AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೊನೆಗೂ ಪಂಜಾಬ್ ಕಿಂಗ್ಸ್ ತಂಡದಿಂದ ಹೊರನಡೆದ ಕಾರಣ ತಿಳಿಸಿದ ಕೆಎಲ್ ರಾಹುಲ್

IPL 2022: ರವಿಚಂದ್ರನ್ ಅಶ್ವಿನ್ ನಿರ್ಗಮನದ ನಂತರ ರಾಹುಲ್ ಪಂಜಾಬ್ ಕಿಂಗ್ಸ್‌ಗೆ ಎರಡು ಸೀಸನ್​ನಲ್ಲಿ ನಾಯಕತ್ವ ವಹಿಸಿದ್ದರು. ಅಲ್ಲದೆ ಸಾಕಷ್ಟು ರನ್ ಗಳಿಸಿ ಮಿಂಚಿದ್ದರು.

KL Rahul: ಕೊನೆಗೂ ಪಂಜಾಬ್ ಕಿಂಗ್ಸ್ ತಂಡದಿಂದ ಹೊರನಡೆದ ಕಾರಣ ತಿಳಿಸಿದ ಕೆಎಲ್ ರಾಹುಲ್
KL rahul
TV9 Web
| Edited By: |

Updated on: Mar 21, 2022 | 6:06 PM

Share

ಐಪಿಎಲ್ ಸೀಸನ್ 15 ಗಾಗಿ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, ಅದರಲ್ಲೂ ಹೊಸ ತಂಡದ ನಾಯಕನಾಗಿ ಕನ್ನಡಿಗ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಕಳೆದ ಸೀಸನ್​ನಲ್ಲೂ ರಾಹುಲ್ ನಾಯಕರಾಗಿದ್ದರು ಎಂಬುದು ವಿಶೇಷ. ಅಂದರೆ ಪಂಜಾಬ್ ಕಿಂಗ್ಸ್ ತಂಡವನ್ನು ಎರಡು ಸೀಸನ್​ನಲ್ಲಿ ಮುನ್ನಡೆಸಿದ್ದ ರಾಹುಲ್ ಈ ಬಾರಿ ತಂಡದಿಂದ ಹೊರ ಬಂದಿದ್ದರು. ಅಲ್ಲದೆ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್​ ತಂಡದೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಇದಾಗ್ಯೂ ಪಂಜಾಬ್ ಕಿಂಗ್ಸ್​ ತಂಡದಿಂದ ಯಾಕಾಗಿ ಹೊರಬಂದಿದ್ದೇನೆ ಎಂಬುದನ್ನು ರಾಹುಲ್ ಎಲ್ಲೂ ಸ್ಪಷ್ಟಪಡಿಸಿರಲಿಲ್ಲ. ಇದೀಗ ಮೊದಲ ಬಾರಿಗೆ ರಾಹುಲ್ ಮನಬಿಚ್ಚಿ ಮಾತನಾಡಿದ್ದಾರೆ.

ರವಿಚಂದ್ರನ್ ಅಶ್ವಿನ್ ನಿರ್ಗಮನದ ನಂತರ ರಾಹುಲ್ ಪಂಜಾಬ್ ಕಿಂಗ್ಸ್‌ಗೆ ಎರಡು ಸೀಸನ್​ನಲ್ಲಿ ನಾಯಕತ್ವ ವಹಿಸಿದ್ದರು. ಅಲ್ಲದೆ ಸಾಕಷ್ಟು ರನ್ ಗಳಿಸಿ ಮಿಂಚಿದ್ದರು. ಇದಾಗ್ಯೂ ತಮ್ಮ ನಾಯಕತ್ವದಿಂದ ಪ್ರಭಾವ ಬೀರಲು ಸಾಧ್ಯವಾಗಿರಲಿಲ್ಲ . ಅಷ್ಟೇ ಅಲ್ಲದೆ ತಂಡವನ್ನು ಪ್ಲೇಆಫ್‌ಗೆ ಕರೆದೊಯ್ಯಲು ವಿಫಲರಾಗಿದ್ದರು. ಇದಾಗ್ಯೂ ರಾಹುಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಪಂಜಾಬ್ ಬಯಸಿದ್ದರೂ, ಆ ಆಫರ್ ಅನ್ನು ಕೆಎಲ್ಆರ್​ ಒಪ್ಪಿರಲಿಲ್ಲ. ಇದಕ್ಕೆ ಮುಖ್ಯ ಕಾರಣ, ಮತ್ತಷ್ಟು ಅವಕಾಶವನ್ನು ಎದುರು ನೋಡಲು ನಿರ್ಧರಿಸಿರುವುದು ಎಂದು ರಾಹುಲ್ ತಿಳಿಸಿದ್ದಾರೆ.

ತಂಡವನ್ನು ತೊರೆಯುವ ನಿರ್ಧಾರವನ್ನು ತೆಗೆದುಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿತ್ತು. ನಾನು ನಾಲ್ಕು ವರ್ಷಗಳ ಕಾಲ ಪಂಜಾಬ್ ಕಿಂಗ್ಸ್​ ತಂಡದ ಜೊತೆ ಇದ್ದೆ. ತಂಡದ ಜೊತೆ ಉತ್ತಮ ಸಮಯವನ್ನು ಕಳೆದಿದ್ದೆ. ಇದಾಗ್ಯೂ ನನಗಾಗಿ ಇನ್ನೇನು ಕಾದಿದೆ. ಹೊಸ ಅವಕಾಶವನ್ನು ಎದುರು ನೋಡಲು ನಾನು ಬಯಸಿದ್ದೆ. ಹೀಗಾಗಿ ತಂಡದಿಂದ ಹೊರಬರುವ ನಿರ್ಧಾರವನ್ನು ತೆಗೆದುಕೊಂಡೆ. ನನ್ನ ಕ್ರಿಕೆಟ್ ಕೆರಿಯರ್​ನಲ್ಲಿ ಬೇರೇನಾದರೂ ಮಾಡಬಹುದೇ ಎದುರು ನೋಡುತ್ತಿದ್ದೇನೆ. ಹೀಗಾಗಿ ಕೆಲ ನಿರ್ಧಾರವನ್ನು ತೆಗೆದುಕೊಳ್ಳಲೇಬೇಕಾಗುತ್ತದೆ. ಅದರಂತೆ ಪಂಜಾಬ್ ಕಿಂಗ್ಸ್​ ತಂಡದಿಂದ ಹೊರಬಂದು ಹೊಸ ನಿರೀಕ್ಷೆಗಳನ್ನು ಇಟ್ಟುಕೊಂಡಿರುವುದಾಗಿ ರಾಹುಲ್ ತಿಳಿಸಿದ್ದಾರೆ.

ಇದೀಗ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಕೆಎಲ್ ರಾಹುಲ್ ನಿರ್ಗಮನದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಮತ್ತೋರ್ವ ಕನ್ನಡಿಗ ಮಯಾಂಕ್ ಅಗರ್ವಾಲ್​ಗೆ ನಾಯಕನ ಪಟ್ಟ ನೀಡಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಎರಡು ತಂಡಗಳಲ್ಲಿ ಕನ್ನಡಿಗರು ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

(KL rahul reveals the reason of leaving punjab kings before the ipl 2022)

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?