಹುಲ್ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ನಾಲ್ಕು ತಿಂಗಳಿಗಿಂತ ಹೆಚ್ಚು ಕಾಲ ಕ್ರಿಕೆಟ್​ನಿಂದ ಹೊರಗುಳಿಯಬೇಕಾಯಿತು. ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಪುನರ್ವಸತಿಯನ್ನು ಪ್ರಾರಂಭಿಸಿ ಕಮ್​ಬ್ಯಾಕ್ ಮಾಡಿದ್ದಾರೆ. ರಾಹುಲ್ ಸೆಪ್ಟೆಂಬರ್ 5 ರಂದು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿದ್ದರು. ಮರುದಿನವೇ ಜಿಮ್‌ಗೆ ಬಂದು ಬೆವರು ಹರಿಸಲು ಶುರುಮಾಡಿಕೊಂಡಿದ್ದಾರೆ. ಜಿಮ್‌ನಲ್ಲಿ ರಾಹುಲ್ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ತಂಡ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ
Image
ಕಿಂಗ್ ಕೊಹ್ಲಿಯ ವಿಶ್ವದಾಖಲೆ ಮುರಿದ ಪಾಕ್ ನಾಯಕ ಬಾಬರ್..!
Image
‘ನಿಮ್ಮಿಂದ ನಷ್ಟವಾಗಿದೆ ಪರಿಹಾರ ಕೊಡಿ’; ಹೊಸ ಕ್ಯಾತೆ ತೆಗೆದ ಪಿಸಿಬಿ
Image
ಕೌಂಟಿ ಕ್ರಿಕೆಟ್​ನತ್ತ ಮುಖಾಮಾಡಿದ ಯುಜ್ವೇಂದ್ರ ಚಹಲ್
Image
ಏಷ್ಯಾಕಪ್​ನಲ್ಲಿ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?

ಜಿಮ್​ನಲ್ಲಿ ರಾಹುಲ್ ವರ್ಕೌಟ್ ಮಾಡುತ್ತಿರುವು ವಿಡಿಯೋ:

ಕೆಎಲ್ ರಾಹುಲ್ ತಂಡ ಸೇರಿಕೊಂಡಿರುವ ಕಾರಣ ಟೀಮ್ ಇಂಡಿಯಾಕ್ಕೆ ಆಡುವ ಬಳಗದ್ದು ದೊಡ್ಡ ಚಿಂತೆಯಾಗಿದೆ. ಆರಂಭದ ಎರಡು ಪಂದ್ಯದಲ್ಲಿ ರಾಹುಲ್ ಸ್ಥಾನ ತುಂಬಿದ್ದ ಇಶಾನ್ ಕಿಶನ್ ಪಾಕ್ ವಿರುದ್ಧ ಬೊಂಬಾಟ್ ಪ್ರದರ್ಶನ ತೋರಿದ್ದರು. ಹೀಗಾಗಿ ಇನ್​ಫಾರ್ಮ್ ಬ್ಯಾಟರ್ ಅನ್ನು ಕೈಬಿಡುವುದು ಅಸಾಧ್ಯ. ಶುಭ್​ಮನ್ ಗಿಲ್ ಜಾಗದಲ್ಲಿ ಆಡಿಸುವ ಎಂದರೆ ಇವರು ಕೂಡ ನೇಪಳಾ ವಿರುದ್ಧ ಅರ್ಧಶತಕ ಸಿಡಿಸಿ ಅಬ್ಬರಿಸಿದ್ದರು. ಹೀಗಾಗಿ ರಾಹುಲ್​ಗೆ ಯಾರು ಜಾಗ ಮಾಡಿಕೊಡುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಬೌಂಡರಿ ತಡೆಯುವ ಯತ್ನದಲ್ಲಿ ಗಾಯಕ್ಕೆ ತುತ್ತಾದ ಪಾಕ್ ವೇಗಿ; ವಿಡಿಯೋ ನೋಡಿ

ಸೆ. 12ಕ್ಕೆ ಇಂಡೋ-ಪಾಕ್ ಪಂದ್ಯ:

ಸೂಪರ್ -4 ನಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಸೆಪ್ಟೆಂಬರ್ 10 ರಂದು ಆಯೋಜನೆ ಮಾಡಲಾಗಿದ್ದು, ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ. ಭಾರತ-ಪಾಕ್ ಪಂದ್ಯ ನಡೆಯಲಿರುವ ಆರ್. ಪ್ರೇಮದಾಸ ಸ್ಟೇಡಿಯಂನ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಪಂದ್ಯ ಸಾಗಿದಂತೆ ಟ್ರ್ಯಾಕ್ ನಿಧಾನವಾಗುತ್ತದೆ, ಆಗ ಬ್ಯಾಟರ್‌ಗಳಿಗೆ ರನ್ ಗಳಿಸಲು ಕಷ್ಟವಾಗುತ್ತದೆ. ಮತ್ತೊಂದೆಡೆ, ವೇಗದ ಬೌಲರ್‌ಗಳು ಕೂಡ ಈ ಮೈದಾನದಲ್ಲಿ ಯಶಸ್ಸು ಸಾಧಿಸುತ್ತಾರೆ. ಪಂದ್ಯದ ಮಧ್ಯದಲ್ಲಿ ಬ್ಯಾಟರ್‌ಗಳಿಗೆ ಈ ಪಿಚ್ ಸಹಾಯ ಮಾಡಲಿದೆಯಷ್ಟೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ