Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೊನೆಗೂ ಪಂಜಾಬ್ ಕಿಂಗ್ಸ್ ತಂಡದಿಂದ ಹೊರನಡೆದ ಕಾರಣ ತಿಳಿಸಿದ ಕೆಎಲ್ ರಾಹುಲ್

IPL 2022: ರವಿಚಂದ್ರನ್ ಅಶ್ವಿನ್ ನಿರ್ಗಮನದ ನಂತರ ರಾಹುಲ್ ಪಂಜಾಬ್ ಕಿಂಗ್ಸ್‌ಗೆ ಎರಡು ಸೀಸನ್​ನಲ್ಲಿ ನಾಯಕತ್ವ ವಹಿಸಿದ್ದರು. ಅಲ್ಲದೆ ಸಾಕಷ್ಟು ರನ್ ಗಳಿಸಿ ಮಿಂಚಿದ್ದರು.

KL Rahul: ಕೊನೆಗೂ ಪಂಜಾಬ್ ಕಿಂಗ್ಸ್ ತಂಡದಿಂದ ಹೊರನಡೆದ ಕಾರಣ ತಿಳಿಸಿದ ಕೆಎಲ್ ರಾಹುಲ್
KL rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 21, 2022 | 6:06 PM

ಐಪಿಎಲ್ ಸೀಸನ್ 15 ಗಾಗಿ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, ಅದರಲ್ಲೂ ಹೊಸ ತಂಡದ ನಾಯಕನಾಗಿ ಕನ್ನಡಿಗ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಕಳೆದ ಸೀಸನ್​ನಲ್ಲೂ ರಾಹುಲ್ ನಾಯಕರಾಗಿದ್ದರು ಎಂಬುದು ವಿಶೇಷ. ಅಂದರೆ ಪಂಜಾಬ್ ಕಿಂಗ್ಸ್ ತಂಡವನ್ನು ಎರಡು ಸೀಸನ್​ನಲ್ಲಿ ಮುನ್ನಡೆಸಿದ್ದ ರಾಹುಲ್ ಈ ಬಾರಿ ತಂಡದಿಂದ ಹೊರ ಬಂದಿದ್ದರು. ಅಲ್ಲದೆ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್​ ತಂಡದೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಇದಾಗ್ಯೂ ಪಂಜಾಬ್ ಕಿಂಗ್ಸ್​ ತಂಡದಿಂದ ಯಾಕಾಗಿ ಹೊರಬಂದಿದ್ದೇನೆ ಎಂಬುದನ್ನು ರಾಹುಲ್ ಎಲ್ಲೂ ಸ್ಪಷ್ಟಪಡಿಸಿರಲಿಲ್ಲ. ಇದೀಗ ಮೊದಲ ಬಾರಿಗೆ ರಾಹುಲ್ ಮನಬಿಚ್ಚಿ ಮಾತನಾಡಿದ್ದಾರೆ.

ರವಿಚಂದ್ರನ್ ಅಶ್ವಿನ್ ನಿರ್ಗಮನದ ನಂತರ ರಾಹುಲ್ ಪಂಜಾಬ್ ಕಿಂಗ್ಸ್‌ಗೆ ಎರಡು ಸೀಸನ್​ನಲ್ಲಿ ನಾಯಕತ್ವ ವಹಿಸಿದ್ದರು. ಅಲ್ಲದೆ ಸಾಕಷ್ಟು ರನ್ ಗಳಿಸಿ ಮಿಂಚಿದ್ದರು. ಇದಾಗ್ಯೂ ತಮ್ಮ ನಾಯಕತ್ವದಿಂದ ಪ್ರಭಾವ ಬೀರಲು ಸಾಧ್ಯವಾಗಿರಲಿಲ್ಲ . ಅಷ್ಟೇ ಅಲ್ಲದೆ ತಂಡವನ್ನು ಪ್ಲೇಆಫ್‌ಗೆ ಕರೆದೊಯ್ಯಲು ವಿಫಲರಾಗಿದ್ದರು. ಇದಾಗ್ಯೂ ರಾಹುಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಪಂಜಾಬ್ ಬಯಸಿದ್ದರೂ, ಆ ಆಫರ್ ಅನ್ನು ಕೆಎಲ್ಆರ್​ ಒಪ್ಪಿರಲಿಲ್ಲ. ಇದಕ್ಕೆ ಮುಖ್ಯ ಕಾರಣ, ಮತ್ತಷ್ಟು ಅವಕಾಶವನ್ನು ಎದುರು ನೋಡಲು ನಿರ್ಧರಿಸಿರುವುದು ಎಂದು ರಾಹುಲ್ ತಿಳಿಸಿದ್ದಾರೆ.

ತಂಡವನ್ನು ತೊರೆಯುವ ನಿರ್ಧಾರವನ್ನು ತೆಗೆದುಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿತ್ತು. ನಾನು ನಾಲ್ಕು ವರ್ಷಗಳ ಕಾಲ ಪಂಜಾಬ್ ಕಿಂಗ್ಸ್​ ತಂಡದ ಜೊತೆ ಇದ್ದೆ. ತಂಡದ ಜೊತೆ ಉತ್ತಮ ಸಮಯವನ್ನು ಕಳೆದಿದ್ದೆ. ಇದಾಗ್ಯೂ ನನಗಾಗಿ ಇನ್ನೇನು ಕಾದಿದೆ. ಹೊಸ ಅವಕಾಶವನ್ನು ಎದುರು ನೋಡಲು ನಾನು ಬಯಸಿದ್ದೆ. ಹೀಗಾಗಿ ತಂಡದಿಂದ ಹೊರಬರುವ ನಿರ್ಧಾರವನ್ನು ತೆಗೆದುಕೊಂಡೆ. ನನ್ನ ಕ್ರಿಕೆಟ್ ಕೆರಿಯರ್​ನಲ್ಲಿ ಬೇರೇನಾದರೂ ಮಾಡಬಹುದೇ ಎದುರು ನೋಡುತ್ತಿದ್ದೇನೆ. ಹೀಗಾಗಿ ಕೆಲ ನಿರ್ಧಾರವನ್ನು ತೆಗೆದುಕೊಳ್ಳಲೇಬೇಕಾಗುತ್ತದೆ. ಅದರಂತೆ ಪಂಜಾಬ್ ಕಿಂಗ್ಸ್​ ತಂಡದಿಂದ ಹೊರಬಂದು ಹೊಸ ನಿರೀಕ್ಷೆಗಳನ್ನು ಇಟ್ಟುಕೊಂಡಿರುವುದಾಗಿ ರಾಹುಲ್ ತಿಳಿಸಿದ್ದಾರೆ.

ಇದೀಗ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಕೆಎಲ್ ರಾಹುಲ್ ನಿರ್ಗಮನದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಮತ್ತೋರ್ವ ಕನ್ನಡಿಗ ಮಯಾಂಕ್ ಅಗರ್ವಾಲ್​ಗೆ ನಾಯಕನ ಪಟ್ಟ ನೀಡಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಎರಡು ತಂಡಗಳಲ್ಲಿ ಕನ್ನಡಿಗರು ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

(KL rahul reveals the reason of leaving punjab kings before the ipl 2022)

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್