AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿಯಿಂದ ವಿಶೇಷ ವಸ್ತು ಪಡೆದು ಮಗನಿಗೆ ಗಿಫ್ಟ್ ಕೊಟ್ಟ ಸ್ಟಾರ್ ಆಟಗಾರ

ಸದ್ಯ ಚಾಂಪಿಯನ್ಸ್ ಟ್ರೋಫಿ ಬರುತ್ತಿದೆ. ಅದಕ್ಕೂ ಮೊದಲು ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ 3 ಏಕದಿನ ಸರಣಿಯಲ್ಲಿ ಗೆದ್ದಿದ್ದು, ಸಾಕಷ್ಟು ಹುರುಪು ನೀಡಿದೆ. ಮೂರೂ ಪಂದ್ಯವನ್ನು ಗೆದ್ದು ಇಂಗ್ಲೆಂಡ್​ನ ವೈಟ್ ವಾಶ್ ಮಾಡಿದೆ. ಈಗ ಖ್ಯಾತ ಆಟಗಾರನೋರ್ವ ವಿರಾಟ್ ಕೊಹ್ಲಿ ಅವರಿಂದ ಗಿಫ್ಟ್ ಒಂದನ್ನು ಪಡೆದು ಮಗನಿಗೆ ನೀಡಿದ್ದಾರೆ.

ಕೊಹ್ಲಿಯಿಂದ ವಿಶೇಷ ವಸ್ತು ಪಡೆದು ಮಗನಿಗೆ ಗಿಫ್ಟ್ ಕೊಟ್ಟ ಸ್ಟಾರ್ ಆಟಗಾರ
ವಿರಾಟ್
Follow us
ರಾಜೇಶ್ ದುಗ್ಗುಮನೆ
|

Updated on: Feb 14, 2025 | 12:02 PM

ವಿರಾಟ್ ಕೊಹ್ಲಿ ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರ ಬಗ್ಗೆ ಇರುವ ಕ್ರೇಜ್ ಕಡಿಮೆ ಆಗುವಂಥದ್ದಲ್ಲ. ಅವರಿಂದ ಯಾವುದಾದರೂ ವಸ್ತು ಸಿಕ್ಕರೆ ಅದನ್ನು ಪ್ರೀತಿಯಿಂದ ಆಟಗಾರರು ಇಟ್ಟುಕೊಳ್ಳುತ್ತಾರೆ. ಈಗ ಕೆವಿನ್ ಪೀಟರ್ಸನ್​ ವಿರಾಟ್ ಕೊಹ್ಲಿಯಿಂದ ಜರ್ಸಿಯನ್ನು ಗಿಫ್ಟ್ ಪಡೆದು ಅದನ್ನು ಮಗನಿಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ಜರ್ಸಿಯ ಮೇಲೆ ಕೊಹ್ಲಿಯ ಹಸ್ತಾಕ್ಷರ ಇದೆ ಅನ್ನೋದು ವಿಶೇಷ.

ಕೆವಿನ್ ಪೀಟರ್​ಸನ್ ಅವರು ಭಾರತ vs ಇಂಗ್ಲೆಂಡ್ ಒಡಿಐ ಸೀರಿಸ್​ನಲ್ಲಿ ಕಮೆಂಟೇಟರ್ ಆಗಿದ್ದರು. ಇಂಗ್ಲೆಂಡ್​ನ ಮಾಜಿ ಕ್ಯಾಪ್ಟನ್ ಆಗಿರೋ ಅವರು ಕೊಹ್ಲಿಯಿಂದ ಜೆರ್ಸಿ ಪಡೆದಿದ್ದಾರೆ. ಈ ಶರ್ಟ್​ಗೆ ಕೊಹ್ಲಿ ಅವರು ಹಸ್ತಾಕ್ಷರ ಹಾಕಿ ಕೊಟ್ಟಿದ್ದಾರೆ. ಇದನ್ನು ಕೆವಿನ್ ಅವರು ಮಗ ಡೈಲನ್​ಗೆ ನೀಡಿದ್ದಾರೆ. ಮಗ ಶರ್ಟ್ ಹಾಕಿ ನಿಂತಿರೋ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಕೆವಿನ್ ಹಂಚಿಕೊಂಡಿದ್ದಾರೆ.

ಕೆವಿನ್ ಪೀಟರ್​ಸನ್ ಹಾಗೂ ವಿರಾಟ್ ಕೊಹ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ 2009-10ರ ಸಂದರ್ಭದಲ್ಲಿ ಆರ್​​ಸಿಬಿಯಲ್ಲಿ ಒಟ್ಟಾಗಿ ಆಡಿದ್ದರು. ಈ ಮೂಲಕ ಡ್ರೆಸ್ಸಿಂಗ್​ ರೂಂನ ಒಟ್ಟಾಗಿ ಹಂಚಿಕೊಂಡಿದ್ದರು. ಈ ಗೆಳೆತನ ಈಗಲೂ ಮುಂದುವರಿದಿದೆ. ಕೊಹ್ಲಿ ಜೆರ್ಸಿ ಪಡೆದ ಕೆವಿನ್ ಮಗ ಮತ್ತಷ್ಟು ಖುಷಿ ಆಗಿದ್ದಾರೆ.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಡಬಲ್ ಶಾಕ್

ಸದ್ಯ ಚಾಂಪಿಯನ್ಸ್​ ಟ್ರೋಫಿ ಬರುತ್ತಿದೆ. ಅದಕ್ಕೂ ಮೊದಲು ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ 3 ಏಕದಿನ ಸರಣಿಯಲ್ಲಿ ಗೆದ್ದಿದ್ದು, ಸಾಕಷ್ಟು ಹುರುಪು ನೀಡಿದೆ. ಮೂರೂ ಪಂದ್ಯವನ್ನು ಗೆದ್ದು ಇಂಗ್ಲೆಂಡ್​ನ ವೈಟ್ ವಾಶ್ ಮಾಡಿದೆ. ಮೊದಲ ಪಂದ್ಯದಲ್ಲಿ ಕೊಹ್ಲಿ ಹೊರಗುಳಿದರು. ಎರಡನೇ ಪಂದ್ಯದಲ್ಲಿ ಐದು ರನ್​ಗೆ ಔಟ್ ಆದರೆ, ಮೂರನೇ ಪಂದ್ಯದಲ್ಲಿ 52 ರನ್ ಸಿಡಿಸಿದರು. ಈ ಮೂಲಕ ಏಕದಿನ ಪಂದ್ಯದಲ್ಲಿ 73 ಅರ್ಧಶತಕ ಸಿಡಿಸಿದರು. ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರಿಂದ ಸಾಕಷ್ಟು ನಿರೀಕ್ಷಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!