AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul Wedding: ಜನವರಿಯಲ್ಲಿ ರಾಹುಲ್- ಅಥಿಯಾ ಮದುವೆ? ತಂಡದಿಂದ ಬ್ರೇಕ್ ಕೇಳಿದ ಕನ್ನಡಿಗ

KL Rahul Wedding: ಇಂಜುರಿ ಕಾರಣದಿಂದಾಗಿ ರಾಹುಲ್ ಈ ಬ್ರೇಕ್ ಕೇಳಿಲ್ಲ. ಬದಲಿಗೆ ಕೆಲವು ವೈಯಕ್ತಿಕ ಕಾರಣಗಳನ್ನು ನೀಡಿ ರಾಹುಲ್ ರಜೆ ಕೇಳಿದ್ದಾರೆ ಎಂದು ಬಿಸಿಸಿಐ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

KL Rahul Wedding: ಜನವರಿಯಲ್ಲಿ ರಾಹುಲ್- ಅಥಿಯಾ ಮದುವೆ? ತಂಡದಿಂದ ಬ್ರೇಕ್ ಕೇಳಿದ ಕನ್ನಡಿಗ
ಕೆಎಲ್ ರಾಹುಲ್- ಅಥಿಯಾ ಶೆಟ್ಟಿ
Follow us
TV9 Web
| Updated By: ಪೃಥ್ವಿಶಂಕರ

Updated on:Dec 01, 2022 | 12:44 PM

ಟಿ20 ವಿಶ್ವಕಪ್ (T20 World Cup) ಬಳಿಕ ಟೀಂ ಇಂಡಿಯಾದಿಂದ ದೂರ ಉಳಿದಿರುವ ಉಪನಾಯಕ ಕೆಎಲ್ ರಾಹುಲ್ (KL Rahul) ತಮ್ಮ ಕಳಪೆ ಫಾರ್ಮ್​ನಿಂದ ಹೊರಬರಲು ದೇವರ ಮೊರೆ ಹೋಗುತ್ತಿದ್ದಾರೆ. ಇತ್ತೀಚೆಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದ ರಾಹುಲ್ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದೀಗ ಭಾಂಗ್ಲಾದೇಶ ವಿರುದ್ಧ ಭಾನುವಾರದಿಂದ ಆರಂಭವಾಗುವ ಏಕದಿನ ಸರಣಿಯೊಂದಿಗೆ ರಾಹುಲ್ ಟೀಂ ಇಂಡಿಯಾ ಸೇರಲಿದ್ದಾರೆ. ಬಾಂಗ್ಲಾ ಪ್ರವಾಸದ ಬಳಿಕ ಟೀಂ ಇಂಡಿಯಾ (Team India) ಶ್ರೀಲಂಕಾ ವಿರುದ್ಧ ತವರಿನಲ್ಲಿ ಏಕದಿನ ಹಾಗೂ ಟಿ20 ಸರಣಿ ಆಡಲಿದ್ದು, ಈ ಸರಣಿಗಳಿಗೆ ರಾಹುಲ್ ಗೈರಾಗಲಿದ್ದಾರೆ ಎಂದು ವರದಿಯಾಗಿದೆ.

ಮದುವೆಗಾಗಿಯೇ ರಾಹುಲ್ ಈ ಬ್ರೇಕ್?

ವಾಸ್ತವವಾಗಿ ರಾಹುಲ್ ತವರಿನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಯಿಂದ ಹಿಂದೆ ಸರಿಯುವ ಸಾಧ್ಯತೆಯಿದ್ದು, ಅವರು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ನಂತರ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂದು ಇನ್ಸೈಡ್ ಸ್ಪೋರ್ಟ್ ವರದಿ ಮಾಡಿದೆ. ಈ ವರದಿಯ ಬೆನ್ನಲ್ಲೇ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಮದುವೆ ಮಾತು ಮುನ್ನೆಲೆಗೆ ಬಂದಿದ್ದು, ಮದುವೆಗಾಗಿಯೇ ರಾಹುಲ್ ಈ ಬ್ರೇಕ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

ಇದನ್ನೂ ಓದಿ: India vs Bangladesh: ಬಾಂಗ್ಲಾದೇಶಕ್ಕೆ ಹೊರಟ ರೋಹಿತ್, ಕೊಹ್ಲಿ, ರಾಹುಲ್: ಭಾನುವಾರ ಮೊದಲ ಏಕದಿನ ಕದನ

ಹಾರ್ದಿಕ್ ಪಾಂಡ್ಯಗೆ ಟಿ20 ನಾಯಕತ್ವ?

ಜನವರಿ ಮೊದಲ ವಾರದಲ್ಲಿ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಅವರ ಜೊತೆ ರಾಹುಲ್ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಎಂಬ ಸುದ್ದಿಯಿದೆ. ಆದಾಗ್ಯೂ, ರಾಹುಲ್ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲ್ಲಿರುವ ಸರಣಿಗೆ ಲಭ್ಯವಿರುತ್ತಾರೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ ಕೂಡ ಟಿ20ಯಿಂದ ವಿರಾಮ ತೆಗೆದುಕೊಳ್ಳುವ ನಿರೀಕ್ಷೆ ಇರುವುದರಿಂದ ಹಾರ್ದಿಕ್ ಪಾಂಡ್ಯ ಟಿ20 ಸರಣಿಯಲ್ಲಿ ತಂಡದ ನಾಯಕತ್ವವಹಿಸುವ ಸಾಧ್ಯತೆ ಇದೆ. ಆದರೆ ತವರಿನಲ್ಲಿ ಶ್ರೀಲಂಕಾ ವಿರುದ್ಧ ನಡೆಯುವ ಏಕದಿನ ಹಾಗೂ ಟಿ20 ಸರಣಿಗಳ ವೇಳಾಪಟ್ಟಿ ಇನ್ನೂ ಪ್ರಕಟಿಸಲಾಗಿಲ್ಲ. ಮೂಲಗಳ ಪ್ರಕಾರ ಜನವರಿ ಮೊದಲ ವಾರದಲ್ಲಿ ಸರಣಿ ನಡೆಯುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.

ವೈಯಕ್ತಿಕ ಕಾರಣಗಳನ್ನು ನೀಡಿ ರಾಹುಲ್ ರಜೆ ಕೇಳಿದ್ದಾರೆ

ಅಲ್ಲದೆ ರಾಹುಲ್ ವಿರಾಮ ಕೇಳಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಖಚಿತಪಡಿಸಿದ್ದು, ಕೆಲವು ವೈಯಕ್ತಿಕ ಕಾರಣಗಳಿಂದ ರಾಹುಲ್ ವಿರಾಮ ಕೇಳಿದ್ದಾರೆ. ಇಂಜುರಿ ಕಾರಣದಿಂದಾಗಿ ರಾಹುಲ್ ಈ ಬ್ರೇಕ್ ಕೇಳಿಲ್ಲ. ಬದಲಿಗೆ ಕೆಲವು ವೈಯಕ್ತಿಕ ಕಾರಣಗಳನ್ನು ನೀಡಿ ರಾಹುಲ್ ರಜೆ ಕೇಳಿದ್ದಾರೆ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ರಾಹುಲ್ ಮದುವೆಯಾಗುತ್ತಿದ್ದಾರೋ ಅಥವಾ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೋ ಎಂಬುದು ನನಗೆ ಗೊತ್ತಿಲ್ಲ ಎಂದಿದ್ದಾರೆ.

ಇತ್ತೀಚೆಗೆ ಬಾಲಿವುಡ್ ನಟ ಹಾಗೂ ಕನ್ನಡಿಗ ಸುನೀಲ್ ಶೆಟ್ಟಿ ಬಳಿ ಈ ಇಬ್ಬರ ಮದುವೆ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ್ದ ಸುನೀಲ್ ಶೆಟ್ಟಿ, ಮದುವೆ ಯಾವಾಗ ಮತ್ತು ಎಲ್ಲಿ ನಡೆಯುತ್ತದೆ ಎಂಬುದನ್ನು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ ಎಂದು ಹೇಳಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Thu, 1 December 22

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!