AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಪಂದ್ಯದ ಬಳಿಕ ಭಾರತದ ಸೋಲಿಗೆ ಕೆಎಲ್ ರಾಹುಲ್ ನೀಡಿದ ಕಾರಣ ಏನು ಗೊತ್ತೇ?

South Africa vs India: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾ ಸೋಲಿಗೆ ನಾಯಕ ಕೆಎಲ್ ರಾಹುಲ್ ವಿವರಣೆ ನೀಡಿದ್ದು, ಅವರು ಏನು ಹೇಳಿದರು ಎಂಬುದನ್ನು ನೋಡೋಣ.

KL Rahul: ಪಂದ್ಯದ ಬಳಿಕ ಭಾರತದ ಸೋಲಿಗೆ ಕೆಎಲ್ ರಾಹುಲ್ ನೀಡಿದ ಕಾರಣ ಏನು ಗೊತ್ತೇ?
KL Rahul SA vs IND 1st ODI
TV9 Web
| Edited By: |

Updated on: Jan 20, 2022 | 8:43 AM

Share

ವಿರಾಟ್ ಕೊಹ್ಲಿ (Virat Kohli) ನಾಯಕತ್ವದಿಂದ ಕೆಳಗಿಳಿದ ಬಳಿಕ ಟೀಮ್ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿದೆ. ತಂಡ ಸಂಘಟಿತ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಮೊದಲಿಗೆ ಟೆಸ್ಟ್ ಸರಣಿಯಲ್ಲಿ ಸೋಲುಂಡ ಭಾರತ ಇದೀಗ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಲು ವಿಫಲವಾಗಿದೆ. ತೆಂಬಾ ಬವೂಮ (110) ಹಾಗೂ ರಸಿ ವಾನ್ ಡರ್ ಡುಸೆನ್ (129*) ಅವರ ಶತಕ ಹಾಗೂ ಬೌಲರ್‌ಗಳ ಶಿಸ್ತುಬದ್ಧ ಬೌಲಿಂಗ್‌ ಪ್ರದರ್ಶನದ ಸಹಾಯದಿಂದ ದಕ್ಷಿಣ ಆಫ್ರಿಕಾ ತಂಡ 31 ರನ್‌ಗಳಿಂದ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಮೂರು ಪಂದ್ಯಗಳ ಓಡಿಐ ಸರಣಿಯಲ್ಲಿ ಆತಿಥೇಯರು 1-0 ಮುನ್ನಡೆ ಪಡೆದುಕೊಂಡಿದ್ದಾರೆ. ಭಾರತೀಯ ಬೌಲರ್​​ಗಳು ಈ ಪಂದ್ಯದಲ್ಲಿ ಸಂಪೂರ್ಣ ವಿಫಲರಾದರು. ತೆಂಬಾ ಹಾಗೂ ಡುಸೆನ್​ ವಿಕೆಟ್ ಕೀಳಲು ಸಾಧ್ಯವಾಗದೆ ಹೆಚ್ಚು ರನ್ ಹರಿಬಿಟ್ಟರು. ಬ್ಯಾಟಿಂಗ್​ನಲ್ಲೂ ಭಾರತ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಲಿಲ್ಲ. ಮಧ್ಯಮ ಕ್ರಮಾಂಕದ ಅನುಭವಿ ಆಟಗಾರರೇ ಕೈಕೊಟ್ಟರು. ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾ (Team India) ಸೋಲಿಗೆ ನಾಯಕ ಕೆಎಲ್ ರಾಹುಲ್ (KL Rahul) ವಿವರಣೆ ನೀಡಿದ್ದು, ಅವರು ಏನು ಹೇಳಿದರು ಎಂಬುದನ್ನು ನೋಡೋಣ.

“ಇದೊಂದು ಅತ್ಯುತ್ತಮ ಪಂದ್ಯವಾಗಿತ್ತು. ಇದರಿಂದ ಸಾಕಷ್ಟು ಕಲಿತಿದ್ದೇವೆ. ನಾವು ಪಂದ್ಯದಲ್ಲಿ ಉತ್ತಮ ಆರಂಭ ಪಡೆದುಕೊಂಡೆವು. ಆದರೆ, ಮಧ್ಯಮ ಓವರ್​​ನಲ್ಲಿ ವಿಕೆಟ್ ಕೀಳಲು ಸಾಧ್ಯವಾಗಲಿಲ್ಲ. ಮಧ್ಯಮದಲ್ಲಿ ವಿಕೆಟ್ ಪಡೆಯುವುದು ಹೇಗೆ, ಎದುರಾಳಿಯನ್ನು ಕಟ್ಟಿ ಹಾಕುವುದು ಹೇಗೆ ಎಂಬ ಬಗ್ಗೆ ನಾವು ಯೋಚಿಸುತ್ತಿದ್ದೆವು. ಪಂದ್ಯದ ಮೊದಲ 20-25 ಓವರ್​ವರೆಗೂ ನಾವು ಸಮಾನವಾಗಿದ್ದೆವು. ನಾವು ಈ ಟಾರ್ಗೆಟ್ ಅನ್ನು ಸುಲಭವಾಗಿ ಗುರಿ ಮುಟ್ಟಬಹುದು ಎಂದು ನಂಬಿದ್ದೆವು. ಆದರೆ, ಆಫ್ರಿಕಾ ಬೌಲರ್​ಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ನಮ್ಮ ಪ್ರಮುಖ ವಿಕೆಟ್​ಗಳನ್ನೇ ಕಿತ್ತರು. 20 ಓವರ್ ಬಳಿಕ ನಾನು ಬ್ಯಾಟ್ ಮಾಡಲಿಲ್ಲ. ಹೀಗಾಗಿ ಈ ಪಿಚ್ ಬದಲಾಗಿದೆಯಾ ಎಂಬ ಬಗ್ಗೆ ತಿಳಿದಿಲ್ಲ,” ಎಂದು ಹೇಳಿದ್ದಾರೆ.

ಮಾತು ಮುಂದುವರೆಸಿದ ಅವರು, “ಈ ಪಿಚ್ ಬ್ಯಾಟಿಂಗ್ ಮಾಡಲು ಸಹಕಾರಿಯಾಗಿದೆ. ಕ್ರೀಸ್​ನಲ್ಲಿ ನೀನು ಸ್ವಲ್ಪ ಸಮಯ ಕಳೆಯಬೇಕಷ್ಟೆ ಎಂದು ನನಗೆ ವಿರಾಟ್ ಮತ್ತು ಧವನ್ ಹೇಳಿದ್ದರು. ಆದರೆ, ನಮ್ಮ ಜೊತೆಯಾಟ ಮುಂದೆ ಸಾಗಲಿಲ್ಲ. ತೆಂಬಾ ಹಾಗೂ ಡುಸೆನ್ ಉತ್ತಮ ಬ್ಯಾಟಿಂಗ್ ಮಾಡಿದರು. ಬೌಲರ್​ಗಳ ಮೇಲೆ ಸಾಕಷ್ಟು ಒತ್ತಡ ಹಾಕಿದರು. ಮಧ್ಯಮದಲ್ಲಿ ನಾವು ವಿಕೆಟ್ ಕೀಳಲು ಸಾಧ್ಯವಾಗಲೇ ಇಲ್ಲ. ನಾವು ಗೆಲ್ಲಬೇಕಿದ್ದರೆ ಜೊತೆಯಾಟ ಮುಖ್ಯವಾಗಿತ್ತು. ಪ್ರತಿ ಪಂದ್ಯಕೂಡ ನಮಗೆ ಮುಖ್ಯ. ನಮ್ಮಿಂದ ಸಾಧ್ಯವಾದಷ್ಟು ಪ್ರದರ್ಶನ ನೀಡುತ್ತಲೇ ಇದ್ದೇವೆ. ಏಕದಿನ ಕ್ರಿಕೆಟ್ ಅನ್ನು ನಾವು ಸುಮಾರು ಸಮಯದ ಬಳಿಕ ಆಡುತ್ತಿದ್ದೇವೆ. ವಿಶ್ವಕಪ್ ಕೂಡ ಇರುವುದರಿಂದ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಬಗ್ಗೆ ತಯಾರಿಕೂಡ ಮಾಡಬೇಕಿದೆ. ನಾವು ತಪ್ಪು ಮಾಡಿದ್ದೇವೆ ನಿಜ, ಇದರಿಂದ ಕಲಿತಿದ್ದೇವೆ ಕೂಡ,” ಎಂದು ರಾಹುಲ್ ಹೇಳಿದ್ದಾರೆ.

ಒಟ್ಟಾರೆ ರಾಹುಲ್ ಪ್ರಕಾರ ಭಾರತದ ಸೋಲಿಗೆ ಮಧ್ಯಮ ಕ್ರಮಾಂಕದ ಆಟಗಾರರು ಪ್ರಮುಖ ಕಾರಣ. ಭಾರತ ಬ್ಯಾಟಿಂಗ್ ವಿಭಾಗದ ಮಧ್ಯಮ ಕ್ರಮಾಂಕ ಹಾಗೂ ಪಂದ್ಯದ ಮಧ್ಯದ ವೇಳೆ ಬೌಲರ್‌ಗಳು ವಿಕೆಟ್ ತೆಗೆಯಲಾಗದೇ ಇದ್ದದ್ದು ತಂಡದ ಹಿನ್ನಡೆಗೆ ಕಾರಣವಾಯಿತು ಎಂಬುದು ರಾಹುಲ್ ಅಭಿಪ್ರಾಯ.

South Africa vs India: ಸ್ಟಾರ್ ಆಟಗಾರರ ದಂಡೇ ಇದ್ದರೂ ಸೋಲುತ್ತಿದೆ ಭಾರತ: ಎಡವುತ್ತಿರುವುದು ಎಲ್ಲಿ?

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್