AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್​ ಆಫ್ರಿಕಾ ಸರಣಿಯಿಂದ ಕೊನೇ ಕ್ಷಣದಲ್ಲಿ ಹೊರ ನಡೆದ ಕನ್ನಡಿಗ ರಾಹುಲ್​; ಪಂತ್​ಗೆ ನಾಯಕತ್ವ

ಐದು ಪಂದ್ಯಗಳ ಸರಣಿಯನ್ನು ಕನ್ನಡಿಗ ಕೆ.ಎಲ್​. ರಾಹುಲ್ ಮುನ್ನಡೆಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರು ಗಾಯಕ್ಕೊಳಗಾದ ಕಾರಣ, ಸರಣಿಯಿಂದಲೇ ಹೊರ ನಡೆದಿದ್ದಾರೆ. ರಿಷಬ್ ಪಂತ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ಸೌತ್​ ಆಫ್ರಿಕಾ ಸರಣಿಯಿಂದ ಕೊನೇ ಕ್ಷಣದಲ್ಲಿ ಹೊರ ನಡೆದ ಕನ್ನಡಿಗ ರಾಹುಲ್​; ಪಂತ್​ಗೆ ನಾಯಕತ್ವ
ರಾಹುಲ್-ರಿಷಭ್
TV9 Web
| Edited By: |

Updated on:Jun 08, 2022 | 7:35 PM

Share

ಐಪಿಎಲ್​ 2022 ಪೂರ್ಣಗೊಳ್ಳುತ್ತಿದ್ದಂತೆ ಅಂತಾರಾಷ್ಟ್ರೀಯ ಪಂದ್ಯಗಳು ಆರಂಭಗೊಳ್ಳುತ್ತಿವೆ. ಈ ಬಾರಿಯ ಐಪಿಎಲ್ (IPL 2022)​ ಬಳಿಕ ಭಾರತ ಸೌತ್​ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಜೂನ್​ 9ರಿಂದ ಪಂದ್ಯ ಆರಂಭಗೊಳ್ಳಲಿದೆ. ಐದು ಪಂದ್ಯಗಳ ಟಿ20 ಸರಣಿಯನ್ನು ಕನ್ನಡಿಗ ಕೆ.ಎಲ್​. ರಾಹುಲ್ (KL Rahul) ಮುನ್ನಡೆಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ರಾಹುಲ್ ಗಾಯಕ್ಕೊಳಗಾದ ಕಾರಣ, ಸರಣಿಯಿಂದಲೇ ಹೊರ ನಡೆದಿದ್ದಾರೆ. ರಿಷಭ್​ ಪಂತ್ (Rishabh Pant) ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಪ್ರಮುಖ ಆಟಗಾರರಾದ ರೋಹಿತ್​ ಶರ್ಮಾ, ವಿರಾಟ್​ ಕೊಹ್ಲಿ ಮೊದಲಾದವರಿಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ, ರಾಹುಲ್​ ಹೆಗಲಿಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿತ್ತು. ರಾಹುಲ್ ಅವರು ಐಪಿಎಲ್​ನಲ್ಲಿ ಪಂಜಾಬ್​ ಕಿಂಗ್ಸ್ ಹಾಗೂ ಲಖ್ನೋ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಈ ಕಾರಣಕ್ಕೆ ಅವರಿಗೆ ಟಿ20 ಸರಣಿಯ ನಾಯಕತ್ವ ನೀಡಲಾಗಿತ್ತು. ಆದರೆ ಅವರು ತೊಡೆಸಂದು ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ, ಉಪ ನಾಯಕನ ಸ್ಥಾನದಲ್ಲಿದ್ದ ಪಂತ್ ಅವರಿಗೆ ನಾಯಕತ್ವ ಸಿಕ್ಕಿದೆ. ಐಪಿಎಲ್​ನಲ್ಲಿ ಗುಜರಾತ್​ ಟೈಟಾನ್ಸ್​​ ಮೊದಲ ಸೀಸನ್​ನಲ್ಲೇ ಕಪ್ ತಂದು ಕೊಟ್ಟ ಹಾರ್ದಿಕ್​ ಪಾಂಡ್ಯ ಉಪ ನಾಯಕನ ಸ್ಥಾನ ಅಲಂಕರಿಸಿದ್ದಾರೆ. ಸ್ಪಿನ್ನರ್ ಕುಲ್ದೀಪ್ ಯಾದವ್​ ಕೂಡ ಗಾಯಗೊಂಡಿದ್ದು ಅವರು ಕೂಡ ಈ ಸರಣಿಯಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಬಿಸಿಸಿಐ ಟ್ವೀಟ್ ಮಾಡಿದೆ.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಾಳೆ (ಜೂನ್ 9) ಮೊದಲ ಪಂದ್ಯ ನಡೆಯಲಿದೆ. ಟೀಮ್ ಇಂಡಿಯಾ ಈ ಪಂದ್ಯ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಸತತ 12 ಪಂದ್ಯಗಳನ್ನು ಗೆದ್ದಿರುವ ಭಾರತ ತಂಡಕ್ಕೆ ವಿಶ್ವ ದಾಖಲೆ ಬರೆಯಲು ಒಂದು ಗೆಲುವಿನ ಅವಶ್ಯಕತೆಯಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ 13 ಪಂದ್ಯ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆ ಸಿಗಲಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:02 pm, Wed, 8 June 22

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ