AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2021-22: ರಣಜಿ ಕ್ವಾರ್ಟರ್ ಫೈನಲ್‌ಗೆ 8 ತಂಡ: ನಾಕ್‌ಔಟ್ ಪಂದ್ಯಕ್ಕೆ ಡೇಟ್ ಫಿಕ್ಸ್

Ranji Trophy 2021-22: ಕೊರೋನಾದ ಓಮಿಕ್ರಾನ್ ಭೀತಿಯ ಕಾರಣ, ಬಿಸಿಸಿಐ ಎರಡು ಸುತ್ತುಗಳಲ್ಲಿ ಟೂರ್ನಿ ನಡೆಸಿತ್ತು. ಮೊದಲ ಸುತ್ತಿನ 57 ಪಂದ್ಯಗಳು ನಡೆದಿದ್ದು, ಇದೀಗ ಫೈನಲ್ ಸೇರಿದಂತೆ 7 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ.

Ranji Trophy 2021-22: ರಣಜಿ ಕ್ವಾರ್ಟರ್ ಫೈನಲ್‌ಗೆ 8 ತಂಡ: ನಾಕ್‌ಔಟ್ ಪಂದ್ಯಕ್ಕೆ ಡೇಟ್ ಫಿಕ್ಸ್
Ranji Trophy 2021-22
TV9 Web
| Edited By: |

Updated on: Mar 17, 2022 | 4:58 PM

Share

ರಣಜಿ ಟ್ರೋಫಿ 2021-22 ರ ಮೊದಲ ಸುತ್ತು ಮುಕ್ತಾಯವಾಗಿದೆ. ಈಗಾಗಲೇ 8 ತಂಡಗಳು ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದೆ. ಅದರಂತೆ ಮುಂದಿನ ಸುತ್ತಿನಲ್ಲಿ ಮಧ್ಯಪ್ರದೇಶ, ಬಂಗಾಳ, ಕರ್ನಾಟಕ, ಮುಂಬೈ, ಉತ್ತರಾಖಂಡ, ಪಂಜಾಬ್, ಉತ್ತರ ಪ್ರದೇಶ, ಜಾರ್ಖಂಡ್ ತಂಡಗಳು ಸೆಣಸಲಿದೆ. ಇದಾಗ್ಯೂ ಬಿಸಿಸಿಐ ಟೂರ್ನಿಯ ಎರಡನೇ ಸುತ್ತಿಗೆ ದಿನಾಂಕವನ್ನು ಫಿಕ್ಸ್ ಮಾಡಿರಲಿಲ್ಲ. ಏಕೆಂದರೆ ಈ ಬಾರಿ ಕೊರೋನಾತಂಕದ ಕಾರಣ ರಣಜಿ ಟೂರ್ನಿಯನ್ನು ಎರಡು ಹಂತಗಳಲ್ಲಿ ಆಯೋಜಿಸಲಾಗಿದೆ. ಇದೀಗ ಮೊದಲ ಹಂತ ಮುಕ್ತಾಯವಾಗಿದ್ದು, ಇದೀಗ 2ನೇ ಹಂತವನ್ನು ನಡೆಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಐಪಿಎಲ್​ ಮಾರ್ಚ್ 26 ರಿಂದ ಶುರುವಾಗಲಿದ್ದು, ಬಹುತೇಕ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಐಪಿಎಲ್​ ಬಳಿಕ ರಣಜಿ ಕ್ವಾರ್ಟರ್​ ಫೈನಲ್ ನಡೆಸಲು ಬಿಸಿಸಿಐ ನಿರ್ಧರಿಸಿದೆ.

ಕ್ರಿಕ್‌ಬಜ್ ವರದಿಯ ಪ್ರಕಾರ, ರಣಜಿ ಟ್ರೋಫಿಯ ನಾಕ್‌ಔಟ್ ಪಂದ್ಯಗಳು ಮೇ 30 ರಿಂದ ಜೂನ್ 26 ರವರೆಗೆ ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಹವಾಮಾನದ ದೃಷ್ಟಿಯಿಂದ ಈ ಪಂದ್ಯಗಳನ್ನು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ರಣಜಿ ಟ್ರೋಫಿಯ ಮೊದಲ ಸುತ್ತು ಫೆಬ್ರವರಿ 17 ರಂದು ಪ್ರಾರಂಭಿಸಲಾಗಿತ್ತು. ಕೊರೋನಾದ ಓಮಿಕ್ರಾನ್ ಭೀತಿಯ ಕಾರಣ, ಬಿಸಿಸಿಐ ಎರಡು ಸುತ್ತುಗಳಲ್ಲಿ ಟೂರ್ನಿ ನಡೆಸಿತ್ತು. ಮೊದಲ ಸುತ್ತಿನ 57 ಪಂದ್ಯಗಳು ನಡೆದಿದ್ದು, ಇದೀಗ ಫೈನಲ್ ಸೇರಿದಂತೆ 7 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ.

ಪ್ರಸಕ್ತ ರಣಜಿ ಸೀಸನ್​ನಲ್ಲಿ ಚೇತನ್ ಬಿಶ್ತ್ 311ರ ಸರಾಸರಿಯಲ್ಲಿ ಗರಿಷ್ಠ 623 ರನ್ ಗಳಿಸಿ ಮಿಂಚಿದ್ದಾರೆ. ಮತ್ತೊಂದೆಡೆ ಸಕಿಬುಲ್ ಘನಿ 601 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಮುಂಬೈನ ಸರ್ಫರಾಜ್ ಖಾನ್ 551 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಒಟ್ಟಿನಲ್ಲಿ ಐಪಿಎಲ್​ ಬೆನ್ನಲ್ಲೇ ರಣಜಿ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಶುರುವಾಗುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(Knockout Stage Of Ranji Trophy 2021-22 To Be Held In Bengaluru)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ