AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ಗಾಗಿ ಕೆಎಲ್ ರಾಹುಲ್ ಮಾಸ್ಟರ್ ಪ್ಲ್ಯಾನ್

KL Rahul: ಏಕದಿನ ವಿಶ್ವಕಪ್​ನಲ್ಲಿ ವಿಕೆಟ್ ಕೀಪಿಂಗ್ ಮೂಲಕ ಗಮನ ಸೆಳೆದಿರುವ ಕೆಎಲ್ ರಾಹುಲ್ ಟೆಸ್ಟ್​ನಲ್ಲೂ ಗ್ಲೌಸ್ ತೊಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯುವ ಬಗ್ಗೆ ಇಂಡಿಯಾ ಮ್ಯಾನೇಜ್ಮೆಂಟ್ ಜೊತೆ ರಾಹುಲ್ ಚರ್ಚಿಸಿದ್ದಾರೆ.

IPL 2024: ಐಪಿಎಲ್​ಗಾಗಿ ಕೆಎಲ್ ರಾಹುಲ್ ಮಾಸ್ಟರ್ ಪ್ಲ್ಯಾನ್
KL Rahul
TV9 Web
| Edited By: |

Updated on: Dec 14, 2023 | 2:55 PM

Share

ಐಪಿಎಲ್ (IPL 2024) ಸೀಸನ್ 17 ರಲ್ಲಿ ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ. ಈ ಬಗ್ಗೆ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಮ್ಯಾನೇಜ್ಮೆಂಟ್​ನೊಂದಿಗೆ ಚರ್ಚಿಸಿದ್ದು, ಆರಂಭಿಕನ ಬದಲಾಗಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಇಚ್ಛಿಸಿದ್ದಾರೆ ಎಂದು ವರದಿಯಾಗಿದೆ.

ಮುಂಬರುವ ಐಪಿಎಲ್​ನಲ್ಲಿ ಆರಂಭಿಕ ಸ್ಥಾನದಿಂದ ಹಿಂಬಡ್ತಿ ಪಡೆಯಲು ಕೆಎಲ್ ರಾಹುಲ್ ನಿರ್ಧರಿಸಿದ್ದು, ಅದರಂತೆ 4ನೇ ಕ್ರಮಾಂಕದಲ್ಲಿ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಲಕ್ನೋ ಸೂಪರ್ ಜೈಂಟ್ಸ್ ಮ್ಯಾನೇಜ್ಮೆಂಟ್​ ಜೊತೆ ಮಾತುಕತೆ ನಡೆಸಿದ್ದಾರೆ. ಅತ್ತ ಕಡೆಯಿಂದ ರಾಹುಲ್​ಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆಯಿದೆ.

2016 ರಲ್ಲಿ ಐಪಿಎಲ್ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಆ ಬಳಿಕ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕರಾಗಿ ಆಡಿದ್ದರು. ಆದರೆ ಈ ಬಾರಿಯ ವಿಶ್ವಕಪ್​ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದ್ದಾರೆ.

ಹೀಗಾಗಿ ಟಿ20 ಕ್ರಿಕೆಟ್​ನಲ್ಲೂ ಮಧ್ಯಮ ಕ್ರಮಾಂಕಕ್ಕೆ ಹೊಂದಿಕೊಳ್ಳಲು ಕೆಎಲ್ ರಾಹುಲ್ ಮುಂದಾಗಿದ್ದಾರೆ. ಅದರಂತೆ ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನನ್ನು 4ನೇ ಕ್ರಮಾಂಕದಲ್ಲಿ ಎದುರು ನೋಡಬಹುದು.

ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಆರಂಭಿಕರಾಗಿ ಕಣಕ್ಕಿಳಿಯಲು ಕ್ವಿಂಟನ್ ಡಿಕಾಕ್ ಹಾಗೂ ಕೈಲ್ ಮೇಯರ್ಸ್​ನಂತಹ ಸ್ಟಾರ್ ಆಟಗಾರರಿದ್ದಾರೆ. ಹೀಗಾಗಿ ರಾಹುಲ್ ಬ್ಯಾಟಿಂಗ್ ಕ್ರಮಾಂಕದ ಬದಲಾವಣೆಯು ತಂಡದ ಸಮತೋಲನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಎನ್ನಬಹುದು.

ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್:

ಏಕದಿನ ವಿಶ್ವಕಪ್​ನಲ್ಲಿ ವಿಕೆಟ್ ಕೀಪಿಂಗ್ ಮೂಲಕ ಗಮನ ಸೆಳೆದಿರುವ ಕೆಎಲ್ ರಾಹುಲ್ ಟೆಸ್ಟ್​ನಲ್ಲೂ ಗ್ಲೌಸ್ ತೊಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯುವ ಬಗ್ಗೆ ಇಂಡಿಯಾ ಮ್ಯಾನೇಜ್ಮೆಂಟ್ ಜೊತೆ ರಾಹುಲ್ ಚರ್ಚಿಸಿದ್ದಾರೆ. ಈ ಮೂಲಕ ಪರಿಪೂರ್ಣ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಾಣಿಸಿಕೊಳ್ಳಲು ಕೆಎಲ್​ಆರ್​ ಬಯಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ

ಲಕ್ನೋ ಸೂಪರ್​ ಜೈಂಟ್ಸ್ ತಂಡ: ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೆ ಗೌತಮ್, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ಪ್ರೇರಕ್ ಮಂಕಡ್, ಯುಧ್ವೀರ್ ಸಿಂಗ್, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯಿ, ಯಶ್ ಥಾಕಿ , ಅಮಿತ್ ಮಿಶ್ರಾ, ನವೀನ್-ಉಲ್-ಹಕ್.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ