ಸೌತ್​ ಆಫ್ರಿಕಾ ಸರಣಿಯಿಂದ ಕೊನೇ ಕ್ಷಣದಲ್ಲಿ ಹೊರ ನಡೆದ ಕನ್ನಡಿಗ ರಾಹುಲ್​; ಪಂತ್​ಗೆ ನಾಯಕತ್ವ

ಐದು ಪಂದ್ಯಗಳ ಸರಣಿಯನ್ನು ಕನ್ನಡಿಗ ಕೆ.ಎಲ್​. ರಾಹುಲ್ ಮುನ್ನಡೆಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರು ಗಾಯಕ್ಕೊಳಗಾದ ಕಾರಣ, ಸರಣಿಯಿಂದಲೇ ಹೊರ ನಡೆದಿದ್ದಾರೆ. ರಿಷಬ್ ಪಂತ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ಸೌತ್​ ಆಫ್ರಿಕಾ ಸರಣಿಯಿಂದ ಕೊನೇ ಕ್ಷಣದಲ್ಲಿ ಹೊರ ನಡೆದ ಕನ್ನಡಿಗ ರಾಹುಲ್​; ಪಂತ್​ಗೆ ನಾಯಕತ್ವ
ರಾಹುಲ್-ರಿಷಭ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 08, 2022 | 7:35 PM

ಐಪಿಎಲ್​ 2022 ಪೂರ್ಣಗೊಳ್ಳುತ್ತಿದ್ದಂತೆ ಅಂತಾರಾಷ್ಟ್ರೀಯ ಪಂದ್ಯಗಳು ಆರಂಭಗೊಳ್ಳುತ್ತಿವೆ. ಈ ಬಾರಿಯ ಐಪಿಎಲ್ (IPL 2022)​ ಬಳಿಕ ಭಾರತ ಸೌತ್​ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಜೂನ್​ 9ರಿಂದ ಪಂದ್ಯ ಆರಂಭಗೊಳ್ಳಲಿದೆ. ಐದು ಪಂದ್ಯಗಳ ಟಿ20 ಸರಣಿಯನ್ನು ಕನ್ನಡಿಗ ಕೆ.ಎಲ್​. ರಾಹುಲ್ (KL Rahul) ಮುನ್ನಡೆಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ರಾಹುಲ್ ಗಾಯಕ್ಕೊಳಗಾದ ಕಾರಣ, ಸರಣಿಯಿಂದಲೇ ಹೊರ ನಡೆದಿದ್ದಾರೆ. ರಿಷಭ್​ ಪಂತ್ (Rishabh Pant) ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಪ್ರಮುಖ ಆಟಗಾರರಾದ ರೋಹಿತ್​ ಶರ್ಮಾ, ವಿರಾಟ್​ ಕೊಹ್ಲಿ ಮೊದಲಾದವರಿಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ, ರಾಹುಲ್​ ಹೆಗಲಿಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿತ್ತು. ರಾಹುಲ್ ಅವರು ಐಪಿಎಲ್​ನಲ್ಲಿ ಪಂಜಾಬ್​ ಕಿಂಗ್ಸ್ ಹಾಗೂ ಲಖ್ನೋ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಈ ಕಾರಣಕ್ಕೆ ಅವರಿಗೆ ಟಿ20 ಸರಣಿಯ ನಾಯಕತ್ವ ನೀಡಲಾಗಿತ್ತು. ಆದರೆ ಅವರು ತೊಡೆಸಂದು ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ, ಉಪ ನಾಯಕನ ಸ್ಥಾನದಲ್ಲಿದ್ದ ಪಂತ್ ಅವರಿಗೆ ನಾಯಕತ್ವ ಸಿಕ್ಕಿದೆ. ಐಪಿಎಲ್​ನಲ್ಲಿ ಗುಜರಾತ್​ ಟೈಟಾನ್ಸ್​​ ಮೊದಲ ಸೀಸನ್​ನಲ್ಲೇ ಕಪ್ ತಂದು ಕೊಟ್ಟ ಹಾರ್ದಿಕ್​ ಪಾಂಡ್ಯ ಉಪ ನಾಯಕನ ಸ್ಥಾನ ಅಲಂಕರಿಸಿದ್ದಾರೆ. ಸ್ಪಿನ್ನರ್ ಕುಲ್ದೀಪ್ ಯಾದವ್​ ಕೂಡ ಗಾಯಗೊಂಡಿದ್ದು ಅವರು ಕೂಡ ಈ ಸರಣಿಯಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಬಿಸಿಸಿಐ ಟ್ವೀಟ್ ಮಾಡಿದೆ.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಾಳೆ (ಜೂನ್ 9) ಮೊದಲ ಪಂದ್ಯ ನಡೆಯಲಿದೆ. ಟೀಮ್ ಇಂಡಿಯಾ ಈ ಪಂದ್ಯ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಸತತ 12 ಪಂದ್ಯಗಳನ್ನು ಗೆದ್ದಿರುವ ಭಾರತ ತಂಡಕ್ಕೆ ವಿಶ್ವ ದಾಖಲೆ ಬರೆಯಲು ಒಂದು ಗೆಲುವಿನ ಅವಶ್ಯಕತೆಯಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ 13 ಪಂದ್ಯ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆ ಸಿಗಲಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:02 pm, Wed, 8 June 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ