AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಟೀಮ್ ಇಂಡಿಯಾಗೆ ಶುಭ ಸುದ್ದಿ: ಅಭ್ಯಾಸ ಆರಂಭಿಸಿದ ಕೆಎಲ್ ರಾಹುಲ್

Asia Cup 2023: ಆಗಸ್ಟ್ 31 ರಿಂದ ಏಷ್ಯಾಕಪ್ ಶುರುವಾಗಲಿದ್ದು, ಅದಕ್ಕೂ ಮುನ್ನ ಸಂಪೂರ್ಣ ಫಿಟ್​ನೆಸ್ ಸಾಧಿಸಲು ರಾಹುಲ್ ಮುಂದಾಗಿದ್ದಾರೆ.

KL Rahul: ಟೀಮ್ ಇಂಡಿಯಾಗೆ ಶುಭ ಸುದ್ದಿ: ಅಭ್ಯಾಸ ಆರಂಭಿಸಿದ ಕೆಎಲ್ ರಾಹುಲ್
KL Rahul
TV9 Web
| Edited By: |

Updated on: Jul 17, 2023 | 10:49 PM

Share

ಐಪಿಎಲ್ ವೇಳೆ ಗಾಯಗೊಂಡಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) 3 ತಿಂಗಳುಗಳ ಬಳಿಕ ಮತ್ತೆ ನೆಟ್ಸ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಮಂಡಿರಜ್ಜುಗೆ ಗಾಯವಾಗಿತ್ತು. ಹೀಗಾಗಿ ಅವರು ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಕೆಎಲ್ ರಾಹುಲ್ ಮತ್ತೆ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ.

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕೆಎಲ್ ರಾಹುಲ್ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರೊಂದಿಗೆ ಕನ್ನಡಿಗ ಶೀಘ್ರದಲ್ಲೇ ಟೀಮ್ ಇಂಡಿಯಾಗೆ ಮರಳುವುದು ಕೂಡ ಖಚಿತವಾಗಿದೆ.

ಸದ್ಯ ನೆಟ್ಸ್​ನಲ್ಲಿ ಬೆವರಿಳಿಸಲಾರಂಭಿಸಿರುವ ಕೆಎಲ್ ರಾಹುಲ್ ಏಷ್ಯಾಕಪ್ ವೇಳೆ ಟೀಮ್ ಇಂಡಿಯಾಗೆ ಮರಳುವ ನಿರೀಕ್ಷೆಯಿದೆ. ಆಗಸ್ಟ್ 31 ರಿಂದ ಏಷ್ಯಾಕಪ್ ಶುರುವಾಗಲಿದ್ದು, ಅದಕ್ಕೂ ಮುನ್ನ ಸಂಪೂರ್ಣ ಫಿಟ್​ನೆಸ್ ಸಾಧಿಸಲು ರಾಹುಲ್ ಮುಂದಾಗಿದ್ದಾರೆ.

ಅತ್ತ ಈ ಬಾರಿಯ ಏಷ್ಯಾಕಪ್ ಏಕದಿನ ಸ್ವರೂಪದಲ್ಲಿ ನಡೆಯಲಿದೆ. ಹೀಗಾಗಿ ಕೆಎಲ್ ರಾಹುಲ್ ಅವರ ಆಗಮನವು ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.

ಇದನ್ನೂ ಓದಿ: Yuvraj Singh: ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಗೆಲ್ಲೋದು ಡೌಟ್: ಯುವರಾಜ್ ಸಿಂಗ್

ಏಕೆಂದರೆ ತಂಡದಲ್ಲಿ ವಿಕೆಟ್ ಕೀಪರ್ ಸ್ಥಾನ ಖಾಲಿಯಿದ್ದು, ರಾಹುಲ್ ಆಗಮನದೊಂದಿಗೆ ಮಧ್ಯಮ ಕ್ರಮಾಂಕ ಹಾಗೂ ವಿಕೆಟ್ ಕೀಪರ್​ ಎರಡೂ ಸ್ಥಾನಗಳನ್ನು ಸರಿದೂಗಿಸಬಹುದು. ಹೀಗಾಗಿಯೇ ಕೆಎಲ್ ರಾಹುಲ್ ಕಂಬ್ಯಾಕ್ ಟೀಮ್ ಇಂಡಿಯಾವನ್ನು ಮತ್ತಷ್ಟು ಬಲಿಷ್ಠಗೊಳಿಸುವುದರಲ್ಲಿ ಅನುಮಾನವೇ ಇಲ್ಲ.

ಕೆಎಲ್ ರಾಹುಲ್ ಏಕದಿನ ಅಂಕಿ ಅಂಶಗಳು:

ಟೀಮ್ ಇಂಡಿಯಾ ಪರ ಇದುವರೆಗೆ 54 ಏಕದಿನ ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 1986 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಶತಕಗಳನ್ನು ಹಾಗೂ 13 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಅಂದರೆ ಟೀಮ್ ಇಂಡಿಯಾ ಪರ 45.14 ಸರಾಸರಿಯಲ್ಲಿ ರನ್ ಕಲೆಹಾಕಿರುವ ಕೆಎಲ್ ರಾಹುಲ್ ಅವರ ಪುನರಾಗಮನವು ಏಕದಿನ ವಿಶ್ವಕಪ್​ಗೂ ಟೀಮ್ ಇಂಡಿಯಾಗೆ ಶುಭ ಸೂಚನೆ ಎನ್ನಬಹುದು.

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ