AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಹುಲ್ ವೃತ್ತಿಬದುಕಿಗೆ ಗಂಭೀರ್ ಕೊಳ್ಳಿ ಇಡುತ್ತಿದ್ದಾರೆ’; ಮಾಜಿ ಆಟಗಾರನ ಗಂಭೀರ ಆರೋಪ

KL Rahul's Poor Form: ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದಿದ್ದರೂ, ಕೆಎಲ್ ರಾಹುಲ್ ಅವರ ಕಳಪೆ ಪ್ರದರ್ಶನ ಚರ್ಚೆಗೆ ಕಾರಣವಾಗಿದೆ. ಮಾಜಿ ಆಟಗಾರ ಕೆ. ಶ್ರೀಕಾಂತ್, ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ತಂತ್ರವನ್ನು ಟೀಕಿಸಿ, ರಾಹುಲ್‌ರ ಬ್ಯಾಟಿಂಗ್ ಕ್ರಮಾಂಕ ಬದಲಾವಣೆಯಿಂದ ಅವರ ಫಾರ್ಮ್‌ಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.

‘ರಾಹುಲ್ ವೃತ್ತಿಬದುಕಿಗೆ ಗಂಭೀರ್ ಕೊಳ್ಳಿ ಇಡುತ್ತಿದ್ದಾರೆ’; ಮಾಜಿ ಆಟಗಾರನ ಗಂಭೀರ ಆರೋಪ
ಗೌತಮ್ ಗಂಭೀರ್, ಕೆಎಲ್ ರಾಹುಲ್
Follow us
ಪೃಥ್ವಿಶಂಕರ
|

Updated on: Feb 10, 2025 | 5:29 PM

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಗೆದ್ದುಕೊಂಡಿದೆ. ಚಾಂಪಿಯನ್ಸ್ ಟ್ರೋಫಿ ಸನಿಹದಲ್ಲಿರುವಾಗ ತಂಡದ ಈ ಅಮೋಘ ಪ್ರದರ್ಶನ ಅಭಿಮಾನಿಗಳಿಗೆ ಸಂತಸ ತಂದಿದೆ. ಇದರ ಜೊತೆಗೆ ಇಡೀ ತಂಡ ಸಾಂಘಿಕ ಪ್ರದರ್ಶನ ನೀಡುತ್ತಿರುವುದು ಅದರಲ್ಲೂ ತಂಡದ ಬ್ಯಾಟಿಂಗ್‌ ವಿಭಾಗ ಬಲಿಷ್ಠವಾಗಿ ಕಾಣುತ್ತಿರುವುದು ಬಿಸಿಸಿಐ ನಿರಾಳವಾಗಿರುವಂತೆ ಮಾಡಿದೆ. ಆದಾಗ್ಯೂ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ಮಾತ್ರ ಕಳಪೆ ಫಾರ್ಮ್​ನಿಂದ ಇದುವರೆಗೂ ಹೊರಬಂದಿಲ್ಲ. ಅದರಲ್ಲೂ ಕೆಎಲ್ ರಾಹುಲ್ ಆಡಿರುವ ಎರಡೂ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವುದು ಅಭಿಮಾನಿಗಳಲ್ಲಿ ಕೊಂಚ ನಿರಾಸೆ ಮೂಡಿಸಿದೆ. ಆದರೆ ಇದರ ನಡುವೆ ರಾಹುಲ್ ಅವರ ಬ್ಯಾಟಿಂಗ್‌ ಕ್ರಮಾಂಕವನ್ನು ಪದೇಪದೇ ಬದಲಿಸುತ್ತಿರುವುದು ತಂಡದ ಮಾಜಿ ಆಟಗಾರರ ಅಸಮಾಧಾನಕ್ಕೆ ಕಾರಣವಾಗಿದೆ.

ವಾಸ್ತವವಾಗಿ ಇಂಗ್ಲೆಂಡ್‌ ವಿರುದ್ಧ ಪ್ರಸ್ತುತ ನಡೆದಿರುವ ಎರಡೂ ಪಂದ್ಯಗಳಲ್ಲೂ ರಾಹುಲ್​ಗೆ ರನ್​ಗಳಿಸಲು ಸಾಧ್ಯವಾಗಿಲ್ಲ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಂತೆ, ಕಟಕ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲೂ ಕೆ.ಎಲ್. ರಾಹುಲ್ ವಿಫಲರಾಗಿದ್ದಾರೆ. ಕಟಕ್‌ನಲ್ಲಿ 14 ಎಸೆತಗಳನ್ನು ಎದುರಿಸಿದ ರಾಹುಲ್ 10 ಕ್ಕಿಂತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಇದಕ್ಕೂ ಮೊದಲು, ರಾಹುಲ್ ನಾಗ್ಪುರದಲ್ಲಿ ಕೇವಲ 2 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಅಂದರೆ ಮೊದಲ 2 ಏಕದಿನ ಪಂದ್ಯಗಳಲ್ಲಿ ಅವರು ಗಳಿಸಿದ್ದು ಕೇವಲ 12 ರನ್ ಮಾತ್ರ. ಹೀಗಾಗಿ ರಾಹುಲ್​ಗೆ ಮುಂದಿನ ಪಂದ್ಯದಲ್ಲಿ ಅವಕಾಶ ಸಿಗುವ ಬಗ್ಗೆ ಅನುಮಾನ ಮೂಡಿದೆ. ಈ ನಡುವೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಕೆ. ಶ್ರೀಕಾಂತ್ ಎಲ್ಲಾ ತಪ್ಪಿಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನೇ ಹೊಣೆ ಮಾಡಿದ್ದಾರೆ. ಗಂಭೀರ್ ಅವರ ತಂತ್ರದಿಂದಾಗಿ ಕೆಎಲ್ ರಾಹುಲ್ ವಿಫಲರಾಗುತ್ತಿದ್ದು, ಅವರ ವೃತ್ತಿಜೀವನ ಅಪಾಯದಲ್ಲಿದೆ ಎಂದು ಶ್ರೀಕಾಂತ್ ಆರೋಪಿಸಿದ್ದಾರೆ.

ರಾಹುಲ್ ವೈಫಲ್ಯಕ್ಕೆ ಗಂಭೀರ್ ಕಾರಣನಾ?

ಎರಡೂ ಏಕದಿನ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಅವರನ್ನು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಕಳುಹಿಸಿರುವುದು ಶ್ರೀಕಾಂತ್ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿರುವ ಶ್ರೀಕಾಂತ್, ‘ಕೆಎಲ್ ರಾಹುಲ್ ಬಗ್ಗೆ ನನಗೆ ತುಂಬಾ ಬೇಸರವಾಗುತ್ತಿದೆ. ಅಕ್ಷರ್ ಚೆನ್ನಾಗಿ ಆಡುತ್ತಿರುವುದು ಒಳ್ಳೇಯ ವಿಚಾರ ಆದರೆ ರಾಹುಲ್ ವಿಚಾರದಲ್ಲಿ ಗಂಭೀರ್ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಐದನೇ ಕ್ರಮಾಂಕದಲ್ಲಿ ರಾಹುಲ್ ಅವರ ದಾಖಲೆಯನ್ನು ನೋಡಿ, ಈ ಕ್ರಮಾಂಕದಲ್ಲಿ ಅವರ ಅಂಕಿಅಂಶಗಳು ಅನೇಕ ಆಟಗಾರರಿಗಿಂತ ಉತ್ತಮವಾಗಿವೆ. ಆದರೆ ತಂಡದ ಆಡಳಿತ ಮಂಡಳಿ ರಾಹುಲ್ ವಿಚಾರದಲ್ಲಿ ಏನು ಮಾಡುತ್ತಿದೆ ಎಂದು ನನಗೆ ತಿಳಿದಿಲ್ಲ. ಅವರಿಗೆ ಐದನೇ ಸ್ಥಾನದಲ್ಲಿ ಅವಕಾಶ ನೀಡುವ ಬದಲು, ಆರನೇ ಸ್ಥಾನದಲ್ಲಿ ಆಡಿಸಲಾಗುತ್ತಿದೆ

ಗಂಭೀರ್ ವಿರುದ್ಧ ನೇರ ಆರೋಪ

ಇಲ್ಲಿ ಗೌತಮ್ ಗಂಭೀರ್ ಅವರ ಹೆಸರನ್ನು ಉಲ್ಲೇಖಿಸಿರುವ ಶ್ರೀಕಾಂತ್, ಗಂಭೀರ್ ಮಾಡುತ್ತಿರುವುದು ಸಂಪೂರ್ಣವಾಗಿ ಸರಿಯಲ್ಲ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಕೆಎಲ್ ರಾಹುಲ್ ಉತ್ತಮ ಫಾರ್ಮ್‌ನಲ್ಲಿಲ್ಲದಿದ್ದರೆ ಅದು ತಂಡಕ್ಕೆ ನಷ್ಟ. ಟಾಪ್ 4 ರಲ್ಲಿ ನಿಮಗೆ ಎಡ-ಬಲ ಸಂಯೋಜನೆ ಬೇಕು. ಆದರೆ ಅದರ ನಂತರ ಈ ಎಡಬಲ ಸಂಯೋಜನೆಯ ತಂತ್ರ ತಪ್ಪಾಗಿದೆ. ಇದೇ ತಂತ್ರವನ್ನೇ ನೀವು ಮುಂದುವರೆಸುವುದಾದರೆ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈಬಿಟ್ಟು ರಿಷಭ್ ಪಂತ್‌ಗೆ ಅವಕಾಶ ನೀಡಬೇಕು. ಹೀಗಾಗಿ ರಾಹುಲ್ ಅವರನ್ನು ತಂಡದಿಂದ ಕೈಬಿಡುವ ಸಾಧ್ಯತೆಯಿದೆ ಎಂದು ಶ್ರೀಕಾಂತ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ