AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2021-22: ರಣಜಿ ಕ್ವಾರ್ಟರ್ ಫೈನಲ್‌ಗೆ 8 ತಂಡ: ನಾಕ್‌ಔಟ್ ಪಂದ್ಯಕ್ಕೆ ಡೇಟ್ ಫಿಕ್ಸ್

Ranji Trophy 2021-22: ಕೊರೋನಾದ ಓಮಿಕ್ರಾನ್ ಭೀತಿಯ ಕಾರಣ, ಬಿಸಿಸಿಐ ಎರಡು ಸುತ್ತುಗಳಲ್ಲಿ ಟೂರ್ನಿ ನಡೆಸಿತ್ತು. ಮೊದಲ ಸುತ್ತಿನ 57 ಪಂದ್ಯಗಳು ನಡೆದಿದ್ದು, ಇದೀಗ ಫೈನಲ್ ಸೇರಿದಂತೆ 7 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ.

Ranji Trophy 2021-22: ರಣಜಿ ಕ್ವಾರ್ಟರ್ ಫೈನಲ್‌ಗೆ 8 ತಂಡ: ನಾಕ್‌ಔಟ್ ಪಂದ್ಯಕ್ಕೆ ಡೇಟ್ ಫಿಕ್ಸ್
Ranji Trophy 2021-22
TV9 Web
| Updated By: ಝಾಹಿರ್ ಯೂಸುಫ್|

Updated on: Mar 17, 2022 | 4:58 PM

Share

ರಣಜಿ ಟ್ರೋಫಿ 2021-22 ರ ಮೊದಲ ಸುತ್ತು ಮುಕ್ತಾಯವಾಗಿದೆ. ಈಗಾಗಲೇ 8 ತಂಡಗಳು ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದೆ. ಅದರಂತೆ ಮುಂದಿನ ಸುತ್ತಿನಲ್ಲಿ ಮಧ್ಯಪ್ರದೇಶ, ಬಂಗಾಳ, ಕರ್ನಾಟಕ, ಮುಂಬೈ, ಉತ್ತರಾಖಂಡ, ಪಂಜಾಬ್, ಉತ್ತರ ಪ್ರದೇಶ, ಜಾರ್ಖಂಡ್ ತಂಡಗಳು ಸೆಣಸಲಿದೆ. ಇದಾಗ್ಯೂ ಬಿಸಿಸಿಐ ಟೂರ್ನಿಯ ಎರಡನೇ ಸುತ್ತಿಗೆ ದಿನಾಂಕವನ್ನು ಫಿಕ್ಸ್ ಮಾಡಿರಲಿಲ್ಲ. ಏಕೆಂದರೆ ಈ ಬಾರಿ ಕೊರೋನಾತಂಕದ ಕಾರಣ ರಣಜಿ ಟೂರ್ನಿಯನ್ನು ಎರಡು ಹಂತಗಳಲ್ಲಿ ಆಯೋಜಿಸಲಾಗಿದೆ. ಇದೀಗ ಮೊದಲ ಹಂತ ಮುಕ್ತಾಯವಾಗಿದ್ದು, ಇದೀಗ 2ನೇ ಹಂತವನ್ನು ನಡೆಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಐಪಿಎಲ್​ ಮಾರ್ಚ್ 26 ರಿಂದ ಶುರುವಾಗಲಿದ್ದು, ಬಹುತೇಕ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಐಪಿಎಲ್​ ಬಳಿಕ ರಣಜಿ ಕ್ವಾರ್ಟರ್​ ಫೈನಲ್ ನಡೆಸಲು ಬಿಸಿಸಿಐ ನಿರ್ಧರಿಸಿದೆ.

ಕ್ರಿಕ್‌ಬಜ್ ವರದಿಯ ಪ್ರಕಾರ, ರಣಜಿ ಟ್ರೋಫಿಯ ನಾಕ್‌ಔಟ್ ಪಂದ್ಯಗಳು ಮೇ 30 ರಿಂದ ಜೂನ್ 26 ರವರೆಗೆ ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಹವಾಮಾನದ ದೃಷ್ಟಿಯಿಂದ ಈ ಪಂದ್ಯಗಳನ್ನು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ರಣಜಿ ಟ್ರೋಫಿಯ ಮೊದಲ ಸುತ್ತು ಫೆಬ್ರವರಿ 17 ರಂದು ಪ್ರಾರಂಭಿಸಲಾಗಿತ್ತು. ಕೊರೋನಾದ ಓಮಿಕ್ರಾನ್ ಭೀತಿಯ ಕಾರಣ, ಬಿಸಿಸಿಐ ಎರಡು ಸುತ್ತುಗಳಲ್ಲಿ ಟೂರ್ನಿ ನಡೆಸಿತ್ತು. ಮೊದಲ ಸುತ್ತಿನ 57 ಪಂದ್ಯಗಳು ನಡೆದಿದ್ದು, ಇದೀಗ ಫೈನಲ್ ಸೇರಿದಂತೆ 7 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ.

ಪ್ರಸಕ್ತ ರಣಜಿ ಸೀಸನ್​ನಲ್ಲಿ ಚೇತನ್ ಬಿಶ್ತ್ 311ರ ಸರಾಸರಿಯಲ್ಲಿ ಗರಿಷ್ಠ 623 ರನ್ ಗಳಿಸಿ ಮಿಂಚಿದ್ದಾರೆ. ಮತ್ತೊಂದೆಡೆ ಸಕಿಬುಲ್ ಘನಿ 601 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಮುಂಬೈನ ಸರ್ಫರಾಜ್ ಖಾನ್ 551 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಒಟ್ಟಿನಲ್ಲಿ ಐಪಿಎಲ್​ ಬೆನ್ನಲ್ಲೇ ರಣಜಿ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಶುರುವಾಗುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(Knockout Stage Of Ranji Trophy 2021-22 To Be Held In Bengaluru)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?