AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಪಾಲಿಗೆ ಕನ್ನಡಿಗನೇ ಕಂಟಕ..!

IPL 2026 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಕನ್ನಡಿಗ ಕೆಎಲ್ ರಾಹುಲ್ ಅವರ ವಿಕೆಟ್ ನಿರ್ಣಾಯಕ.

RCB ಪಾಲಿಗೆ ಕನ್ನಡಿಗನೇ ಕಂಟಕ..!
Kl Rahul
ಝಾಹಿರ್ ಯೂಸುಫ್
|

Updated on: Apr 27, 2026 | 10:50 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಕೆಲವು ಬ್ಯಾಟರ್‌ಗಳು ನಿರ್ದಿಷ್ಟ ತಂಡಗಳ ವಿರುದ್ಧ ಅಕ್ಷರಶಃ ಅಬ್ಬರಿಸುತ್ತಾರೆ. ಅಂತಹ ಸಾಲಿನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಮೊದಲಿಗರು. ಇಲ್ಲಿ ಕೆಎಲ್​ಆರ್​ ಅಬ್ಬರಿಸುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಂಬುದೇ ವಿಶೇಷ. ಅಂದರೆ ತನ್ನ ತವರು ತಂಡದ ವಿರುದ್ಧವೇ ರಾಹುಲ್ ತೋರುವ ಬ್ಯಾಟಿಂಗ್ ಪರಾಕ್ರಮ ಈ ಬಾರಿ ಕೂಡ ಮುಂದುವರೆದಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ 57 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್​ಸಿಬಿ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿತ್ತು.

ಇದೀಗ ಆರ್​ಸಿಬಿ ಮತ್ತು ಡಿಸಿ ಎರಡನೇ ಮುಖಾಮುಖಿಗೆ ಸಜ್ಜಾಗಿದೆ. ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅತೀ ದೊಡ್ಡ ಚಿಂತೆ ಕೆಎಲ್ ರಾಹುಲ್. ಏಕೆಂದರೆ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಎಲ್​ಆರ್​ ಅಬ್ಬರಕ್ಕೆ ಈ ಕೆಳಗಿನ ಅಂಕಿ ಅಂಶಗಳೇ ಸಾಕ್ಷಿ.

  • ಆರ್‌ಸಿಬಿ ವಿರುದ್ಧ ಕೆಎಲ್ ರಾಹುಲ್ 18 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಅವರು 69.91ರ ಸರಾಸರಿಯಲ್ಲಿ ಒಟ್ಟು 839 ರನ್ ಕಲೆಹಾಕಿದ್ದಾರೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೆಎಲ್ ರಾಹುಲ್ ಒಂದು ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.
  • ಐಪಿಎಲ್ 2020 ರಲ್ಲಿ ಆರ್‌ಸಿಬಿ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ್ದ ರಾಹುಲ್, ಕೇವಲ 69 ಎಸೆತಗಳಲ್ಲಿ ಅಜೇಯ 132 ರನ್ ಚಚ್ಚಿದ್ದರು.
  • ಈ ಹಿಂದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ 7 ಪಂದ್ಯಗಳಲ್ಲಿ ಕೆಎಲ್ ರಾಹುಲ್ 151.68ರ ಸ್ಟ್ರೈಕ್ ರೇಟ್ನಲ್ಲಿ 270 ರನ್ ಗಳಿಸಿದ್ದಾರೆ.
  • ಈ ಬಾರಿಯ ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ವಿರುದ್ಧ ಕೆಎಲ್ ರಾಹುಲ್ ಕೇವಲ 34 ಎಸೆತಗಳಲ್ಲಿ 57 ರನ್​ ಚಚ್ಚಿದ್ದರು.

ದೆಹಲಿಯಲ್ಲೂ ಕನ್ನಡಿಗನ ದರ್ಬಾರ್:

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್‌ನಲ್ಲಿ ಕೆಎಲ್. ರಾಹುಲ್ ಅವರ ಪ್ರದರ್ಶನ ಅತ್ಯಂತ ಪ್ರಭಾವಶಾಲಿಯಾಗಿದೆ. ವಿಶೇಷವಾಗಿ ಈ 2026ರ ಐಪಿಎಲ್ ಸೀಸನ್​ನಲ್ಲಿ ಅವರು ಇದೇ ಅಂಗಳದಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದಾರೆ.

  • ಐತಿಹಾಸಿಕ 152 ರನ್:* ಏಪ್ರಿಲ್ 25, 2026 ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಅಜೇಯ 152 ರನ್ (67 ಎಸೆತ) ಸಿಡಿಸಿದ್ದಾರೆ. ಇದು ಐಪಿಎಲ್ ಇತಿಹಾಸದಲ್ಲಿ ಭಾರತೀಯ ಬ್ಯಾಟರ್ ಒಬ್ಬರು ದಾಖಲಿಸಿದ ಗರಿಷ್ಠ ಸ್ಕೋರ್. ಈ ಮೂಲಕ ಐಪಿಎಲ್​ ಪಂದ್ಯವೊಂದರಲ್ಲಿ 150 ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
  • ದೆಹಲಿ ದರ್ಬಾರ್: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಕೆಎಲ್ ರಾಹುಲ್ ಈವರೆಗೆ 14 ಇನ್ನಿಂಗ್ಸ್‌ ಆಡಿದ್ದಾರೆ. ಈ ವೇಳೆ  52.0 ಸರಾಸರಿಯೊಂದಿಗೆ 520 ರನ್ ಗಳಿಸಿದ್ದಾರೆ. ಇಲ್ಲಿ ಅವರ ಸ್ಟ್ರೈಕ್ ರೇಟ್ 160.99 ರಷ್ಟಿರುವುದು ವಿಶೇಷ. ಇದು ದೆಹಲಿಯ ಪಿಚ್​ನಲ್ಲಿ ಅವರು ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದಕ್ಕೆ ಸಾಕ್ಷಿ.
  • ಇತ್ತೀಚಿನ ಫಾರ್ಮ್: ಇದೇ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಅವರು 52 ಎಸೆತಗಳಲ್ಲಿ 92 ರನ್ ಸಿಡಿಸಿದ್ದರು. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧ 152 ರನ್​ ಚಚ್ಚಿದ್ದರು.

ಇದನ್ನೂ ಓದಿ: RCB ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಬಹುತೇಕ ಖಚಿತ!

ಅತ್ತ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಕರ್ಷಕ ಅರ್ಧಶತಕ ಬಾರಿಸಿರುವ ಕೆಎಲ್ ರಾಹುಲ್, ಇದೀಗ ದ್ವಿತೀಯ ಪಂದ್ಯದಲ್ಲೂ ಅಬ್ಬರಿಸುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ತಂಡ ಗೆಲುವು ದಾಖಲಿಸಬೇಕಿದ್ದರೆ ಕೆಎಲ್ ರಾಹುಲ್ ಅವರನ್ನು ಬೇಗನೆ ಔಟ್ ಮಾಡುವುದು ಅನಿವಾರ್ಯ. ಒಂದು ವೇಳೆ ಕನ್ನಡಿಗ ಕ್ರೀಸ್ ಕಚ್ಚಿ ನಿಂತರೆ ಆರ್​ಸಿಬಿ ಪಾಲಿಗೆ ಕಂಟಕವಾಗಲಿದ್ದಾರೆ ಎಂಬುದಕ್ಕೆ ಈ ಹಿಂದಿನ ಅಂಕಿ ಅಂಶಗಳೇ ಸಾಕ್ಷಿ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!