AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್​ಗೆ ಅಗ್ನಿಪರೀಕ್ಷೆ: ಫೇಲ್ ಆದ್ರೆ ಏಷ್ಯಾಕಪ್​ ತಂಡದಿಂದ ಔಟ್..!

India Squad For Asia Cup 2022: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ.

KL Rahul: ಕೆಎಲ್ ರಾಹುಲ್​ಗೆ ಅಗ್ನಿಪರೀಕ್ಷೆ: ಫೇಲ್ ಆದ್ರೆ ಏಷ್ಯಾಕಪ್​ ತಂಡದಿಂದ ಔಟ್..!
KL Rahul
TV9 Web
| Updated By: ಝಾಹಿರ್ ಯೂಸುಫ್|

Updated on: Aug 10, 2022 | 12:53 PM

Share

ಏಷ್ಯಾಕಪ್​ಗಾಗಿ (Asia Cup 2022) ಆಯ್ಕೆ ಮಾಡಲಾದ 15 ಸದಸ್ಯರ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ (KL Rahul) ಕೂಡ ಸ್ಥಾನ ಪಡೆದಿದ್ದಾರೆ. ಅದು ಕೂಡ ಉಪನಾಯಕನಾಗಿ ಎಂಬುದು ವಿಶೇಷ. ಆದರೆ ತಂಡದಲ್ಲಿ ಸ್ಥಾನ ಪಡೆದರೂ ಕೆಎಲ್ ರಾಹುಲ್ ಏಷ್ಯಾಕಪ್ ಆಡುತ್ತಾರೋ ಇಲ್ಲವೋ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ. ಏಕೆಂದರೆ ಕೆಎಲ್​ಆರ್​ ಐಪಿಎಲ್​ ಬಳಿಕ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಸೌತ್ ಆಫ್ರಿಕಾ ವಿರುದ್ದದ ಸರಣಿಗೆ ನಾಯಕನಾಗಿ ಆಯ್ಕೆಯಾಗಿದ್ದ ಕೆಎಲ್ ರಾಹುಲ್ ತೊಡೆ ಸಂದು ಗಾಯದ ಸಮಸ್ಯೆಯ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಇದಾದ ಬಳಿಕ ಅವರು ಜರ್ಮನಿಗೆ ತೆರಳಿ ಸರ್ಜರಿಯನ್ನು ಕೂಡ ಮಾಡಿಸಿಕೊಂಡಿದ್ದರು. ಆ ಬಳಿಕ ವೆಸ್ಟ್ ಇಂಡೀಸ್ ಸರಣಿಗಾಗಿ ಕೆಎಲ್ ರಾಹುಲ್ ಸಿದ್ಧತೆಗಳನ್ನು ಆರಂಭಿಸಿದ್ದರು. ಇದೇ ವೇಳೆ ಕೊರೋನಾ ಸೋಂಕಿಗೆ ಒಳಗಾದ ಕಾರಣ ಆ ಸರಣಿಯಿಂದಲೂ ಹೊರಗುಳಿಯಬೇಕಾಯಿತು.

ಇದೀಗ ನೇರವಾಗಿ ಏಷ್ಯಾಕಪ್​ಗೆ ಆಯ್ಕೆಯಾಗಿದ್ದಾರೆ. ಆದರೆ ಈ ಟೂರ್ನಿಗಾಗಿ ಯುಎಇಗೆ ತೆರಳುವ ಮುನ್ನ ಕೆಎಲ್ ರಾಹುಲ್ ತಮ್ಮ ಫಿಟ್​ನೆಸ್ ಸಾಬೀತುಪಡಿಸುವಂತೆ ಬಿಸಿಸಿಐ ಸೂಚಿಸಿದೆ. ಅಂದರೆ ಮೈದಾನದಿಂದ ದೀರ್ಘಕಾಲ ಹೊರಗುಳಿದಿರುವ ಕೆಎಲ್ ರಾಹುಲ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್​ನೆಸ್​ ಸಾಬೀತುಪಡಿಸಬೇಕು. ಈ ಫಿಟ್​ನೆಸ್​ ಪರೀಕ್ಷೆಯಲ್ಲಿ ಪಾಸಾದರೆ ಮಾತ್ರ ಅವರಿಗೆ ಏಷ್ಯಾಕಪ್ ತಂಡದಲ್ಲಿ ಕಾಣಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ.

ಬಿಸಿಸಿಐನ ಫಿಸಿಯೋಸ್ ಮುಂದಿನ ವಾರ ಕೆಎಲ್ ರಾಹುಲ್ ಅವರ ಫಿಟ್​ನೆಸ್​ ಪರೀಕ್ಷೆಯನ್ನು ನಡೆಸಲಿದ್ದು, ಆ ಬಳಿಕ ಆಯ್ಕೆ ಸಮಿತಿಗೆ ವರದಿ ಸಲ್ಲಿಸಲಿದೆ. ಇದಾದ ಬಳಿಕವಷ್ಟೇ ಕನ್ನಡಿಗ ಏಷ್ಯಾಕಪ್​ ಆಡಲಿದ್ದಾರಾ ಅಥವಾ ಇಲ್ಲವಾ ಎಂಬುದು ನಿರ್ಧಾರವಾಗಲಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾಗ್ಯೂ ಕೆಎಲ್ ರಾಹುಲ್ ಅವರು ಸಂಪೂರ್ಣ ಫಿಟ್ ಆಗಿದ್ದಾರೆ. ಅದಕ್ಕಾಗಿಯೇ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ಪ್ರೋಟೋಕಾಲ್‌ನಂತೆ ಅವರು ಬೆಂಗಳೂರಿನಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಒಂದು ವೇಳೆ ಕೆಎಲ್ ರಾಹುಲ್ ಫಿಟ್​ನೆಸ್ ಟೆಸ್ಟ್​ನಲ್ಲಿ ವಿಫಲರಾದರೆ ಶ್ರೇಯಸ್ ಅಯ್ಯರ್​ಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಗಬಹುದು. ಏಕೆಂದರೆ ಅಯ್ಯರ್ ಈಗಾಗಲೇ ತಂಡದಲ್ಲಿ ಮೀಸಲು ಆಟಗಾರರನಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿಯೇ ಮುಂದಿನ ವಾರ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಏಷ್ಯಾಕಪ್ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ