AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್​ಗೆ ಅಗ್ನಿ ಪರೀಕ್ಷೆ..!

Asia Cup 2023: ಈ ಬಾರಿಯ ಏಷ್ಯಾಕಪ್​ ಆಗಸ್ಟ್ 30 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್​ ಅಯ್ಯರ್ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಒಂದು ವೇಳೆ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಈ ಇಬ್ಬರು ಆಟಗಾರರು ವಿಫಲವಾದರೆ, ಏಕದಿನ ವಿಶ್ವಕಪ್ ತಂಡದಲ್ಲೂ ಚಾನ್ಸ್ ಸಿಗುವುದು ಅನುಮಾನ. ಇದೇ ಕಾರಣದಿಂದಾಗಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯಯಿದೆ.

ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್​ಗೆ ಅಗ್ನಿ ಪರೀಕ್ಷೆ..!
KL Rahul - Shreyas Iyer
TV9 Web
| Updated By: ಝಾಹಿರ್ ಯೂಸುಫ್|

Updated on: Aug 12, 2023 | 3:06 PM

Share

ಏಷ್ಯಾಕಪ್​ಗಾಗಿ ಕೌಂಟ್ ಡೌನ್ ಶುರುವಾಗಿದೆ. ಆಗಸ್ಟ್ 30 ರಿಂದ ಪ್ರಾರಂಭವಾಗಲಿರುವ ಈ ಟೂರ್ನಿಗಾಗಿ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳನ್ನುಈಗಾಗಲೇ ಘೋಷಿಸಲಾಗಿದೆ. ಇದಾಗ್ಯೂ ಟೀಮ್ ಇಂಡಿಯಾ ಬಳಗವನ್ನು ಘೋಷಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್. ಕಳೆದ ಕೆಲ ತಿಂಗಳುಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಈ ಇಬ್ಬರು ಆಟಗಾರರ ಫಿಟ್​ನೆಸ್ ವರದಿಗಾಗಿ ಬಿಸಿಸಿಐ ಆಯ್ಕೆ ಸಮಿತಿ ಕಾಯುತ್ತಿದೆ. ಈ ವರದಿ ಬಂದ ಬೆನ್ನಲ್ಲೇ ಏಷ್ಯಾಕಪ್​ಗಾಗಿ ಭಾರತ ತಂಡವನ್ನು ಘೋಷಿಸಲಾಗುತ್ತದೆ.

ರಾಹುಲ್​-ಅಯ್ಯರ್​ಗೆ ಅಗ್ನಿ ಪರೀಕ್ಷೆ:

ಮುಂಬರುವ ಏಕದಿನ ವಿಶ್ವಕಪ್​ನ್ನು ದೃಷ್ಟಿಯಲ್ಲಿಟ್ಟುಕೊಂಡು ಏಷ್ಯಾಕಪ್​ಗಾಗಿ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಒಂದು ವೇಳೆ ರಾಹುಲ್ ಹಾಗೂ ಶ್ರೇಯಸ್ ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದಿದ್ದರೆ ಏಷ್ಯಾಕಪ್​ನಿಂದ ಮಾತ್ರವಲ್ಲದೆ, ಏಕದಿನ ವಿಶ್ವಕಪ್ ತಂಡದಿಂದಲೂ ಹೊರಬೀಳಬಹುದು. ಹೀಗಾಗಿಯೇ ಏಷ್ಯಾ ಕಪ್​ಗೂ ಮುನ್ನ ನಡೆಯಲಿರುವ ಫಿಟ್​ನೆಸ್ ಟೆಸ್ಟ್ ರಾಹುಲ್ ಹಾಗೂ ಅಯ್ಯರ್ ಪಾಲಿಗೆ ಅಗ್ನಿ ಪರೀಕ್ಷೆಯಾಗಿ ಮಾರ್ಪಟ್ಟಿದೆ.

  • ಐಪಿಎಲ್ 2023ರಲ್ಲಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದರು. ಇದಾದ ಬಳಿಕ ಸರ್ಜರಿಗೆ ಒಳಗಾಗಿದ್ದ ಇದೀಗ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಅದಕ್ಕೂ ಮುನ್ನ ಫಿಟ್​ನೆಸ್ ಟೆಸ್ಟ್​ನಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಡಬೇಕಾಗುತ್ತದೆ.
  • ಐಪಿಎಲ್​ ಆರಂಭಕ್ಕೂ ಮುನ್ನವೇ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು. ಹೀಗಾಗಿ ಈ ಬಾರಿ ಕೆಕೆಆರ್​ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ. ಅಷ್ಟೇ ಅಲ್ಲದೆ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಅಯ್ಯರ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಆದರೆ ಅವರು 50 ಓವರ್​ಗಳ ಪಂದ್ಯವಾಡುವಷ್ಟು ಫಿಟ್​ನೆಸ್ ಹೊಂದಿದ್ದಾರಾ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಕೆಎಲ್​ಆರ್​-ಅಯ್ಯರ್ ಅನಿವಾರ್ಯ:

ಟೀಮ್ ಇಂಡಿಯಾದ ಪ್ರಸ್ತುತ ಬ್ಯಾಟಿಂಗ್ ಲೈನಪ್ ಗಮನಿಸಿದರೆ, ಮಧ್ಯಮ ಕ್ರಮಾಂಕವು ಅಂದುಕೊಂಡಷ್ಟು ಬಲಿಷ್ಠವಾಗಿಲ್ಲ. ಅದರಲ್ಲೂ 4ನೇ ಕ್ರಮಾಂಕದಲ್ಲಿ ಹಲವು ಪ್ರಯೋಗ ನಡೆಸಲಾಗಿದ್ದರೂ ಯಾವುದೇ ಬ್ಯಾಟರ್ ಸ್ಥಿರ ಪ್ರದರ್ಶನ ನೀಡಿಲ್ಲ. ಹೀಗಾಗಿಯೇ ಮಧ್ಯಮ ಕ್ರಮಾಂಕಕ್ಕೆ ಅನುಭವಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅನಿವಾರ್ಯ.

ಸೂರ್ಯ-ಸಂಜುಗೆ ಅವಕಾಶ:

ಒಂದು ವೇಳೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಏಷ್ಯಾಕಪ್​ಗೆ ಆಯ್ಕೆಯಾಗದಿದ್ದರೆ, ಈ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳುವುದು ಖಚಿತ. ಅಲ್ಲದೆ ಏಷ್ಯಾಕಪ್​ನಲ್ಲಿ ಈ ಇಬ್ಬರು ಆಟಗಾರರು ಮಿಂಚಿದರೆ, ಏಕದಿನ ವಿಶ್ವಕಪ್​ನಲ್ಲೂ ಸಂಜು-ಸೂರ್ಯ ಜೋಡಿ ಮಧ್ಯಮ ಕ್ರಮಾಂಕದಲ್ಲಿ ಮುಂದುವರೆಯುವುದರಲ್ಲಿ ಅನುಮಾನವೇ ಇಲ್ಲ.

ಏಷ್ಯಾಕಪ್​ ಯಾವಾಗ ಶುರು?

ಆಗಸ್ಟ್ 30 ರಿಂದ ಏಷ್ಯಾಕಪ್ ಟೂರ್ನಿ ಶುರುವಾಗಲಿದೆ. ಈ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಂದಿದ್ದು, ಇದಾಗ್ಯೂ ಪಾಕ್​ನಲ್ಲಿ ಟೂರ್ನಿ ಆಡಲು ಭಾರತ ಹಿಂದೇಟು ಹಾಕಿದೆ. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ನಡೆಸಲು ಪಾಕಿಸ್ತಾನ್ ಯೋಜನೆ ರೂಪಿಸಿದೆ.

ಏನಿದು ಹೈಬ್ರಿಡ್ ಮಾದರಿ?

ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಎರಡು ದೇಶಗಳಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಆಯೋಜನೆಯ ಹಕ್ಕನ್ನು ಹೊಂದಿರುವ ಪಾಕಿಸ್ತಾನದಲ್ಲಿ 4 ಪಂದ್ಯಗಳು ನಡೆಯಲಿದೆ. ಹಾಗೆಯೇ ಫೈನಲ್ ಸೇರಿದಂತೆ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ಜರುಗಲಿದೆ.

ಇದನ್ನೂ ಓದಿ: Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

ಭಾರತ-ಪಾಕಿಸ್ತಾನ್ ಮುಖಾಮುಖಿ:

ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ್ ವಿರುದ್ಧ ಆಡುತ್ತಿರುವುದು ವಿಶೇಷ. ಸೆಪ್ಟೆಂಬರ್ 2 ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ