AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಫುಲ್ ಫಿಟ್: ಶೀಘ್ರದಲ್ಲೇ ಶ್ರೀಲಂಕಾಗೆ..!

Asia Cup 2023: ಕೆಎಲ್ ರಾಹುಲ್ ಭಾನುವಾರ ಅಥವಾ ಸೋಮವಾರ ಶ್ರೀಲಂಕಾಗೆ ತಲುಪಿದರೂ ಅವರು ನೇಪಾಳ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಏಕೆಂದರೆ ಭಾರತ-ನೇಪಾಳ ನಡುವಣ ಪಂದ್ಯವು ಸೆಪ್ಟೆಂಬರ್ 4 ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಅವರು ಅಲಭ್ಯರಾಗುವುದು ಖಚಿತವಾಗಿದೆ.

KL Rahul: ಕೆಎಲ್ ರಾಹುಲ್ ಫುಲ್ ಫಿಟ್: ಶೀಘ್ರದಲ್ಲೇ ಶ್ರೀಲಂಕಾಗೆ..!
KL Rahul
TV9 Web
| Edited By: |

Updated on: Sep 03, 2023 | 6:04 PM

Share

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕೆಎಲ್ ರಾಹುಲ್ (KL Rahul) ಫಿಟ್​ನೆಸ್ ಟೆಸ್ಟ್​ನಲ್ಲಿ ಪಾಸಾಗಿದ್ದಾರೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಫಿಟ್​ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಈ ಮೂಲಕ ಕ್ಲಿಯರೆನ್ಸ್ ಪಡೆದುಕೊಂಡಿದ್ದಾರೆ. ಈ ಕ್ಲಿಯರೆನ್ಸ್​​ನೊಂದಿಗೆ ಕೆಎಲ್ ರಾಹುಲ್ ಇದೀಗ ಶ್ರೀಲಂಕಾಗೆ ತೆರಳಲು ಅಣಿಯಾಗಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ಏಷ್ಯಾಕಪ್​ಗೆ ಆಯ್ಕೆ ಮಾಡಲಾಗಿದ್ದ ಟೀಮ್ ಇಂಡಿಯಾದಲ್ಲಿ ಕೆಎಲ್ ರಾಹುಲ್ ಕೂಡ ಸ್ಥಾನ ಪಡೆದಿದ್ದರು. ಆದರೆ ಅವರು ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದ ಕಾರಣ ಭಾರತ ತಂಡದೊಂದಿಗೆ ಶ್ರೀಲಂಕಾಗೆ ಪ್ರಯಾಣಿಸಿರಲಿಲ್ಲ.

ಇದೇ ಕಾರಣದಿಂದಾಗಿ ಪಾಕಿಸ್ತಾನ್ ಹಾಗೂ ನೇಪಾಳ ವಿರುದ್ಧದ ಪಂದ್ಯಕ್ಕೆ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ ಎಂದು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದರು. ಇದೀಗ ನ್ಯಾಷನಲ್ ಆಕಾಡೆಮಿಯಲ್ಲಿ ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ರಾಹುಲ್ ಸಂಪೂರ್ಣ ಫಿಟ್​ನೆಸ್ ಹೊಂದಿರುವುದು ಸಾಬೀತಾಗಿದೆ.

ಹೀಗಾಗಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲು ಅವರಿಗೆ ಕ್ಲಿಯರೆನ್ಸ್ ನೀಡಲಾಗಿದೆ. ಅದರಂತೆ ಭಾನುವಾರ ಅಥವಾ ಸೋಮವಾರ ಕೆಎಲ್ ರಾಹುಲ್ ಶ್ರೀಲಂಕಾಗೆ ಪ್ರಯಾಣಿಸುವ ಸಾಧ್ಯತೆಯಿದೆ.

ಸೂಪರ್-4 ಹಂತದಲ್ಲಿ ಕಣಕ್ಕೆ:

ಕೆಎಲ್ ರಾಹುಲ್ ಭಾನುವಾರ ಅಥವಾ ಸೋಮವಾರ ಶ್ರೀಲಂಕಾಗೆ ತಲುಪಿದರೂ ಅವರು ನೇಪಾಳ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಏಕೆಂದರೆ ಭಾರತ-ನೇಪಾಳ ನಡುವಣ ಪಂದ್ಯವು ಸೆಪ್ಟೆಂಬರ್ 4 ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಅವರು ಅಲಭ್ಯರಾಗುವುದು ಖಚಿತವಾಗಿದೆ.

ಇನ್ನು ನೇಪಾಳ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ಅವರು ಸೂಪರ್-4 ಹಂತದಲ್ಲಿ ಕಣಕ್ಕಿಳಿಯಲಿದ್ದಾರೆ. ಅಂದರೆ ಟೀಮ್ ಇಂಡಿಯಾ ಸೂಪರ್ ಫೋರ್ ಹಂತಕ್ಕೇರಿದರೆ ಸೆಪ್ಟೆಂಬರ್ 10 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು