AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa: 146 ರನ್ಸ್​ vs 8 ವಿಕೆಟ್: ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ?

Team India: ಟೀಮ್ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಕೆಎಲ್ ರಾಹುಲ್ ಹಾಗೂ ಮೊಹಮ್ಮದ್ ಶಮಿ. ಕೆಎಲ್ ರಾಹುಲ್ ಮೊದಲ ಇನಿಂಗ್ಸ್​ನಲ್ಲಿ 123 ರನ್​ಗಳಿಸಿದರೆ, ಶಮಿ 5 ವಿಕೆಟ್ ಕಬಳಿಸಿದ್ದರು.

India vs South Africa: 146 ರನ್ಸ್​ vs 8 ವಿಕೆಟ್: ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ?
Team India
TV9 Web
| Edited By: |

Updated on: Dec 30, 2021 | 9:14 PM

Share

ಭಾರತ- ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಐತಿಹಾಸಿಕ ಜಯವನ್ನು ತನ್ನದಾಗಿಸಿಕೊಂಡಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ಸೆಂಚುರಿಯನ್ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಗೆದ್ದಿರಲಿಲ್ಲ. ಇದೀಗ ಟೀಮ್ ಇಂಡಿಯಾ 113 ರನ್​ಗಳ ಜಯ ಸಾಧಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಅಷ್ಟೇ ಅಲ್ಲದೆ ಈ ಮೈದಾನದಲ್ಲಿ ಗೆದ್ದ ಏಷ್ಯಾದ ಮೊದಲ ತಂಡ ಎಂಬ ದಾಖಲೆಯನ್ನೂ ಕೂಡ ಭಾರತ ಬರೆದಿದೆ.

ಇನ್ನು ಟೀಮ್ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಕೆಎಲ್ ರಾಹುಲ್ ಹಾಗೂ ಮೊಹಮ್ಮದ್ ಶಮಿ. ಕೆಎಲ್ ರಾಹುಲ್ ಮೊದಲ ಇನಿಂಗ್ಸ್​ನಲ್ಲಿ 123 ರನ್​ಗಳಿಸಿದರೆ, ಶಮಿ 5 ವಿಕೆಟ್ ಕಬಳಿಸಿದ್ದರು. ಇನ್ನು 2ನೇ ಇನಿಂಗ್ಸ್​ನಲ್ಲಿ ರಾಹುಲ್ 23 ರನ್​ ಕಲೆಹಾಕಿದ್ದರು. ಇತ್ತ ಮೊಹಮ್ಮದ್ ಶಮಿ 3 ಪ್ರಮುಖ ವಿಕೆಟ್ ಉರುಳಿಸಿದ್ದರು.

ಈ ಮೂಲಕ ಎರಡು ಇನಿಂಗ್ಸ್​ಗಳಿಂದ ಕೆಎಲ್ ರಾಹುಲ್ 146 ರನ್​ಗಳಿಸಿದರೆ, ಮೊಹಮ್ಮದ್ ಶಮಿ 8 ವಿಕೆಟ್ ಉರುಳಿಸಿ ಮಿಂಚಿದ್ದರು. ಇಬ್ಬರೂ ಭರ್ಜರಿ ಪ್ರದರ್ಶನ ನೀಡಿದ ಕಾರಣ ಮ್ಯಾನ್ ಆಫ್ ದಿ ಮ್ಯಾಚ್ ಯಾರಿಗೆ ನೀಡಬೇಕೆಂಬ ಗೊಂದಲ ಕೂಡ ಏರ್ಪಟ್ಟಿತ್ತು. ಇದಾಗ್ಯೂ ಅಂತಿಮವಾಗಿ ಈ ಪಂದ್ಯದಲ್ಲಿ ಏಕೈಕ ಶತಕ ಸಿಡಿಸಿದ ಆಟಗಾರನಾಗಿ ಗುರುತಿಸಿಕೊಂಡಿದ್ದ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಯಿತು.

ಏಕೆಂದರೆ ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್​ನಲ್ಲಿ ಮೊಹಮ್ಮದ್ ಶಮಿ 5 ವಿಕೆಟ್ ಪಡೆದಿದ್ದರೆ, ದಕ್ಷಿಣ ಆಫ್ರಿಕಾ ಪರ ಲುಂಗಿ ಎನ್​ಗಿಡಿ 6 ವಿಕೆಟ್ ಕಬಳಿಸಿದ್ದರು. ಆದರೆ ಶತಕ ಬಾರಿಸಿದ್ದು ಕೆಎಲ್ ರಾಹುಲ್ ಮಾತ್ರ. ಮೊದಲ ಇನಿಂಗ್ಸ್​ನಲ್ಲಿ ರಾಹುಲ್ 123 ರನ್​ಗಳ ಅಮೋಘ ಇನಿಂಗ್ಸ್ ಆಡಿದ ಪರಿಣಾಮ ಟೀಮ್ ಇಂಡಿಯಾ ಮುನ್ನಡೆ ಸಾಧಿಸಿತ್ತು. ಈ ಇನಿಂಗ್ಸ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿತ್ತು. ಹೀಗಾಗಿ ಅಂತಿಮವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಯಿತು.

ಇದನ್ನೂ ಓದಿ:  India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(KL Rahul won the man of the match for his terrific hundred)

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ