AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಭಾರತ ಟಿ-20 ತಂಡದ ಉಪ ನಾಯಕನ ಪಟ್ಟಕ್ಕೆ ಮೂರು ಆಟಗಾರರ ಶಾರ್ಟ್​ ಲಿಸ್ಟ್ ರೆಡಿ

Rohit Sharma: ವಿರಾಟ್ ಕೊಹ್ಲಿ ನಾಯಕತ್ವದ ಬಳಿಕ ರೋಹಿತ್ ಶರ್ಮಾ ನಾಯಕನಾದರೆ ಉಪ ನಾಯಕನ ಪಟ್ಟ ಯಾರಿಗೆ ಎಂಬೂದು ಕುತೂಹಲ. ಮೂಲಗಳ ಪ್ರಕಾರ ಭಾರತ ಟಿ-20 ತಂಡದ ಉಪ ನಾಯಕನ ಸ್ಥಾನಕ್ಕೆ ಮೂವರು ಸ್ಟಾರ್ ಆಟಗಾರರ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆಯಂತೆ.

Virat Kohli: ಭಾರತ ಟಿ-20 ತಂಡದ ಉಪ ನಾಯಕನ ಪಟ್ಟಕ್ಕೆ ಮೂರು ಆಟಗಾರರ ಶಾರ್ಟ್​ ಲಿಸ್ಟ್ ರೆಡಿ
Virat Kohli Team India
TV9 Web
| Edited By: |

Updated on: Sep 17, 2021 | 8:54 AM

Share

ಕ್ರಿಕೆಟ್ (Cricket) ಜಗತ್ತಿನಲ್ಲಿ ಅಚ್ಚರಿ ಎಂಬಂತೆ ಗುರುವಾರ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Virat Kohli) ಭಾರತ ಟಿ-20 ಕ್ರಿಕೆಟ್​ನಿಂದ ಟಿ-20 ವಿಶ್ವಕಪ್ (ICC T20 World Cup 2021) ಬಳಿಕ ನಾಯಕತ್ವ ತ್ಯಜಿಸುವುದಾಗಿ ಘೋಷಣೆ ಮಾಡಿದರು. ನಾಯಕತ್ವ ಬಿಟ್ಟುಕೊಟ್ಟು ಬ್ಯಾಟ್ಸ್​ಮನ್​ ಆಗಿ ಮುಂದುವರೆಯುವುದಾಗಿ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ (Team India) ನಾಯಕನಾಗಿ ನನ್ನ ಪಯಣದಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದು ಕೊಹ್ಲಿ ಹೇಳಿದರು. ಕೊಹ್ಲಿ ಟಿ-20 ನಾಯಕತ್ವದಿಂದ ಕೆಳಗಿಳಿಯುವ ಸುದ್ದಿ ಹೊರಬಿದ್ದ ಬಿನ್ನಲ್ಲೇ ಚುಟುಕು ಕ್ರಿಕೆಟ್​ಗೆ ಟೀಮ್ ಇಂಡಿಯಾದ ಮುಂದಿನ ನಾಯಕ ಯಾರು? (Captain), ಉಪ ನಾಯಕ ಯಾರು (Vice Captain) ಎಂಬ ಪ್ರಶ್ನೆ ಎದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಂತು ಈ ಬಗ್ಗೆ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿದೆ.

ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಕೊಹ್ಲಿಯ ನಂತರ ಭಾರತ ಟಿ-20 ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಲಿದ್ದಾರೆ. ಸದ್ಯ ವೈಟ್ ಬಾಲ್ ಕ್ರಿಕೆಟ್​ನ ಉಪ ನಾಯಕನಾಗಿರುವ ಹಿಟ್​ಮ್ಯಾನ್ ನಾಯಕತ್ವದ ಜವಾಬ್ದಾರಿ ಹೊರಲಿದ್ದಾರೆ. ಬಿಸಿಸಿಐ ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಲಿದೆ.

ರೋಹಿತ್ ನಾಯಕನಾದರೆ ಉಪ ನಾಯಕನ ಪಟ್ಟ ಯಾರಿಗೆ ಎಂಬೂದು ಕುತೂಹಲ. ಮೂಲಗಳ ಪ್ರಕಾರ ಭಾರತ ಟಿ-20 ತಂಡದ ಉಪ ನಾಯಕನ ಸ್ಥಾನಕ್ಕೆ ಮೂವರು ಸ್ಟಾರ್ ಆಟಗಾರರ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆಯಂತೆ.

ಕೆ. ಎಲ್ ರಾಹುಲ್: ರಾಹುಲ್​ಗೆ ನಾಯಕನಾಗಿ ತಂಡವನ್ನು ಮುನ್ನಡೆಸಿದ ಅನುಭವವಿದೆ. ಅಲ್ಲದೆ ಕಳೆದ ವರ್ಷ ನ್ಯೂಜಿಲೆಂಡ್ ವಿರುದ್ಧದ ಒಂದು ಟಿ-20 ಪಂದ್ಯದಲ್ಲಿ ಇವರು ಟೀಮ್ ಇಂಡಿಯಾವನ್ನು ನಾಯಕನಾಗಿ ಮುನ್ನಡೆಸಿದ್ದರು. ಈ ಸಂದರ್ಭ ವಿರಾಟ್ ಕೊಹ್ಲಿ ವಿಶ್ರಾಂತಿಯಲ್ಲಿದ್ದರೆ, ರೋಹಿತ್ ಶರ್ಮಾ ಇಂಜುರಿಗೆ ತುತ್ತಾಗಿದ್ದರು. ಅಲ್ಲದೆ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಕ್ಯಾಪ್ಟನ್ ಆಗಿದ್ದಾರೆ.

ರಾಹುಲ್ ಪರ ಸುನಿಲ್ ಗವಾಸ್ಕರ್ ಕೂಡ ಮಾತನಾಡಿದ್ದು, ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನನ್ನಾಗಿ ರೂಪುಗೊಳಿಸಲು ಬಿಸಿಸಿಐ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಉಪನಾಯಕನಾಗಿ ಕೆಎಲ್ ರಾಹುಲ್‌ರನ್ನು ನೇಮಿಸಬೇಕು. ಈ ಮೂಲಕ ಭವಿಷ್ಯದ ನಾಯಕನನ್ನಾಗಿ ಬೆಳೆಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಸಲಹೆಯನ್ನು ನೀಡಿದ್ದಾರೆ.

ರಿಷಭ್ ಪಂತ್: ಪಂತ್​ಗೆ ಕೂಡ ನಾಯಕತ್ವದ ಜವಾಬ್ದಾರಿಯ ಅರಿವಿದೆ. ದೇಶೀಯ ಕ್ರಿಕೆಟ್​ನಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸಿದರೆ, ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇವರ ನಾಯಕತ್ವದಡಿಯಲ್ಲಿ ಅಮೋಘ ಪ್ರದರ್ಶನ ನೀಡಿ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿದೆ. ಉಪ ನಾಯಕನ ಪಟ್ಟಕ್ಕೆ ಇವರು ಮೊದಲ ಆಯ್ಕೆ ಎನ್ನಲಾಗಿದೆ.

ಜಸ್​ಪ್ರೀತ್ ಬುಮ್ರಾ: ಬುಮ್ರಾ ಅವರಿಗೆ ನಾಯಕನಾಗಿ ಯಾವುದೇ ಮಾದರಿಯಲ್ಲೂ ಅನುಭವವಿಲ್ಲ. ಆದರೆ, ಭಾರತ ಮತ್ತು ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರನಾಗಿದ್ದಾರೆ. ಅಲ್ಲದೆ ಲೀಡರ್​ಶಿಪ್ ಗ್ರೂಪ್​ನಲ್ಲಿ ಇವರು ಕೆಲಸ ಮಾಡಿದ್ದಾರೆ. ಹೀಗಾಗಿ ಇವರ ಹೆಸರು ಕೂಡ ಉಪ ನಾಯಕನ ರೇಸ್​ನಲ್ಲಿ ಕಾಣಿಸಿಕೊಂಡಿದೆ.

ಐಸಿಸಿ ಟಿ-20 ವಿಶ್ವಕಪ್ ನಂತರ 20 ಓವರ್​ಗಳ ತಂಡದ ನಾಯಕತ್ವ ತೊರೆಯುವುದಾಗಿ ನಾಯಕ ವಿರಾಟ್ ಕೊಹ್ಲಿ ಗುರುವಾರ ತಮ್ಮ ಇನ್​ಸ್ಟಾಗ್ರಾಮ್, ಟ್ವಿಟ್ಟರ್ ಮತ್ತು ಫೇಸ್​ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಈ ಬಗ್ಗೆ ಸುದೀರ್ಘವಾದ ಪತ್ರ ಬರೆದಿರುವ ಕೊಹ್ಲಿ, ಟಿ-20 ನಾಯಕತ್ವವನ್ನು ತೊರೆದು ಬೇರೆಯವರಿಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೆ ಅಕ್ಟೋಬರ್- ನವೆಂಬರ್​ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ ಏಕದಿನ ಹಾಗೂ ಟಿ-20 ಪಂದ್ಯಗಳಿಗೆ ಟೀಮ್ ಇಂಡಿಯಾ ನಾಯಕತ್ವವನ್ನು ಕೊಹ್ಲಿ ತೊರೆಯಲಿದ್ದಾರೆ ಎಂಬ ವರದಿಯಾಗಿತ್ತು. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಸದ್ಯ ಕೊಹ್ಲಿ ಈ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

India vs New Zealand: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಬೆನ್ನಲ್ಲೇ ಭಾರತದ ನ್ಯೂಜಿಲೆಂಡ್ ಪ್ರವಾಸವನ್ನೂ ರದ್ದುಗೊಳಿಸಿದ ಬಿಸಿಸಿಐ

Virat Kohli: ವಿರಾಟ್ ಕೊಹ್ಲಿ ಟಿ-20 ನಾಯಕತ್ವಕ್ಕೆ ವಿದಾಯ ಹೇಳಿದ ಬೆನ್ನಲ್ಲೇ ಸೌರವ್ ಗಂಗೂಲಿ ಏನಂದ್ರು?

(KL Rahul Rishabh Pant and Jasprit Bumrah are in the race to become India T20I Vice Captain)

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ