AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್​ ಆಫ್ರಿಕಾ ಸರಣಿಯಿಂದ ಕೊನೇ ಕ್ಷಣದಲ್ಲಿ ಹೊರ ನಡೆದ ಕನ್ನಡಿಗ ರಾಹುಲ್​; ಪಂತ್​ಗೆ ನಾಯಕತ್ವ

ಐದು ಪಂದ್ಯಗಳ ಸರಣಿಯನ್ನು ಕನ್ನಡಿಗ ಕೆ.ಎಲ್​. ರಾಹುಲ್ ಮುನ್ನಡೆಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರು ಗಾಯಕ್ಕೊಳಗಾದ ಕಾರಣ, ಸರಣಿಯಿಂದಲೇ ಹೊರ ನಡೆದಿದ್ದಾರೆ. ರಿಷಬ್ ಪಂತ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ಸೌತ್​ ಆಫ್ರಿಕಾ ಸರಣಿಯಿಂದ ಕೊನೇ ಕ್ಷಣದಲ್ಲಿ ಹೊರ ನಡೆದ ಕನ್ನಡಿಗ ರಾಹುಲ್​; ಪಂತ್​ಗೆ ನಾಯಕತ್ವ
ರಾಹುಲ್-ರಿಷಭ್
TV9 Web
| Edited By: |

Updated on:Jun 08, 2022 | 7:35 PM

Share

ಐಪಿಎಲ್​ 2022 ಪೂರ್ಣಗೊಳ್ಳುತ್ತಿದ್ದಂತೆ ಅಂತಾರಾಷ್ಟ್ರೀಯ ಪಂದ್ಯಗಳು ಆರಂಭಗೊಳ್ಳುತ್ತಿವೆ. ಈ ಬಾರಿಯ ಐಪಿಎಲ್ (IPL 2022)​ ಬಳಿಕ ಭಾರತ ಸೌತ್​ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಜೂನ್​ 9ರಿಂದ ಪಂದ್ಯ ಆರಂಭಗೊಳ್ಳಲಿದೆ. ಐದು ಪಂದ್ಯಗಳ ಟಿ20 ಸರಣಿಯನ್ನು ಕನ್ನಡಿಗ ಕೆ.ಎಲ್​. ರಾಹುಲ್ (KL Rahul) ಮುನ್ನಡೆಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ರಾಹುಲ್ ಗಾಯಕ್ಕೊಳಗಾದ ಕಾರಣ, ಸರಣಿಯಿಂದಲೇ ಹೊರ ನಡೆದಿದ್ದಾರೆ. ರಿಷಭ್​ ಪಂತ್ (Rishabh Pant) ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಪ್ರಮುಖ ಆಟಗಾರರಾದ ರೋಹಿತ್​ ಶರ್ಮಾ, ವಿರಾಟ್​ ಕೊಹ್ಲಿ ಮೊದಲಾದವರಿಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ, ರಾಹುಲ್​ ಹೆಗಲಿಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿತ್ತು. ರಾಹುಲ್ ಅವರು ಐಪಿಎಲ್​ನಲ್ಲಿ ಪಂಜಾಬ್​ ಕಿಂಗ್ಸ್ ಹಾಗೂ ಲಖ್ನೋ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಈ ಕಾರಣಕ್ಕೆ ಅವರಿಗೆ ಟಿ20 ಸರಣಿಯ ನಾಯಕತ್ವ ನೀಡಲಾಗಿತ್ತು. ಆದರೆ ಅವರು ತೊಡೆಸಂದು ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ, ಉಪ ನಾಯಕನ ಸ್ಥಾನದಲ್ಲಿದ್ದ ಪಂತ್ ಅವರಿಗೆ ನಾಯಕತ್ವ ಸಿಕ್ಕಿದೆ. ಐಪಿಎಲ್​ನಲ್ಲಿ ಗುಜರಾತ್​ ಟೈಟಾನ್ಸ್​​ ಮೊದಲ ಸೀಸನ್​ನಲ್ಲೇ ಕಪ್ ತಂದು ಕೊಟ್ಟ ಹಾರ್ದಿಕ್​ ಪಾಂಡ್ಯ ಉಪ ನಾಯಕನ ಸ್ಥಾನ ಅಲಂಕರಿಸಿದ್ದಾರೆ. ಸ್ಪಿನ್ನರ್ ಕುಲ್ದೀಪ್ ಯಾದವ್​ ಕೂಡ ಗಾಯಗೊಂಡಿದ್ದು ಅವರು ಕೂಡ ಈ ಸರಣಿಯಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಬಿಸಿಸಿಐ ಟ್ವೀಟ್ ಮಾಡಿದೆ.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಾಳೆ (ಜೂನ್ 9) ಮೊದಲ ಪಂದ್ಯ ನಡೆಯಲಿದೆ. ಟೀಮ್ ಇಂಡಿಯಾ ಈ ಪಂದ್ಯ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಸತತ 12 ಪಂದ್ಯಗಳನ್ನು ಗೆದ್ದಿರುವ ಭಾರತ ತಂಡಕ್ಕೆ ವಿಶ್ವ ದಾಖಲೆ ಬರೆಯಲು ಒಂದು ಗೆಲುವಿನ ಅವಶ್ಯಕತೆಯಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ 13 ಪಂದ್ಯ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆ ಸಿಗಲಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:02 pm, Wed, 8 June 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?