IND vs SA: ಇಂಡೋ-ಆಫ್ರಿಕಾ ಕದನಕ್ಕೆ ದಿನಗಣನೆ: ಇಂದು ಫಿರೋಜ್ ಶಾ ಕೋಟ್ಲಾಕ್ಕೆ ಟೀಮ್ ಇಂಡಿಯಾ ಎಂಟ್ರಿ

India vs South Africa: ಜೂನ್ 9 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರತ-ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ ಆಫ್ರಿಕಾ ಆಟಗಾರರು ಭಾರತಕ್ಕೆ ಬಂದಿಳಿದಿದ್ದು ಭರ್ಜರಿ ತಯಾರಿಯಲ್ಲಿ ನಿರತರಾಗಿದ್ದಾರೆ. ಇಂದು ಟೀಮ್ ಇಂಡಿಯಾ ಆಟಗಾರರ ಆಗಮನವಾಗಲಿದೆ.

IND vs SA: ಇಂಡೋ-ಆಫ್ರಿಕಾ ಕದನಕ್ಕೆ ದಿನಗಣನೆ: ಇಂದು ಫಿರೋಜ್ ಶಾ ಕೋಟ್ಲಾಕ್ಕೆ ಟೀಮ್ ಇಂಡಿಯಾ ಎಂಟ್ರಿ
Team India
Follow us
| Updated By: Vinay Bhat

Updated on:Jun 05, 2022 | 9:15 AM

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಟಿ20 ಸರಣಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಐದು ಪಂದ್ಯಗಳ ಟಿ20 ಸರಣಿ (T20I Series) ಪೈಕಿ ಜೂನ್ 9 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ. ಈಗಾಗಲೇ ಆಫ್ರಿಕಾ ಆಟಗಾರರು ಭಾರತಕ್ಕೆ ಬಂದಿಳಿದಿದ್ದು ಭರ್ಜರಿ ತಯಾರಿಯಲ್ಲಿ ನಿರತರಾಗಿದ್ದಾರೆ. ಇಂದು ಟೀಮ್ ಇಂಡಿಯಾ ಆಟಗಾರರ ಆಗಮನವಾಗಲಿದೆ. ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ರಂತಹ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಯಂಗ್ ಇಂಡಿಯಾ ಇಂದು ಕೆಎಲ್ ರಾಹುಲ್ ನಾಯಕತ್ವದಲ್ಲಿ ಫಿರೋಜ್ ಶಾ ಕೋಟ್ಲಾಕ್ಕೆ ಬರಲಿದ್ದಾರೆ. ಎಲ್ಲ ಆಟಗಾರರು ಬಂದ ಕೂಡಲೇ ಮೈದಾನದಲ್ಲಿ ಕೋವಿಡ್ ಪರೀಕ್ಷೆ ನಡೆಯಲಿದೆ. ಆರ್‌ಟಿ ಪಿಸಿಆರ್ ಟೆಸ್ಟ್‌ಗಳಲ್ಲಿ ಎಲ್ಲರೂ ನೆಗೆಟಿವ್ ಬಂದರೆ ನಂತರ ಅಭ್ಯಾಸ ಶುರು ಮಾಡಲಿದ್ದಾರೆ.

ಯುವಕರಿಂದಲೇ ಕೂಡಿರುವ ಭಾರತ ತಂಡ ಗೆಲುವು ಸಾಧಿಸಿ, ಹೊಸ ಇತಿಹಾಸ ರಚನೆ ಮಾಡುವ ತವಕದಲ್ಲಿದೆ. ಕೆಎಲ್ ರಾಹುಲ್ ನಾಯಕ ಜೊತೆ ತಂಡಕ್ಕೆ ಕೋಚ್​ ರಾಹುಲ್​ ದ್ರಾವಿಡ್ ಸಾರಥ್ಯವಿದ್ದು, ದಿನೇಶ್ ಕಾರ್ತಿಕ್​, ರಿಷಭ್ ಪಂತ್​, ಹಾರ್ದಿಕ್ ಪಾಂಡ್ಯ ಸೇರಿದಂತೆ ಕೆಲ ಟಿ20 ಸ್ಪೆಷಲಿಸ್ಟ್​​​​ಗಳಿಗೆ ಬಿಸಿಸಿಐ ಮಣೆ ಹಾಕಿದೆ. ಈ ಸರಣಿಯಲ್ಲಿ ಭಾರತ ಗೆಲುವು ದಾಖಲು ಮಾಡಿದ್ರೆ, ಹೊಸ ಐತಿಹಾಸ ನಿರ್ಮಾಣವಾಗಲಿದೆ. ಯಾಕೆಂದರೆ ಈ ಹಿಂದೆ ಭಾರತದಲ್ಲಿ ನಡೆದ ಉಭಯ ತಂಡಗಳ ನಡುವಿನ ಟಿ20 ಸರಣಿಯಲ್ಲಿ ಭಾರತ ಎಂದಿಗೂ ಗೆಲುವು ದಾಖಲಿಸಿಲ್ಲ. ಹೀಗಾಗಿ, ಈ ಸರಣಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ENG vs NZ, 1st Test: ಇಂಗ್ಲೆಂಡ್ ಬೌಲರ್​ಗಳ ಬಿರುಗಾಳಿಗೆ ತಬ್ಬಿಬ್ಬಾದ ನ್ಯೂಜಿಲೆಂಡ್: ಗೆಲುವಿನತ್ತ ಆಂಗ್ಲರು

ಇದನ್ನೂ ಓದಿ
Image
French Open 2022 Mens Final: ಗುರು ಶಿಷ್ಯರ ನಡುವೆ ಫೈನಲ್ ಕಾಳಗ! ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ
Image
Deepak Chahar Wedding: ನಿನ್ನ ಬೆನ್ನು ಹುಷಾರು.. ವಿಶ್ವಕಪ್ ಇದೆ; ಹನಿಮೂನ್​ಗೆ ಹೊರಟ ದೀಪಕ್​ ಕಾಲೆಳೆದ ತಂಗಿ
Image
French Open 2022: ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್ ಪ್ರಶಸ್ತಿ ಗೆದ್ದ ಪೋಲೆಂಡ್‌ನ ಇಗಾ ಸ್ವಿಟೆಕ್..!
Image
IND vs SA: ಭಾರತ- ಆಫ್ರಿಕಾ ಟಿ20 ಪಂದ್ಯದ ಟಿಕೆಟ್ ನಾಳೆಯಿಂದ ಲಭ್ಯ! ಟಿಕೆಟ್ ಬುಕ್ ಮಾಡುವುದು ಹೇಗೆ?

ಈ ಹಿಂದೆ 2015/16ರಲ್ಲಿ ಇಂಡೋ-ಆಫ್ರಿಕಾ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ ಭಾಗಿಯಾಗಿದ್ದವು. ಇದರಲ್ಲಿ ಹರಿಣಗಳ ತಂಡ 2-0 ಅಂತರದಿಂದ ಗೆಲುವು ದಾಖಲು ಮಾಡಿತ್ತು. ಇದಾದ ಬಳಿಕ 2019-20ರಲ್ಲಿ ಮೂರು ಟಿ-20 ಪಂದ್ಯಗಳ ಸರಣಿಯಲ್ಲಿ ಭಾಗಿಯಾಗಲು ಆಫ್ರಿಕಾ ತಂಡ ಭಾರತಕ್ಕೆ ಬಂದಿತ್ತು. ಅಲ್ಲಿ ಸರಣಿ ಸಮಬಲಗೊಂಡಿತ್ತು.

ಈಗಾಗಲೇ ಆಫ್ರಿಕಾ ಆಟಗಾರರು ಭಾರತಕ್ಕೆ ಬಂದಿಳಿದಿದ್ದು ಭರ್ಜರಿ ತಯಾರಿಯಲ್ಲಿ ನಿರತರಾಗಿದ್ದಾರೆ. ಆಟಗಾರರು ಅಭ್ಯಾಸ ಶುರು ಮಾಡುವ ಮುನ್ನ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಕೋವಿಡ್ ಪರೀಕ್ಷೆ ಮಾಡಲಾಯಿತು. ಆರ್‌ಟಿ ಪಿಸಿಆರ್ ಟೆಸ್ಟ್‌ಗಳಲ್ಲಿ ಎಲ್ಲರೂ ನೆಗೆಟಿವ್ ಆಗಿದ್ದಾರೆಂದು ತಿಳಿದುಬಂದಿದೆ. ಅನಂತರವೇ ಎಲ್ಲರೂ ಅಭ್ಯಾಸಕ್ಕೆ ಇಳಿದಿದ್ದರು. 5 ವರ್ಷಗಳ ಬಳಿಕ ತಂಡಕ್ಕೆ ಮರಳಿದ ವೇಯ್ನ ಪಾರ್ನೆಲ್, ವೇಗಿ ಡ್ವೇನ್‌ ಪ್ರಿಟೋರಿಯಸ್‌, ರಸ್ಸಿ ವಾನ್‌ ಡರ್‌ ಡುಸೆನ್‌ ಕೂಡ ಕಠಿನ ಅಭ್ಯಾಸ ನಡೆಸಿದರು. ಪ್ರಧಾನ ಕೋಚ್‌ ಮಾರ್ಕ್‌ ಬೌಷರ್‌ ಅಭ್ಯಾಸದ ಉಸ್ತುವಾರಿ ವಹಿಸಿದ್ದರು. ಇವರು ವೇಗಿ ಮಾರ್ಕೊ ಜಾನ್ಸೆನ್‌ಗೆ ಕೆಲವು ಬೌಲಿಂಗ್‌ ಟಿಪ್ಸ್‌ ಹೇಳಿಕೊಟ್ಟರು.

ಜೂನ್ 9 ರಿಂದ ಆರಂಭಗೊಳ್ಳುವ ಮೊದಲ ಟಿ20 ಪಂದ್ಯವು ದೆಹಲಿಯಲ್ಲಿ ನಡೆಯಲಿದ್ದು, ಜೂನ್ 12 ಎರಡನೇ ಟಿ20 ಕಟಕ್, ಜೂನ್ 14 ಮೂರನೇ ಟಿ20 ವಿಶಾಖಪಟ್ಟಣಂ, ಜೂನ್ 17 ನಾಲ್ಕನೇ ಟಿ20 ರಾಜ್‌ಕೋಟ್‌, ಜೂನ್ 19 ಐದನೇ ಟಿ20 ಬೆಂಗಳೂರಿನಲ್ಲಿ ನಡೆಯಲಿದೆ.

ಬೆಂಗಳೂರು ಪಂದ್ಯದ ಟಿಕೆಟ್ ಮಾರಾಟ:

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಇದೇ 19ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ಕ್ರಿಕೆಟ್ ಪಂದ್ಯದ ಟಿಕೆಟ್ ಮಾರಾಟವು ಇದೇ 12ರಂದು ನಡೆಯಲಿದೆ. ಆನ್‌ಲೈನ್ ಮತ್ತು ಬಾಕ್ಸ್‌ ಆಫೀಸ್‌ನಲ್ಲಿ ಮಾರಾಟ ನಡೆಯಲಿದೆ ಎಂದು ಕೆಎಸ್‌ಸಿಎ ಖಜಾಂಚಿ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ. ಕೆಎಸ್‌ಸಿಎಗೆ ಪೇಟಿಎಂ ಆನ್‌ಲೈನ್ ಟಿಕೆಟ್ ಮಾರಾಟದ ಪಾಲುದಾರನಾಗಿದೆ. ಬಾಕ್ಸ್ ಆಫಿಸ್‌ನಲ್ಲಿ ಮಾರಾಟವಾಗದೆ ಉಳಿಯುವ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬಿಕರಿ ಮಾಡಲಾಗುವುದು. ಜೂನ್ 13ಕ್ಕೆ ಬಾಕ್ಸ್‌ ಆಫಿಸ್‌ನಲ್ಲಿ ಮಾರಾಟವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:15 am, Sun, 5 June 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ