AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ ತಂಡಕ್ಕೆ ಮತ್ತೆ ಮೂವರು ಆಯ್ಕೆ

India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ಜರುಗಲಿದೆ.

IND vs SL: ಭಾರತ ತಂಡಕ್ಕೆ ಮತ್ತೆ ಮೂವರು ಆಯ್ಕೆ
Team India Image Credit source: BCCI
ಝಾಹಿರ್ ಯೂಸುಫ್
|

Updated on: Aug 04, 2026 | 7:32 AM

Share

ಶ್ರೀಲಂಕಾ ವಿರುದ್ಧದ ಸರಣಿಗಾಗಿ ಭಾರತ ತಂಡಕ್ಕೆ ಮತ್ತೆ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ. ಆದರೆ ಈ ಮೂವರು ಆಯ್ಕೆಯಾಗಿರುವುದು ನೆಟ್ ಬೌಲರ್​ಗಳಾಗಿ ಎಂಬುದು ವಿಶೇಷ. ದೇಶಿ ಕ್ರಿಕೆಟ್‌ನ ಸ್ಟಾರ್ ಆಲ್‌ರೌಂಡರ್‌ಗಳಾದ ತನುಷ್ ಕೋಟ್ಯಾನ್, ಹರ್ಷ್ ದುಬೆ ಹಾಗೂ ಯುವ ಸ್ಪಿನ್ನರ್ ವಿಪ್ರಾಜ್ ನಿಗಮ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಶ್ರೀಲಂಕಾದ ಸ್ಪಿನ್ ಸ್ನೇಹಿ ಪಿಚ್‌ಗಳಲ್ಲಿ ಭಾರತೀಯ ಬ್ಯಾಟರ್‌ಗಳಿಗೆ ಅತ್ಯುತ್ತಮ ತರಬೇತಿ ನೀಡುವ ಉದ್ದೇಶದಿಂದ ಈ ಮೂವರು ಸ್ಪಿನ್ನರ್‌ಗಳನ್ನು ನೆಟ್ ಬೌಲಿಂಗ್‌ಗಾಗಿ ಬಿಸಿಸಿಐ ನಿಯೋಜಿಸಿದೆ. ಅದರಂತೆ ಈ ಮೂವರು ಆಟಗಾರರು ಮಂಗಳವಾರ (ಆಗಸ್ಟ್ 4) ಸಂಜೆ ಮುಂಬೈನಿಂದ ಚಾರ್ಟರ್ಡ್ ವಿಮಾನದ ಮೂಲಕ ಟೀಮ್ ಇಂಡಿಯಾ ಜೊತೆ ಶ್ರೀಲಂಕಾಗೆ ಪ್ರಯಾಣಿಸಲಿದ್ದಾರೆ.

ಲಂಕಾ ಸ್ಪಿನ್ ಸಾಮ್ರಾಜ್ಯ:

ಶ್ರೀಲಂಕಾ ವಿರುದ್ಧದ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2025-27) ಭಾಗವಾಗಿರುವುದರಿಂದ ಭಾರತಕ್ಕೆ ಇದು ಅತ್ಯಂತ ನಿರ್ಣಾಯಕವಾಗಿದೆ. ಲಂಕಾ ನೆಲದಲ್ಲಿ ಸ್ಪಿನ್ ಬೌಲಿಂಗ್ ಎದುರಿಸುವುದು ಸದಾ ಸವಾಲಿನ ಕೆಲಸ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈ ಮೂವರು ಯುವ ಆಟಗಾರರಿಗೆ ಮಣೆ ಹಾಕಿದೆ.

  • ತನುಷ್ ಕೋಟ್ಯಾನ್: ಮುಂಬೈನ 27 ವರ್ಷದ ಈ ಆಫ್-ಸ್ಪಿನ್ ಆಲ್‌ರೌಂಡರ್ ದೇಶಿ ಕ್ರಿಕೆಟ್‌ನಲ್ಲಿ ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಈ ಹಿಂದೆ 2024ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್‌ಗೆ ಭಾರತ ತಂಡಕ್ಕೆ ಇವರು ಆಯ್ಕೆಯಾಗಿದ್ದರಾದರೂ, ಇನ್ನೂ ಅಧಿಕೃತ ಪಾದಾರ್ಪಣೆ ಮಾಡಿಲ್ಲ.
  • ಹರ್ಷ್ ದುಬೆ: ವಿದರ್ಭದ ಈ ಎಡಗೈ ಸ್ಪಿನ್ನರ್ ಇತ್ತೀಚೆಗೆ ಶ್ರೀಲಂಕಾ ‘ಎ’ ವಿರುದ್ಧ ನಡೆದ ಎರಡು ಅನ್‌ಅಫೀಶಿಯಲ್ ಟೆಸ್ಟ್ ಪಂದ್ಯಗಳಲ್ಲಿ ಭಾರತ ‘ಎ’ ತಂಡದ ಪರ ಉತ್ತಮ ಪ್ರದರ್ಶನ ನೀಡಿದ್ದರು.
  • ವಿಪ್ರಾಜ್ ನಿಗಮ್: ಈ ಇಬ್ಬರ ಜೊತೆಗೆ ಯುವ ಸ್ಪಿನ್ನರ್ ವಿಪ್ರಾಜ್ ಕೂಡ ಹಿರಿಯ ಆಟಗಾರರೊಂದಿಗೆ ಒಟ್ಟಿಗೆ ಅಭ್ಯಾಸ ನಡೆಸಿ ಅನುಭವ ಪಡೆಯಲಿದ್ದಾರೆ.

ಭಾರತ vs ಶ್ರೀಲಂಕಾ ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ ಮೈದಾನ / ಸ್ಥಳ ಸಮಯ (IST)
ಮೊದಲ ಟೆಸ್ಟ್ ಆಗಸ್ಟ್ 15 – 19, 2026 ಅಂತರರಾಷ್ಟ್ರೀಯ ಕ್ರೀಡಾಂಗಣ, ಗಾಲೆ ಬೆಳಗ್ಗೆ 10:00 ಗಂಟೆಗೆ
ಎರಡನೇ ಟೆಸ್ಟ್ ಆಗಸ್ಟ್ 23 – 27, 2026 ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC), ಕೊಲೊಂಬೊ ಬೆಳಗ್ಗೆ 10:00 ಗಂಟೆಗೆ

ಇದನ್ನೂ ಓದಿ: ರಾಜೀವ್ ಕುಮಾರ್… ಟೀಮ್ ಇಂಡಿಯಾ ಹಿಂದಿದ್ದ ಕಾಣದ ‘ಕೈ’

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಾಯಿ ಸುದರ್ಶನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ.

Follow Us
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ