AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ

India vs Pakistan: ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು.

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ
ರಾಹುಲ್
TV9 Web
| Edited By: |

Updated on: Oct 25, 2021 | 8:54 AM

Share

ವಿಶ್ವಕಪ್​ ಪಂದ್ಯ ಎಂದರೆ ಅಲ್ಲಿ ಹೈ ವೋಲ್ಟೇಜ್​ ಇದ್ದೇ ಇರುತ್ತದೆ. ಅದರಲ್ಲೂ ಭಾರತ vs ಪಾಕಿಸ್ತಾನ ಮ್ಯಾಚ್​ ಇದೆ ಎಂದಂರಂತೂ ಮರುಮಾತೇ ಇಲ್ಲ. ಟಿ20 ವಿಶ್ವಕಪ್​ನ ಭಾರತ ಮತ್ತು ಪಾಕಿಸ್ತಾನದ ನಡುವಣ ಮ್ಯಾಚ್​ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಇದಕ್ಕೆ ಅಂಪೈರ್ ಮಾಡಿದ ತಪ್ಪೇ ಕಾರಣ ಎಂಬುದು ಗೊತ್ತಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು. ಈ ವೇಳೆ ವಿರಾಟ್​ ಕೊಹ್ಲಿ ಹಾಗೂ ಕನ್ನಡಿಗ  ಕೆ. ಎಲ್ ರಾಹುಲ್ ಪಂದ್ಯಕಟ್ಟಲು ನಿಂತರು. ರಾಹುಲ್​ ಇತ್ತೀಚೆಗೆ ಒಳ್ಳೆಯ ಫಾರ್ಮ್​ನಲ್ಲಿದ್ದಾರೆ. ಐಪಿಎಲ್​ ಈ ಬಾರಿಯ ಸೀಸನ್​ನಲ್ಲಿ ಒಳ್ಳೆಯ ರನ್​ ಪೇರಿಸಿದ್ದರು. ಪ್ರ್ಯಾಕ್ಟೀಸ್​ ಮ್ಯಾಚ್​ನಲ್ಲೂ ರಾಹುಲ್​ ಅದ್ಭುತ ಆಟ ಪ್ರದರ್ಶಿಸಿದ್ದರು. ಆದರೆ, ಪಾಕ್​ ವಿರುದ್ಧದ ಮ್ಯಾಚ್​ನಲ್ಲಿ ಎಡವಿದ್ದರು.

3 ರನ್​ ಗಳಿಸಿದ್ದ ರಾಹುಲ್​  ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ಮೂಲಕ ಪೆವಿಲಿಯನ್​ ಸೇರಿದರು. ಆದರೆ, ಇದು ನೋ ಬಾಲ್​ ಆಗಿತ್ತು. ಇದನ್ನು ಅಂಪೈರ್​ ಗಮನಿಸಿಯೇ ಇಲ್ಲ. ಸದ್ಯ, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಅಲ್ಲದೆ, ಅಂಪೈರ್​ ನಿರ್ಧಾರದಿಂದ ಭಾರತಕ್ಕೆ ದೊಡ್ಡ ಮೋಸ ಉಂಟಾಗಿದೆ ಎಂದು ದೂರುತ್ತಿದ್ದಾರೆ.

ಇದನ್ನೂ ಓದಿ: Virat Kohli: ಟೀಂ ಇಂಡಿಯಾ ಸೋತ ಬೆನ್ನಲ್ಲೇ ಕೊಹ್ಲಿಯನ್ನು ಹೀನಾಯವಾಗಿ ಹೀಯಾಳಿಸಿದ ಪಾಕಿಸ್ತಾನ

Virat Kohli: ಪಾಕಿಸ್ತಾನ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ಖಡಕ್ ಪ್ರಶ್ನೆಗೆ ನಾಯಕ ಉತ್ತರ ಹೇಗಿತ್ತು ಗೊತ್ತಾ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ