AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR, Head to Head: ಕಿಂಗ್ ಕೊಹ್ಲಿಗೆ ಕೋಲ್ಕತ್ತಾ ನೈಟ್ ಚಾಲೆಂಜ್; ಉಭಯ ತಂಡಗಳ ಮುಖಾಮುಖಿ ವರದಿ

RCB vs KKR, Head to Head: ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ, ಕೆಕೆಆರ್‌ 15 ಬಾರಿ ಗೆದ್ದಿದ್ದಾರೆ. ಆರ್‌ಸಿಬಿ ತಂಡ ಕೇವಲ 13 ಬಾರಿ ಗೆದ್ದಿದೆ.

RCB vs KKR, Head to Head: ಕಿಂಗ್ ಕೊಹ್ಲಿಗೆ ಕೋಲ್ಕತ್ತಾ ನೈಟ್ ಚಾಲೆಂಜ್; ಉಭಯ ತಂಡಗಳ ಮುಖಾಮುಖಿ ವರದಿ
ವಿರಾಟ್ ಕೊಹ್ಲಿ, ಇಯೋನ್ ಮಾರ್ಗನ್
Follow us
TV9 Web
| Updated By: ಪೃಥ್ವಿಶಂಕರ

Updated on: Oct 11, 2021 | 5:08 PM

ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಆವೃತ್ತಿಯ ಕೊನೆಯ ಮೂರು ಪಂದ್ಯಗಳು ಈಗ ಉಳಿದಿವೆ. ಚೆನ್ನೈ ಸೂಪರ್ ಕಿಂಗ್ಸ್ (CSK) ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ (DC) ಯನ್ನು ಸೋಲಿಸಿ ಫೈನಲ್ ತಲುಪಿದೆ. ಈಗ ದೆಹಲಿ, ಕೆಕೆಆರ್ ಮತ್ತು ಆರ್ಸಿಬಿ ಎರಡನೇ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿವೆ. ಡೆಲ್ಲಿಗೆ ಫೈನಲ್‌ಗೆ ಮುನ್ನಡೆಯಲು ಮತ್ತೊಂದು ಅವಕಾಶವಿದ್ದು, ಇಂದು ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯದ ವಿಜೇತರನ್ನು ಎದುರಿಸಲಿದೆ.

ವಿರಾಟ್ ಕೊಹ್ಲಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಇಯೋನ್ ಮಾರ್ಗನ್‌ರ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಇಂದಿನ ಪಂದ್ಯವು ಉಭಯ ತಂಡಗಳಿಗೆ ಬುದ್ಧಿವಂತಿಕೆಯ ಯುದ್ಧವಾಗಿದೆ. ಗೆದ್ದ ತಂಡವು ಫೈನಲ್ ತಲುಪಲು ದೆಹಲಿ ವಿರುದ್ಧ ಪಂದ್ಯ ಆಡಿದರೆ, ಸೋತ ತಂಡ ನೇರವಾಗಿ ಸ್ಪರ್ಧೆಯಿಂದ ಹೊರಬರುತ್ತದೆ. ಆದ್ದರಿಂದ ಇಂದಿನ ಹೋರಾಟವು ಬಹಳ ಮುಖ್ಯವಾಗಿದೆ ಮತ್ತು ಇದು ಖಂಡಿತವಾಗಿಯೂ ಕಠಿಣವಾಗಿರುತ್ತದೆ!

ಉಭಯ ತಂಡಗಳ ಮುಖಾಮುಖಿ ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ, ಕೆಕೆಆರ್‌ 15 ಬಾರಿ ಗೆದ್ದಿದ್ದಾರೆ. ಆರ್‌ಸಿಬಿ ತಂಡ ಕೇವಲ 13 ಬಾರಿ ಗೆದ್ದಿದೆ. ಇಂದಿನ ಪಂದ್ಯವು ಪ್ರಸಿದ್ಧ ಐತಿಹಾಸಿಕ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇಂದಿನ ಪಂದ್ಯದಲ್ಲಿ ಎರಡೂ ತಂಡಗಳಿಗೆ ಸಂಭಾವ್ಯ 11 ರಾಯಲ್ ಚಾಲೆಂಜರ್ಸ್ ಬೆಂಗಳೂರು- ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಕೆಎಸ್ ಭರತ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜಿ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.

ಕೆಕೆಆರ್- ಇಯಾನ್ ಮಾರ್ಗನ್ (ನಾಯಕ), ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ದಿನೇಶ್ ಕಾರ್ತಿಕ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಆಂಡ್ರೆ ರಸೆಲ್ / ಶಕೀಬ್ ಅಲ್ ಹಸನ್, ಸುನೀಲ್ ನಾರಾಯಣ್, ಲಕ್ಕಿ ಫರ್ಗ್ಯೂಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ.

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ