AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!

Hemang Badani: ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಹೀಗಾಗಿ ಕಾರ್ಯಕ್ರಮದಲ್ಲಿ ಮುಂದುವರೆದಿರಲಿಲ್ಲ.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!
Krishnamachari Srikkanth
TV9 Web
| Edited By: |

Updated on: Aug 30, 2022 | 12:32 PM

Share

ಆಗಸ್ಟ್ 27 ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯಕ್ಕೂ ಮುನ್ನ ನಡೆದ ಟಿವಿ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಹೇಮಂಗ್ ಬದಾನಿ ಗಾಯ ಮಾಡಿಕೊಂಡಿದ್ದಾರೆ. ಆದರೆ ಈ ಗಾಯ ಬದಾನಿ ತಪ್ಪಿನಿಂದಾಗಿದ್ದಲ್ಲ. ಬದಲಾಗಿ ಜೊತೆಯಿದ್ದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಅತ್ಯುತ್ಸಾಹದಿಂದ ಉಂಟಾದ ಗಾಯವಾಗಿದೆ.  ಸ್ಟಾರ್ ಸ್ಪೋರ್ಟ್ಸ್ ತಮಿಳು ಚಾನೆಲ್​ನ ಪ್ರೀವೀವ್ ಕಾರ್ಯಕ್ರಮದಲ್ಲಿ ಕೃಷ್ಣಮಾಚಾರಿ ಶ್ರೀಕಾಂತ್ ಅವರೊಂದಿಗೆ ಲೈವ್​ನಲ್ಲಿ ಬದಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಶಾಟ್ ಅನ್ನು ವಿವರಿಸುವಾಗ  ಭಾರತದ ಮಾಜಿ ಓಪನರ್ ಶ್ರೀಕಾಂತ್ ಬ್ಯಾಟ್‌ನಿಂದ ಬದಾನಿ ಕೈಗೆ ಹೊಡೆದರು.

ಇತ್ತ ಜೋರಾಗಿಯೇ ಬಿದ್ದ ಏಟಿನಿಂದ ಬದಾನಿ ನರಳುತ್ತಿರುವುದು ಕಾಣಬಹುದು. ಅಲ್ಲದೆ ಕಾರ್ಯಕ್ರಮದಲ್ಲಿ ಮುಂದವರೆಯಲು ಹೆಣಗಾಡಿದರು. ಆ ಬಳಿಕ ಕಾರ್ಯಕ್ರಮದಿಂದ ಹೊರಹೋಗುತ್ತಿದ್ದಂತೆ ಶ್ರೀಕಾಂತ್ ಹೊಡೆದಿದ್ದು ಜೋರಾಯಿತಾ ಎಂದು ಕ್ಷಮಾಪಣೆ ಕೇಳಿದರು.

ಈ ಘಟನೆಯ ಬಳಿಕ ಹೇಮಂಗ್ ಬದಾನಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಕೈಗೆ ಉಂಟಾದ ಗಾಯದ ಕಾರಣ ಆರ್ಮ್​ ಪೌಂಚ್​ ಜೊತೆ ಕಾಣಿಸಿಕೊಂಡ ಬದಾನಿ, ಅದೃಷ್ಟವಶಾತ್ ಯಾವುದೇ ಮೂಳೆ ಮುರಿದಿಲ್ಲ. ಇದಾಗ್ಯೂ ತುಂಬಾ ನೋವಿದೆ. ಸದ್ಯ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಆ ಬಳಿಕ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್