AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ

India vs Pakistan: ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು.

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ
ರಾಹುಲ್
TV9 Web
| Edited By: |

Updated on: Oct 25, 2021 | 8:54 AM

Share

ವಿಶ್ವಕಪ್​ ಪಂದ್ಯ ಎಂದರೆ ಅಲ್ಲಿ ಹೈ ವೋಲ್ಟೇಜ್​ ಇದ್ದೇ ಇರುತ್ತದೆ. ಅದರಲ್ಲೂ ಭಾರತ vs ಪಾಕಿಸ್ತಾನ ಮ್ಯಾಚ್​ ಇದೆ ಎಂದಂರಂತೂ ಮರುಮಾತೇ ಇಲ್ಲ. ಟಿ20 ವಿಶ್ವಕಪ್​ನ ಭಾರತ ಮತ್ತು ಪಾಕಿಸ್ತಾನದ ನಡುವಣ ಮ್ಯಾಚ್​ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಇದಕ್ಕೆ ಅಂಪೈರ್ ಮಾಡಿದ ತಪ್ಪೇ ಕಾರಣ ಎಂಬುದು ಗೊತ್ತಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು. ಈ ವೇಳೆ ವಿರಾಟ್​ ಕೊಹ್ಲಿ ಹಾಗೂ ಕನ್ನಡಿಗ  ಕೆ. ಎಲ್ ರಾಹುಲ್ ಪಂದ್ಯಕಟ್ಟಲು ನಿಂತರು. ರಾಹುಲ್​ ಇತ್ತೀಚೆಗೆ ಒಳ್ಳೆಯ ಫಾರ್ಮ್​ನಲ್ಲಿದ್ದಾರೆ. ಐಪಿಎಲ್​ ಈ ಬಾರಿಯ ಸೀಸನ್​ನಲ್ಲಿ ಒಳ್ಳೆಯ ರನ್​ ಪೇರಿಸಿದ್ದರು. ಪ್ರ್ಯಾಕ್ಟೀಸ್​ ಮ್ಯಾಚ್​ನಲ್ಲೂ ರಾಹುಲ್​ ಅದ್ಭುತ ಆಟ ಪ್ರದರ್ಶಿಸಿದ್ದರು. ಆದರೆ, ಪಾಕ್​ ವಿರುದ್ಧದ ಮ್ಯಾಚ್​ನಲ್ಲಿ ಎಡವಿದ್ದರು.

3 ರನ್​ ಗಳಿಸಿದ್ದ ರಾಹುಲ್​  ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ಮೂಲಕ ಪೆವಿಲಿಯನ್​ ಸೇರಿದರು. ಆದರೆ, ಇದು ನೋ ಬಾಲ್​ ಆಗಿತ್ತು. ಇದನ್ನು ಅಂಪೈರ್​ ಗಮನಿಸಿಯೇ ಇಲ್ಲ. ಸದ್ಯ, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಅಲ್ಲದೆ, ಅಂಪೈರ್​ ನಿರ್ಧಾರದಿಂದ ಭಾರತಕ್ಕೆ ದೊಡ್ಡ ಮೋಸ ಉಂಟಾಗಿದೆ ಎಂದು ದೂರುತ್ತಿದ್ದಾರೆ.

ಇದನ್ನೂ ಓದಿ: Virat Kohli: ಟೀಂ ಇಂಡಿಯಾ ಸೋತ ಬೆನ್ನಲ್ಲೇ ಕೊಹ್ಲಿಯನ್ನು ಹೀನಾಯವಾಗಿ ಹೀಯಾಳಿಸಿದ ಪಾಕಿಸ್ತಾನ

Virat Kohli: ಪಾಕಿಸ್ತಾನ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ಖಡಕ್ ಪ್ರಶ್ನೆಗೆ ನಾಯಕ ಉತ್ತರ ಹೇಗಿತ್ತು ಗೊತ್ತಾ?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ