AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್ ರಾಹುಲ್ ಅಥವಾ ಹಾರ್ದಿಕ್ ಪಾಂಡ್ಯಗೆ ಟೀಮ್ ಇಂಡಿಯಾ ನಾಯಕತ್ವ

Team Indai: ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಪಾಂಡ್ಯ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇನ್ನು ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯದಿದ್ದ ಕೆಎಲ್ ರಾಹುಲ್ ಇದೀಗ ಕಂಬ್ಯಾಕ್ ಮಾಡಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದೇ ಹೇಳಬಹುದು.

ಕೆಎಲ್ ರಾಹುಲ್ ಅಥವಾ ಹಾರ್ದಿಕ್ ಪಾಂಡ್ಯಗೆ ಟೀಮ್ ಇಂಡಿಯಾ ನಾಯಕತ್ವ
Hardik Pandya - KL Rahul
ಝಾಹಿರ್ ಯೂಸುಫ್
|

Updated on: Jul 09, 2024 | 7:20 AM

Share

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ (KL Rahul) ಅಥವಾ ಹಾರ್ದಿಕ್ ಪಾಂಡ್ಯ (Hardik Pandya) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ಈ ಸರಣಿಯಿಂದ ಭಾರತ ತಂಡದ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್​ಪ್ರೀತ್ ಬುಮ್ರಾ ವಿಶ್ರಾಂತಿಯ ಕಾರಣ ಹೊರಗುಳಿಯಲಿದ್ದಾರೆ. ಹೀಗಾಗಿ ಏಕದಿನ ತಂಡವನ್ನು ರೋಹಿತ್ ಶರ್ಮಾ ಬದಲಿಗೆ ಕೆಎಲ್ ರಾಹುಲ್ ಅಥವಾ ಹಾರ್ದಿಕ್ ಪಾಂಡ್ಯ ಮುನ್ನಡೆಸುವ ಸಾಧ್ಯತೆಯಿದೆ.

ಝಿಂಬಾಬ್ವೆ ಸರಣಿ ಬಳಿಕ ಭಾರತ ತಂಡವು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಮತ್ತು 3 ಏಕದಿನ ಪಂದ್ಯಗಳನ್ನಾಡಲಿದೆ. ಇಲ್ಲಿ ಏಕದಿನ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುವ ಸಾಧ್ಯತೆಯಿದ್ದರೆ, ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಭಾರತ ಟಿ20 ತಂಡದ ನಾಯಕರಾಗಿ ಪಾಂಡ್ಯ ಕಾಣಿಸಿಕೊಂಡಿದ್ದರು.

ಆದರೆ ಈ ಬಾರಿಯ ಟಿ20 ವಿಶ್ವಕಪ್​ಗೂ ಮುನ್ನ ರೋಹಿತ್ ಶರ್ಮಾ ಅವರಿಗೆ ನಾಯಕತ್ವ ನೀಡಲಾಗಿತ್ತು. ಇದೀಗ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಹಿಟ್​ಮ್ಯಾನ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ.

ಅತ್ತ ಟಿ20 ವಿಶ್ವಕಪ್​ನಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಭಾರತ ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಹಾಗೆಯೇ ಏಕದಿನ ತಂಡದ ಹಂಗಾಮಿ ನಾಯಕರಾಗಿ ಕೆಎಲ್ ರಾಹುಲ್ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

ಭಾರತ – ಶ್ರೀಲಂಕಾ ಸರಣಿ ಯಾವಾಗ?

ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಇನ್ನೂ ಸಹ ನಿಗದಿ ಮಾಡಲಾಗಿಲ್ಲ. ಇದಾಗ್ಯೂ ಟೂರ್ನಿಯನ್ನು ಜುಲೈ 27 ರಿಂದ ಆಗಸ್ಟ್ 7 ರ ನಡುವೆ ನಡೆಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ ಎಂದು ವರದಿಯಾಗಿದೆ. ಹೀಗಾಗಿ ಇದೇ ಅವಧಿಯಲ್ಲಿ ಆರು ಪಂದ್ಯಗಳು ನಡೆಯುವ ಸಾಧ್ಯತೆಯಿದೆ.

ಕ್ಯಾಪ್ಟನ್ ರೋಹಿತ್ ಶರ್ಮಾ:

ಮುಂಬರುವ ಚಾಂಪಿಯನ್ಸ್ ಟ್ರೋಫಿವರೆಗೆ ಭಾರತ ಏಕದಿನ ತಂಡದ ನಾಯಕರಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ದೃಢಪಡಿಸಿದ್ದಾರೆ. ಹೀಗಾಗಿ 2025 ರವರೆಗೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್ಸ್ ಫೈನಲ್​ವರೆಗೆ ರೋಹಿತ್ ಶರ್ಮಾ ಟೆಸ್ಟ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕವಷ್ಟೇ ಭಾರತ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎನ್ನಬಹುದು.

ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?