AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul Press Conference: ಕೆಎಲ್ ರಾಹುಲ್ ಸುದ್ದಿಗೋಷ್ಠಿ: ಏನೆಲ್ಲ ಹೇಳಿದ್ರು?, ಇಲ್ಲಿದೆ ಸಂಪೂರ್ಣ ಮಾಹಿತಿ

South Africa vs India ODI Series: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿ ಆಯೋಜಿಸಲಾಗಿದೆ. ಈ ಪೈಕಿ ಮೊದಲ ಪಂದ್ಯ ಜನವರಿ 19 ರಂದು ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ನಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

KL Rahul Press Conference: ಕೆಎಲ್ ರಾಹುಲ್ ಸುದ್ದಿಗೋಷ್ಠಿ: ಏನೆಲ್ಲ ಹೇಳಿದ್ರು?, ಇಲ್ಲಿದೆ ಸಂಪೂರ್ಣ ಮಾಹಿತಿ
KL Rahul Press Conference
TV9 Web
| Updated By: Vinay Bhat|

Updated on:Jan 18, 2022 | 3:28 PM

Share

ಬುಧವಾರದಿಂದ (ಜ. 19) ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಪಾರ್ಲ್​ನ ಬೋಲ್ಯಾಂಡ್ ಪಾರ್ಕ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಉಭಯ ತಂಡದ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಪತ್ರಿಕಾಗೋಷ್ಠಿ (KL Rahul Press Conference) ನಡೆಸಿದ್ದು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರೋಹಿತ್ ಶರ್ಮಾ ಇಂಜುರಿಯಿಂದಾಗ ಆಫ್ರಿಕಾ ಸರಣಿಯಿಂದ ಹೊರಗುಳಿದ ಕಾರಣ ಈ ಸರಣಿಯನ್ನು ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ. ವೇಗಿ ಜಸ್​ಪ್ರೀತ್ ಬುಮ್ರಾ ಉಪ ನಾಯಕನ ಪಟ್ಟ ಅಲಂಕರಿಸಿದ್ದಾರೆ. ಈಗಾಗಲೇ ಬುಮ್ರಾ ಪತ್ರಿಕಾಗೋಷ್ಠಿ ನಡೆಸಿ ಒಂದಿಷ್ಟು ವಿಚಾರ ಹೇಳಿದ್ದು, ಮೊಹಮ್ಮದ್ ಸಿರಾಜ್ ಇಂಜುರಿಯಿಂದ ಗುಣಮುಖರಾಗಿ ಫಿಟ್ ಆಗಿದ್ದಾರೆಂದು ತಿಳಿಸಿದ್ದಾರೆ. ಸದ್ಯ ರಾಹುಲ್ ಮಾತನಾಡಿದ್ದು ತನ್ನ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. “ಕಳೆದ 14-15 ತಿಂಗಳುಗಳಿಂದ ನಾನು ಬೇರೆಬೇರೆ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ್ದೇನೆ. ಅದು ತಂಡಕ್ಕಾಗಿ. ಆದರೆ, ಈಗ ರೋಹಿತ್ ಶರ್ಮಾ ಇಲ್ಲದ ಕಾರಣ ಟಾಪ್ ಆರ್ಡರ್​ನಲ್ಲಿ ಬ್ಯಾಟಿಂಗ್ ಮಾಡುತ್ತೇನೆ,” ಎಂದು ಹೇಳಿದ್ದಾರೆ. ಹೀಗಾಗಿ ಓಪನರ್ ಆಗಿ ರಾಹುಲ್ ಕಣಕ್ಕಿಳಿಯುವುದು ಖಚಿತವಾಗಿದೆ.

ವೆಂಕಟೇಶ್ ಅಯ್ಯರ್ ಬಗ್ಗೆ ರಾಹುಲ್ ಮಾತನಾಡಿದ್ದು, “ಅಯ್ಯರ್ ಒಬ್ಬ ಪ್ರತಿಭಾನ್ವಿತ ಆಟಗಾರ. ವೇಗದ ಬೌಲರ್ ಆಲ್ರೌಂಡರ್ ತಂಡಕ್ಕೆ ಯಾವಾಗಲು ಮುಖ್ಯ. ಇದೊಂದು ಅವರಿಗೆ ಅತ್ಯುತ್ತಮ ಅವಕಾಶ. ನೆಟ್​ನಲ್ಲೂ ಅವರು ಬೆವರು ಹರಿಸುತ್ತಿದ್ದಾರೆ,” ಎಂದರು.

“ನಾನು ಹೆಚ್ಚಾಗಿ ಮುಂದಿನ ಪ್ಲಾನ್ ಮತ್ತು ಟಾರ್ಗೆಟ್ ಬಗ್ಗೆ ಯೋಚಿಸುವುದಿಲ್ಲ. ಆ ಸಮಯಕ್ಕೆ ತಕ್ಕಂತೆ ಆಟವನ್ನು ಆಡಲು  ಎದುರುನೋಡುತ್ತೇನೆ. ಇದು ನನ್ನ ಕ್ರಿಕೆಟ್ ಶೈಲಿ, ಅದೇರೀತಿ ತಂಡವನ್ನು ಮುನ್ನಡೆಸುತ್ತೇನೆ. ಟೆಸ್ಟ್ ಸರಣಿ ಸೋತಿದ್ದರಿಂದ ನಿಜಕ್ಕೂ ಬೇಸರವಾಗಿದೆ. ಈಗ ಗೆಲುವಿಗಾಗಿ ಹಂಬಲಿಸುತ್ತಿದ್ದೇವೆ. ಹೀಗಾಗಿ ಏಕದಿನ ಸರಣಿ ಎದುರು ನೋಡುತ್ತಿದ್ದೇವೆ. ಕೊಹ್ಲಿ ಅವರ ಅಡಿಯಲ್ಲಿ ಭಾರತ ಅದ್ಭುತವಾದ ಪ್ರದರ್ಶನ ತೋರಿದೆ. ತಂಡವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಕೊಹ್ಲಿ ಪಾತ್ರ ಮಹತ್ವದ್ದು. ನಾವು ಅದನ್ನು ಕಾಪಾಡಬೇಕಿದೆ. ಆಟಗಾರರ ಬತ್ತಳಕೆಯಿಂದ ಏನನ್ನು ತೆಗೆಯಲು ಸಾಧ್ಯವೋ ಅದನ್ನು ಕೊಹ್ಲಿ ಮಾಡುತ್ತಾರೆ. ಇದನ್ನು ನಾನು ಅವರಿಂದ ಕಲಿತಿದ್ದೇನೆ. ನಾನು ಕೂಡ ಕೊಹ್ಲಿ ಮಾರ್ಗವನ್ನೇ ಅನುಸರಿಸುತ್ತಾ ಸಾಗುತ್ತೇನೆ,” ಎಂದು ರಾಹುಲ್ ಹೇಳಿದ್ದಾರೆ.

“ಜೊಹಾನ್ಸ್​ಬರ್ಗ್​ನಲ್ಲಿ ಭಾರತ ಟೆಸ್ಟ್ ತಂಡವನ್ನ ಮುನ್ನಡೆಸು ಅವಕಾಶ ನನಗೆ ಸಿಕ್ಕಿತು. ಅದು ನಾನು ಯಾವಾಗಲೂ ಹೆಮ್ಮೆಪಡುತ್ತೇನೆ. ನನ್ನನ್ನು ಪೂರ್ಣಾವಧಿ ಟೆಸ್ಟ್ ನಾಯಕನನ್ನಾಗಿ ಮಾಡಿದರೆ ಅದೊಂದು ದೊಡ್ಡ ಗೌರವ. ಆದರೆ, ಈಗ ಅದರ ಬಗ್ಗೆ ನಾನು ಯೋಚಿಸುವುದಿಲ್ಲ. ಸದ್ಯ ನನ್ನ ಗಮನ ಏಕದಿನ ಸರಣಿ ಮೇಲಿದೆ,” ಎಂದು ಹೇಳುವ ಮೂಲಕ ಟೆಸ್ಟ್ ನಾಯಕನಾಗಲು ತಯಾರಿದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ.

ವೆಂಕಟೇಶ್ ಅಯ್ಯರ್ ಪದಾರ್ಪಣೆ ಬಹುತೇಕ ಖಚಿತ:

“ಮುಂದಿನ ಸರಣಿಗಾಗಿ ತಂಡದಲ್ಲಿ ಕೆಲವು ಬದಲಾವಣೆಯನ್ನು ಮಾಡಲು ನಾನು ಹೆದರುವುದಿಲ್ಲ. ನಮ್ಮ ಗುರಿ ವಿಶ್ವಕಪ್ ಮೇಲಿದೆ. ಹೀಗಾಗಿ ನಾನು ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. 6ನೇ ಬೌಲಿಂಗ್ ಆಯ್ಕೆ ಬಹಳ ಮುಖ್ಯವಾಗಿದೆ. ನಮ್ಮಲ್ಲಿ ವೆಂಕಟೇಶ್ ಅಯ್ಯರ್ ಇರುವುದರಿಂದ ಅವರಿಗೆ ಅವಕಾಶ ನೀಡವ ಬಗ್ಗೆ ಯೋಚಿಸುತ್ತೇವೆ. ಹಿಂದಿನ ಪಂದ್ಯಗಳಲ್ಲಿ ತಂಡಕ್ಕೆ ಅವರು ಉತ್ತಮ ಕೊಡುಗೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ 6ನೇ ಬೌಲರ್ ಆಯ್ಕೆ ಬಹಳ ಮುಖ್ಯ ಪಾತ್ರವಹಿಸಲಿದೆ. ಎಲ್ಲ ತಂಡ ಅದರ ಕಡೆ ಗಮನ ಹರಿಸುತ್ತಿದೆ”, ಎಂದು ರಾಹುಲ್ ಹೇಳಿದ್ದಾರೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿ ಆಯೋಜಿಸಲಾಗಿದೆ. ಈ ಪೈಕಿ ಮೊದಲ ಪಂದ್ಯ ಜನವರಿ 19 ರಂದು ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ನಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. ಎರಡನೇ ಏಕದಿನ ಪಂದ್ಯ ಇದೇ ಮೈದಾನದಲ್ಲಿ ಜನವರಿ 21 ರಂದು ಆಯೋಜಿಸಲಾಗಿದೆ. ಇದುಕೂಡ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಅಂತಿಮ ಮೂರನೇ ಏಕದಿನ ಪಂದ್ಯ ಕೇಪ್ ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಜನವರಿ 23 ರಂದು ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.

Published On - 3:25 pm, Tue, 18 January 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ