AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!

Hemang Badani: ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಹೀಗಾಗಿ ಕಾರ್ಯಕ್ರಮದಲ್ಲಿ ಮುಂದುವರೆದಿರಲಿಲ್ಲ.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!
Krishnamachari Srikkanth
TV9 Web
| Edited By: |

Updated on: Aug 30, 2022 | 12:32 PM

Share

ಆಗಸ್ಟ್ 27 ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯಕ್ಕೂ ಮುನ್ನ ನಡೆದ ಟಿವಿ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಹೇಮಂಗ್ ಬದಾನಿ ಗಾಯ ಮಾಡಿಕೊಂಡಿದ್ದಾರೆ. ಆದರೆ ಈ ಗಾಯ ಬದಾನಿ ತಪ್ಪಿನಿಂದಾಗಿದ್ದಲ್ಲ. ಬದಲಾಗಿ ಜೊತೆಯಿದ್ದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಅತ್ಯುತ್ಸಾಹದಿಂದ ಉಂಟಾದ ಗಾಯವಾಗಿದೆ.  ಸ್ಟಾರ್ ಸ್ಪೋರ್ಟ್ಸ್ ತಮಿಳು ಚಾನೆಲ್​ನ ಪ್ರೀವೀವ್ ಕಾರ್ಯಕ್ರಮದಲ್ಲಿ ಕೃಷ್ಣಮಾಚಾರಿ ಶ್ರೀಕಾಂತ್ ಅವರೊಂದಿಗೆ ಲೈವ್​ನಲ್ಲಿ ಬದಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಶಾಟ್ ಅನ್ನು ವಿವರಿಸುವಾಗ  ಭಾರತದ ಮಾಜಿ ಓಪನರ್ ಶ್ರೀಕಾಂತ್ ಬ್ಯಾಟ್‌ನಿಂದ ಬದಾನಿ ಕೈಗೆ ಹೊಡೆದರು.

ಇತ್ತ ಜೋರಾಗಿಯೇ ಬಿದ್ದ ಏಟಿನಿಂದ ಬದಾನಿ ನರಳುತ್ತಿರುವುದು ಕಾಣಬಹುದು. ಅಲ್ಲದೆ ಕಾರ್ಯಕ್ರಮದಲ್ಲಿ ಮುಂದವರೆಯಲು ಹೆಣಗಾಡಿದರು. ಆ ಬಳಿಕ ಕಾರ್ಯಕ್ರಮದಿಂದ ಹೊರಹೋಗುತ್ತಿದ್ದಂತೆ ಶ್ರೀಕಾಂತ್ ಹೊಡೆದಿದ್ದು ಜೋರಾಯಿತಾ ಎಂದು ಕ್ಷಮಾಪಣೆ ಕೇಳಿದರು.

ಈ ಘಟನೆಯ ಬಳಿಕ ಹೇಮಂಗ್ ಬದಾನಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಕೈಗೆ ಉಂಟಾದ ಗಾಯದ ಕಾರಣ ಆರ್ಮ್​ ಪೌಂಚ್​ ಜೊತೆ ಕಾಣಿಸಿಕೊಂಡ ಬದಾನಿ, ಅದೃಷ್ಟವಶಾತ್ ಯಾವುದೇ ಮೂಳೆ ಮುರಿದಿಲ್ಲ. ಇದಾಗ್ಯೂ ತುಂಬಾ ನೋವಿದೆ. ಸದ್ಯ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಆ ಬಳಿಕ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ