AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾ ಆರಂಭಿಕ ಜೋಡಿ ಯಾರೆಂದು ತಿಳಿಸಿದ ರೋಹಿತ್ ಶರ್ಮಾ

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ನಾಳೆಯಿಂದ (ಡಿ.6) ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಡೇ-ನೈಟ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9.30 ರಿಂದ ಶುರುವಾಗಲಿದೆ.

IND vs AUS: ಟೀಮ್ ಇಂಡಿಯಾ ಆರಂಭಿಕ ಜೋಡಿ ಯಾರೆಂದು ತಿಳಿಸಿದ ರೋಹಿತ್ ಶರ್ಮಾ
Rohit Sharma-Rahul-Jaiswal
ಝಾಹಿರ್ ಯೂಸುಫ್
|

Updated on:Dec 05, 2024 | 12:58 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ? ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಅಡಿಲೇಡ್​ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ಭಾರತ ತಂಡದ  ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.

ಪಿಂಕ್ ಬಾಲ್ ಟೆಸ್ಟ್ ನಿಮಿತ್ತ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ಡೇ-ನೈಟ್ ಟೆಸ್ಟ್​​ನಲ್ಲೂ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ನಾನು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದೇನೆ ಎಂದು ತಿಳಿಸಿದ್ದಾರೆ.

ಈ ಮೂಲಕ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಲಿರುವುದನ್ನು ಹಿಟ್​​ಮ್ಯಾನ್ ಖಚಿತಪಡಿಸಿದ್ದಾರೆ. ಇದಕ್ಕೂ ಮುನ್ನ ಪರ್ತ್​​​ನಲ್ಲಿ ನಡೆದ ಮೊದಲ ಪಂದ್ಯಕ್ಕೆ ವೈಯುಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಅಲಭ್ಯರಾಗಿದ್ದರು.

ಹೀಗಾಗಿ ಕೆಎಲ್ ರಾಹುಲ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲಾಗಿತ್ತು. ಅದರಂತೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಕೆಎಲ್ ರಾಹುಲ್ ಪ್ರಥಮ ಟೆಸ್ಟ್​​ನಲ್ಲಿ ಒಟ್ಟು 103 ರನ್​​ಗಳನ್ನು ಬಾರಿಸಿ ಟೀಮ್ ಇಂಡಿಯಾಗೆ ಉತ್ತಮ ಆರಂಭ ಒದಗಿಸಿದ್ದರು.

ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಮುಂದಾಗಿರುವ ರೋಹಿತ್ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಆಡಲು ನಿರ್ಧರಿಸಿದ್ದಾರೆ. ಅಲ್ಲದೆ ಪರ್ತ್ ಟೆಸ್ಟ್​​ನಲ್ಲಿ ಯಶಸ್ವಿಯಾಗಿರುವ ಆರಂಭಿಕ ಜೋಡಿಯನ್ನೇ ಅಡಿಲೇಡ್​​ನಲ್ಲೂ ಮುಂದುವರೆಸಲು ಬಯಸಿದ್ದಾರೆ.

ಅದರಂತೆ ಶುಕ್ರವಾರದಿಂದ (ಡಿ.6) ಶುರುವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೊದಲ ಪಂದ್ಯದಿಂದ ಹೊರಗುಳಿದಿದ್ದ ಶುಭ್​​ಮನ್ ಗಿಲ್ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಇದನ್ನೂ ಓದಿ: ಶರ ವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಿದರೆ, ರೋಹಿತ್ ಶರ್ಮಾ ಅಥವಾ ರಿಷಭ್ ಪಂತ್ ಐದನೇ ಕ್ರಮಾಂಕದಲ್ಲಿ ಆಡಬಹುದು. ಇನ್ನು ಆಲ್​ರೌಂಡರ್​ಗಳಾಗಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್​ಗೆ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ಸಿಗಬಹುದು.  ಇನ್ನು ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಹರ್ಷಿತ್ ರಾಣಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಭಾರತ vs ಆಸ್ಟ್ರೇಲಿಯಾ ಪಂದ್ಯ ಎಷ್ಟು ಗಂಟೆಗೆ ಶುರು?

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ನಾಳೆಯಿಂದ (ಡಿ.6) ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಡೇ-ನೈಟ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9.30 ರಿಂದ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಹಾಗೂ ಡಿಸ್ನಿ ಹಾಟ್​ಸ್ಟಾರ್ ಆ್ಯಪ್​ ಮತ್ತು ವೆಬ್​ಸೈಟ್​​ಗಳಲ್ಲಿ ವೀಕ್ಷಿಸಬಹುದು.

Published On - 12:58 pm, Thu, 5 December 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ