AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಇದು ನನ್ನ ಊರು.. ನನ್ನ ಗ್ರೌಂಡ್: ಪೋಸ್ಟ್ ಮ್ಯಾಚ್ನಲ್ಲಿ ಕೆಎಲ್ ರಾಹುಲ್ ಮಾತು ಕೇಳಿ ಕೊಹ್ಲಿ ಸೈಲೆಂಟ್

KL Rahul Post Match Presentation: ಇದು ನನ್ನ ನೆಲ, ನನ್ನ ಊರು ಮತ್ತು ನನಗೆ ಇಲ್ಲಿಯ ಬಗ್ಗೆ ಇತರರಿಗಿಂತ ಚೆನ್ನಾಗಿ ತಿಳಿದಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗೆದ್ದ ನಂತರ ಹೇಳಿದ್ದಾರೆ. ಕೆಎಲ್ ರಾಹುಲ್ ಅವರ ಅದ್ಭುತ ಅಜೇಯ ಇನ್ನಿಂಗ್ಸ್ (53 ಎಸೆತಗಳಲ್ಲಿ 93 ರನ್) ನಿಂದ ಡೆಲ್ಲಿ ನಾಲ್ಕನೇ ಗೆಲುವು ಸಾಧಿಸಿತು.

KL Rahul: ಇದು ನನ್ನ ಊರು.. ನನ್ನ ಗ್ರೌಂಡ್: ಪೋಸ್ಟ್ ಮ್ಯಾಚ್ನಲ್ಲಿ ಕೆಎಲ್ ರಾಹುಲ್ ಮಾತು ಕೇಳಿ ಕೊಹ್ಲಿ ಸೈಲೆಂಟ್
Kl Rahul Post Match Presentation
Follow us
Vinay Bhat
|

Updated on: Apr 11, 2025 | 9:12 AM

ಬೆಂಗಳೂರು (ಏ. 11): ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 24 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru vs Delhi Capitals) ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಕೆಎಲ್ ರಾಹುಲ್ ಅವರ ಅದ್ಭುತ ಅಜೇಯ ಇನ್ನಿಂಗ್ಸ್ (53 ಎಸೆತಗಳಲ್ಲಿ 93 ರನ್) ಡೆಲ್ಲಿ ತಂಡಕ್ಕೆ ನಾಲ್ಕನೇ ಗೆಲುವಿನ ಅವಕಾಶ ಮಾಡಿಕೊಟ್ಟಿತು. ಪವರ್ ಪ್ಲೇನಲ್ಲೇ ಪ್ರಮುಖ 3 ವಿಕೆಟ್ ಕಳೆದುಕೊಂಡಿದ್ದರೂ ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ರಾಹುಲ್ ಸೆಟಲ್ ಆಗುತ್ತಿದ್ದಂತೆ ಬೆಂಗಳುರು ಬೌಲರ್​ಗಳ ಚೆಂಡಾಡಿದರು. ಇದಕ್ಕಾಗಿ ಇವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಚಿಕೊಂಡರು. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ರಾಹುಲ್ ಏನು ಹೇಳಿದರು ನೋಡಿ.

‘‘ಇದು ಕಠಿಣ ವಿಕೆಟ್ ಆಗಿತ್ತು ಆದರೆ 20 ಓವರ್‌ಗಳ ಕಾಲ ವಿಕೆಟ್ ಹಿಂದೆ ನಾನು ಇದ್ದಿದ್ದು, ಪಿಚ್ ಅನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡಿತು. ಯಾವ ಹೊಡೆತಗಳನ್ನು ಆಡಬೇಕೆಂದು ನನಗೆ ತಿಳಿದಿತ್ತು ಮತ್ತು ನಾನು ಉತ್ತಮ ಆರಂಭವನ್ನು ಮಾಡಲು ಬಯಸಿದ್ದೆ. ಈ ರೀತಿಯ ವಿಕೆಟ್‌ನಲ್ಲಿ ನನಗೆ ಎಲ್ಲಿ ಆಡಬೇಕೆಂದು ತಿಳಿದಿತ್ತು. ನೀವು ದೊಡ್ಡ ಸಿಕ್ಸ್ ಹೊಡೆಯಲು ಬಯಸಿದರೆ ಅದನ್ನು ಎಲ್ಲಿ ಹೊಡೆಯಬೇಕು?, ಬ್ಯಾಟ್ಸ್‌ಮನ್‌ಗಳು ಹೇಗೆ ಔಟಾಗುತ್ತಿದ್ದಾರೆ ಮತ್ತು ಅವರು ಎಲ್ಲಿ ಸಿಕ್ಸರ್‌ಗಳನ್ನು ಹೊಡೆಯುತ್ತಿದ್ದಾರೆ ಎಂಬುದನ್ನು ನಾನು ವಿಕೆಟ್ ಕೀಪಿಂಗ್ ಮೂಲಕ ತಿಳಿದುಕೊಳ್ಳಲು ಸಾಧ್ಯವಾಯಿತು’’ ಎಂದು ತಮ್ಮ ಬ್ಯಾಟಿಂಗ್ ರಹಸ್ಯ ತಿಳಿಸಿದ್ದಾರೆ.

‘‘ಕ್ಯಾಚ್ ತಪ್ಪಿಸಿಕೊಂಡಿದ್ದರಿಂದ ಅದೃಷ್ಟವೂ ನನಗೆ ಬೆಂಬಲ ನೀಡಿತು. ಇದು ನನ್ನ ನೆಲ, ನನ್ನ ಊರು ಮತ್ತು ನನಗೆ ಇಲ್ಲಿಯ ಬಗ್ಗೆ ಇತರರಿಗಿಂತ ಚೆನ್ನಾಗಿ ತಿಳಿದಿದೆ. ನಾನು ವಿಭಿನ್ನ ರೀತಿಯ ವಿಕೆಟ್‌ಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತೇನೆ. ನಾನು ಅದನ್ನು ಸಂಭ್ರಮಿಸಲು ಬಳಸುತ್ತೇನೆ. ಇಲ್ಲಿ ನನಗೆ ಒಂದು ರನ್ ಎಲ್ಲಿ ಸಿಗುತ್ತದೆ ಮತ್ತು ಆರು ರನ್ ಎಲ್ಲಿ ಸಿಗುತ್ತದೆ ಎಂಬುದನ್ನು ಅರ್ಥಮಾಡಿಕೊಂಡಿದ್ದೇನೆ’’ ಎಂಬುದು ಕೆಎಲ್ ರಾಹುಲ್ ಮಾತು.

ಇದನ್ನೂ ಓದಿ
Image
ಸೋಲಿಗೆ ಚಿನ್ನಸ್ವಾಮಿಯನ್ನೇ ದೂರಿದ್ರ ರಜತ್ ಪಾಟಿದಾರ್?: ಏನಂದ್ರು?
Image
ಆರ್​ಸಿಬಿ ನಾಯಕನಿಂದಲೇ ಕೈ ಜಾರಿತು ಪಂದ್ಯ: ರಜತ್ ಮಾಡಿದ್ರು ದೊಡ್ಡ ಎಡವಟ್ಟು
Image
ಇದು ನನ್ನ ಟೆರಿಟರಿ; RCB ವಿರುದ್ಧ ಅಬ್ಬರಿಸಿ ಸನ್ನೆ ಮೂಲಕ ತೋರಿಸಿದ ರಾಹುಲ್
Image
ಆರ್​ಸಿಬಿಗೆ ಸೋಲಿನ ಶಾಕ್ ನೀಡಿದ ಕನ್ನಡಿಗ ಕೆಎಲ್ ರಾಹುಲ್

Rajat Patidar: ಸೋಲಿಗೆ ಚಿನ್ನಸ್ವಾಮಿಯನ್ನೇ ದೂರಿದ್ರ ರಜತ್ ಪಾಟಿದಾರ್?: ಪೋಸ್ಟ್ ಮ್ಯಾಚ್​ನಲ್ಲಿ ಏನಂದ್ರು?

ಡೆಲ್ಲಿ ತಂಡ ಅದ್ಭುತ ಪ್ರದರ್ಶನ:

ಆರ್‌ಸಿಬಿ ವಿರುದ್ಧದ ಈ ಪಂದ್ಯದಲ್ಲಿ, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಉತ್ತಮ ಆರಂಭ ಪಡೆದರೂ ಆರಂಭಿಕ ವಿಕೆಟ್‌ಗಳು ಪತನಗೊಂಡ ನಂತರ ಇನ್ನಿಂಗ್ಸ್ ಕುಂಟುತ್ತಾ ಸಾಗಿತು. ಈ ಮೂಲಕ ಆರ್‌ಸಿಬಿ ತಂಡ ಹೇಗೋ ನಿಗದಿತ 20 ಓವರ್‌ಗಳಲ್ಲಿ 163 ರನ್‌ಗಳ ಗುರಿ ತಲುಪುವಲ್ಲಿ ಯಶಸ್ವಿಯಾಯಿತು.

ಗುರಿಯನ್ನು ಬೆನ್ನಟ್ಟುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಕಳಪೆಯಾಗಿತ್ತು. 58 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು, ಆದರೆ ಅದಾದ ನಂತರ ಕೆಎಲ್ ರಾಹುಲ್ 53 ಎಸೆತಗಳಲ್ಲಿ ಅಜೇಯ 93 ರನ್ ಗಳಿಸುವ ಮೂಲಕ ಪಂದ್ಯವನ್ನು ಏಕಪಕ್ಷೀಯವಾಗಿಸಿದರು. ಈ ಸಮಯದಲ್ಲಿ, ರಾಹುಲ್‌ಗೆ ಟ್ರಿಸ್ಟಾನ್ ಸ್ಟಬ್ಸ್‌ನಿಂದ ಉತ್ತಮ ಬೆಂಬಲ ದೊರೆಯಿತು. ಈ ರೀತಿಯಾಗಿ, ಆರ್‌ಸಿಬಿ ತಂಡವನ್ನು ಸ್ಥಳೀಯ ಹುಡುಗ ರಾಹುಲ್ ಅವರದ್ದೇ ತವರು ನೆಲದಲ್ಲಿ ಸೋಲಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?