AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್ ರಾಹುಲ್ ಅಥವಾ ಹಾರ್ದಿಕ್ ಪಾಂಡ್ಯಗೆ ಟೀಮ್ ಇಂಡಿಯಾ ನಾಯಕತ್ವ

Team Indai: ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಪಾಂಡ್ಯ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇನ್ನು ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯದಿದ್ದ ಕೆಎಲ್ ರಾಹುಲ್ ಇದೀಗ ಕಂಬ್ಯಾಕ್ ಮಾಡಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದೇ ಹೇಳಬಹುದು.

ಕೆಎಲ್ ರಾಹುಲ್ ಅಥವಾ ಹಾರ್ದಿಕ್ ಪಾಂಡ್ಯಗೆ ಟೀಮ್ ಇಂಡಿಯಾ ನಾಯಕತ್ವ
Hardik Pandya - KL Rahul
ಝಾಹಿರ್ ಯೂಸುಫ್
|

Updated on: Jul 09, 2024 | 7:20 AM

Share

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ (KL Rahul) ಅಥವಾ ಹಾರ್ದಿಕ್ ಪಾಂಡ್ಯ (Hardik Pandya) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ಈ ಸರಣಿಯಿಂದ ಭಾರತ ತಂಡದ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್​ಪ್ರೀತ್ ಬುಮ್ರಾ ವಿಶ್ರಾಂತಿಯ ಕಾರಣ ಹೊರಗುಳಿಯಲಿದ್ದಾರೆ. ಹೀಗಾಗಿ ಏಕದಿನ ತಂಡವನ್ನು ರೋಹಿತ್ ಶರ್ಮಾ ಬದಲಿಗೆ ಕೆಎಲ್ ರಾಹುಲ್ ಅಥವಾ ಹಾರ್ದಿಕ್ ಪಾಂಡ್ಯ ಮುನ್ನಡೆಸುವ ಸಾಧ್ಯತೆಯಿದೆ.

ಝಿಂಬಾಬ್ವೆ ಸರಣಿ ಬಳಿಕ ಭಾರತ ತಂಡವು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಮತ್ತು 3 ಏಕದಿನ ಪಂದ್ಯಗಳನ್ನಾಡಲಿದೆ. ಇಲ್ಲಿ ಏಕದಿನ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುವ ಸಾಧ್ಯತೆಯಿದ್ದರೆ, ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಭಾರತ ಟಿ20 ತಂಡದ ನಾಯಕರಾಗಿ ಪಾಂಡ್ಯ ಕಾಣಿಸಿಕೊಂಡಿದ್ದರು.

ಆದರೆ ಈ ಬಾರಿಯ ಟಿ20 ವಿಶ್ವಕಪ್​ಗೂ ಮುನ್ನ ರೋಹಿತ್ ಶರ್ಮಾ ಅವರಿಗೆ ನಾಯಕತ್ವ ನೀಡಲಾಗಿತ್ತು. ಇದೀಗ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಹಿಟ್​ಮ್ಯಾನ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ.

ಅತ್ತ ಟಿ20 ವಿಶ್ವಕಪ್​ನಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಭಾರತ ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಹಾಗೆಯೇ ಏಕದಿನ ತಂಡದ ಹಂಗಾಮಿ ನಾಯಕರಾಗಿ ಕೆಎಲ್ ರಾಹುಲ್ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

ಭಾರತ – ಶ್ರೀಲಂಕಾ ಸರಣಿ ಯಾವಾಗ?

ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಇನ್ನೂ ಸಹ ನಿಗದಿ ಮಾಡಲಾಗಿಲ್ಲ. ಇದಾಗ್ಯೂ ಟೂರ್ನಿಯನ್ನು ಜುಲೈ 27 ರಿಂದ ಆಗಸ್ಟ್ 7 ರ ನಡುವೆ ನಡೆಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ ಎಂದು ವರದಿಯಾಗಿದೆ. ಹೀಗಾಗಿ ಇದೇ ಅವಧಿಯಲ್ಲಿ ಆರು ಪಂದ್ಯಗಳು ನಡೆಯುವ ಸಾಧ್ಯತೆಯಿದೆ.

ಕ್ಯಾಪ್ಟನ್ ರೋಹಿತ್ ಶರ್ಮಾ:

ಮುಂಬರುವ ಚಾಂಪಿಯನ್ಸ್ ಟ್ರೋಫಿವರೆಗೆ ಭಾರತ ಏಕದಿನ ತಂಡದ ನಾಯಕರಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ದೃಢಪಡಿಸಿದ್ದಾರೆ. ಹೀಗಾಗಿ 2025 ರವರೆಗೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್ಸ್ ಫೈನಲ್​ವರೆಗೆ ರೋಹಿತ್ ಶರ್ಮಾ ಟೆಸ್ಟ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕವಷ್ಟೇ ಭಾರತ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎನ್ನಬಹುದು.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ